ಹುಬ್ಬಳ್ಳಿ | ಸ್ಮಶಾನ ಜಾಗವಿಲ್ಲದೆ ಗ್ರಾಮಸ್ಥರ ಪರದಾಟ

Date:

ಹುಬ್ಬಳ್ಳಿಯ ಬೈರಿದೇವರಕೊಪ್ಪ ಹಾಗೂ ಸುತ್ತಮುತ್ತಲಿನ ನಿವಾಸಿಗಳು ತುಂಬಾ ದಿನಗಳಿಂದ ಸ್ಮಶಾನದ ಸಮಸ್ಯೆ ಎದುರಿಸುತ್ತಿದ್ದಾರೆ. ಇಲ್ಲಿನ ವಾರ್ಡ್‌ ನಂಬರ್‌ 35ರ ನಿವಾಸಿಗಳು ಹಲವು ವರ್ಷಗಳಿಂದ ರೈತರೊಬ್ಬರ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡುತ್ತಿದ್ದಾರೆ. ಇಷ್ಟು ವರ್ಷಗಳಾದರೂ ಸ್ಮಶಾನ ಭೂಮಿ ನೀಡಲು ಸಾಧ್ಯವಾಗಿಲ್ಲ.

- Advertisement -

ಸ್ಮಶಾನವಿಲ್ಲದೆ ಇಲ್ಲಿನ ಜನರಿಗೆ ತುಂಬಾ ತೊಂದರೆಯಾಗಿದ್ದು, ಮಳೆಗಾಲದಲ್ಲಿ ಈ ಸಮಸ್ಯೆ ಇನ್ನು ಉಲ್ಬಣವಾಗುತ್ತಿದೆ. ಗ್ರಾಮದಲ್ಲಿ ಸ್ಮಶಾನ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಅಧಿಕಾರಿಗಳಿಗೆ ಎಷೇ ಒತ್ತಾಯಿಸಿದರೂ ಈವರೆಗೂ ಅವರ ಬೇಡಿಕೆ ಇಡೇರಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬೈರಿದೇವರಕೊಪ್ಪ ಮುಖ್ಯನಗರದಿಂದ 10 ಕಿಮೀ ನಷ್ಟು ದೂರವಿದೆ. ಕಳೆದ 40 ವರ್ಷಗಳಿಂದ ಈ ಜನರು ಇಲ್ಲಿ ವಾಸಮಾಡುತ್ತಿದ್ದಾರೆ. ಸುಮಾರು 20 ಸಾವಿರ ಕುಟುಂಬಗಳು ಇಲ್ಲಿ ವಾಸವಾಗಿವೆ.

ಇಲ್ಲಿನ ನಿವಾಸಿಗಳು ತಮ್ಮ ಜಾತಿ ಮತ್ತು ಧರ್ಮದ ವಿಧಿವಿಧಾನದ ಪ್ರಕಾರ ಶವಗಳನ್ನು ಹೂಳಲು ಮತ್ತು ಸುಡಲು ಯಾವುದೇ ಸೂಕ್ತ ಸೌಕರ್ಯವಿಲ್ಲ. ಸ್ಥಳದಲ್ಲಿ ಜನರಿಗೆ ಯಾವುದೇ ಆಶ್ರಯ, ಕುಡಿಯುವ ನೀರು ಹಾಗೂ ಹೆಚ್ಚಿನ ಜನ ಸೇರಲು ಜಾಗವಿಲ್ಲದೆ ಖಾಸಗಿ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತಿದೆ. ಸ್ಮಶಾನಕ್ಕಾಗಿ ಭೂಮಿ ಮಂಜೂರು ಮಾಡಿ ಎಂದು ಇಲ್ಲಿನ ನಿವಾಸಿಗಳು ಜಿಲ್ಲಾಡಳಿತ ಮತ್ತು ಎಚ್‌ಡಿಎಂಸಿ ಅಧಿಕಾರಿಗಳಿಗೆ ಕೆಳಿಕೊಂಡಿದ್ದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಯಾವೊಬ್ಬ ಅಧಿಕಾರಿಯೂ ಕ್ರಮ ಕೈಗೊಂಡಿಲ್ಲ ಎನ್ನುವುದು ಸ್ಥಳೀಯರ ಆರೋಪ.

ಗ್ರಾಮ ಲೆಕ್ಕಿಗರೂ ನಮ್ಮ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಮಶಾನವಾಗಿಸಲು ಗ್ರಾಮದಲ್ಲಿ ಯಾವುದೇ ಸರ್ಕಾರಿ ಭೂಮಿ ಇಲ್ಲ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ನಮ್ಮ ಗ್ರಾಮದ ರೈತರು ಎಪಿಎಂಸಿಗೆ ತಮ್ಮ ಜಮೀನು ನೀಡಿದ್ದಾರೆ. ಆದರೆ, ಸ್ಮಶಾನಕ್ಕೆ ಭೂಮಿ ಇಲ್ಲ. ಗ್ರಾಮದ ಹತ್ತಿರ ಒಂದು ಕೆರೆಯಿದೆ. ಆ ಕೆರೆಯ ಸ್ಥಿತಿ ತುಂಬಾ ಕೆಟ್ಟಿದ್ದು ಆ ಜಾಗವನ್ನು ಸ್ಮಶಾನವನ್ನಾಗಿ ಪರಿವರ್ತಿಸಬಹುದು ಎಂದು ಗ್ರಾಮಸ್ಥರು ಸಲಹೆ ನೀಡುತ್ತಾರೆ.

ಕಾರ್ಪೊರೇಟರ್ ಮಲ್ಲಿಕಾರ್ಜುನ ಗುಂಡೂರು ಪತ್ರಿಕೆಗಳಿಗೆ ಮಾತನಾಡಿ, “ಸ್ಮಶಾನಕ್ಕೆ ಭೂಮಿ ಮಂಜೂರು ಮಾಡುವಂತೆ ಹುಬ್ಬಳ್ಳಿ ತಹಶೀಲ್ದಾರ್‌ಗೆ ಪತ್ರ ಬರೆದಿದ್ದೇನೆ. ಈ ಬಗ್ಗೆ ಎಚ್‌ಡಿಎಂಸಿ ಆಯುಕ್ತರೊಂದಿಗೆ ಚರ್ಚಿಸುವೆ,” ಎಂದಿರುವ ಅವರು ಸರ್ಕಾರದ ಮೇಲೆ ಒತ್ತಡ ಹೇರುವ ಭರವಸೆ ನೀಡಿದ್ದಾರೆ.

ಅಧಿಕಾರಿಗಳ ಭರವಸೆಗಳ ಮೇಲೆ 40 ವರ್ಷಗಳನ್ನು ದೂಡಿರುವ ಈ ಗ್ರಾಮಸ್ಥರ ಸಮಸ್ಯೆ ಇನ್ನಾದರೂ ಬಗೆಹರಿಯಲಿದೆಯೇ ಕಾದುನೋಡಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...