ಬಿಜೆಪಿ ಒಳಜಗಳ | ಪ್ರಭು ಚೌಹಾಣ್ ವಿರುದ್ಧ 100 ಕೋಟಿ ಮಾನಹಾನಿ ಕೇಸ್ : ಸಚಿವ ಭಗವಂತ ಖೂಬಾ

Date:

  • ಚೌಹಾಣ್‌ ಹೇಳಿಕೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ
  • ವರಿಷ್ಠರು ಅನುಮತಿ ನೀಡಿದರೆ ದೂರು ದಾಖಲಿಸುತ್ತೇನೆ

ಮಾಜಿ ಸಚಿವ ಪ್ರಭು ಚೌಹಾಣ್ ಆರೋಪ ಮೋಸ ಮತ್ತು ಕಪಟದಿಂದ ಕೂಡಿದ್ದು, ಅವರ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದೇನೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದ್ದಾರೆ.

- Advertisement -

ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರ ಜೊತೆಗೆ ಪ್ರತಿಕ್ರಿಯೆ ನೀಡಿರುವ ಅವರು, “ಮಂಡಲದ ಕಾರ್ಯಕಾರಣಿಯಲ್ಲಿ ಮಾತನಾಡುವ ಎಲ್ಲ ಮಾತು ಬಿಟ್ಟು ನನ್ನ ಮೇಲೆ ಸಾರ್ವಜನಿಕವಾಗಿ ಆರೋಪ ಮಾಡಿದ್ದಾರೆ. ಇದರಿಂದ ಆಘಾತನಾಗಿದ್ದೇನೆ. ಹೇಳಿಕೊಳ್ಳಲಾಗದಷ್ಡು ಮನಸ್ಸಿಗೆ ನೋವಾಗಿದೆ. ನನ್ನ ಕುಟುಂಬ ಕೂಡಾ ವಿಚಲಿತವಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

“ಒಂಭತ್ತು ವರ್ಷದ ಹಿಂದೆ ಇದೇ ರೀತಿ ಆರೋಪ ಮಾಡಿದ್ದರು. ನಮ್ಮ ಪಕ್ಷದಲ್ಲಿ ಈ ಎಲ್ಲ ಸಮಸ್ಯೆ ಬಗೆಹರಿಯುತ್ತವೆ. ತಪ್ಪು ತಿಳಿವಳಿಕೆ ಸರಿಯಾಗಬಹುದು ಎಂದು ಭಾವಿಸಿದ್ದೆ. ಆದರೆ ಇದು ತಂತ್ರ ಕುತಂತ್ರ ಮೋಸ ಕಪಟದಿಂದ‌ ಕೂಡಿದೆ. ಪಕ್ಷದ ವರಿಷ್ಠರ ಗಮನಕ್ಕೆ ತಂದು ಮುಂದುವರಿಯುತ್ತೇನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದೇಶದ್ರೋಹಿಗಳ ಭದ್ರತೆಗೆ ನಿಲ್ಲುತ್ತಿರುವುದು ಅಧಿಕಾರದ ದುರುಪಯೋಗ: ಕಾಂಗ್ರೆಸ್‌ ವಿರುದ್ಧ ಯತ್ನಾಳ್‌ ಕಿಡಿ

“ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಸೇವೆ ನೋಡಿ ತಮ್ಮ ಮಂತ್ರಿಮಂಡಲದಲ್ಲಿ ಅವಕಾಶ ನೀಡಿದ್ದಾರೆ. ಮಂತ್ರಿ ಮಾಡುವ ಮುನ್ನ ನನ್ನ ಚರಿತ್ರೆ ಗಮನಿಸಿದ್ದಾರೆ. ನಾನು ಜನ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಆದರೆ ಈ ಆರೋಪ ಯಾಕೆ ಮಾಡುತ್ತಿದ್ದಾರೆ ಗೊತ್ತಿಲ್ಲ” ಎಂದರು.

“ಚೌಹಾಣ್ ತಂತ್ರ ಕುತಂತ್ರದ ಆಟ ಆಡುತ್ತಿದ್ದಾರೆ. ನಮ್ಮ ನಾಯಕರು ಮಾಹಿತಿ ಪಡೆದುಕೊಂಡಿದ್ದಾರೆ. ನನ್ನ ಭಾವನೆ ಹೇಳಿಕೊಂಡಿದ್ದೇನೆ. ಪಕ್ಷದ ವೇದಿಕೆಯಲ್ಲಿ ಸತ್ಯಾಸತ್ಯತೆಯನ್ನು ವರಿಷ್ಠರು ಹೊರ ಹಾಕಲಿದ್ದಾರೆ. ನೂರು ಕೋಟಿ ಮಾನ ಹಾನಿ ಕೇಸ್ ಹಾಕಲು ನಿರ್ಧರಿಸಿದ್ದೇನೆ. ವರಿಷ್ಠರು ಅನುಮತಿ ನೀಡಿದರೆ ದೂರು ದಾಖಲಿಸುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...