- ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ
- ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತಲೆಗೆ ಗಾಯ
ಮಂಗಳೂರು ಕಮಿಷನರೇಟ್ ಅಡಿಯಲ್ಲಿರುವ ಮಂಗಳೂರು ಗ್ರಾಮಾಂತರ, ಕಾವೂರು, ಸುರತ್ಕಲ್, ಮೂಡುಬಿದಿರೆ ಹಾಗೂ ಬಜಪೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮೇ 14ರ ಬೆಳಗ್ಗೆ 6 ಗಂಟೆವರೆಗೆ ಐಪಿಸಿ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಗಳೂರು ನಗರದ ಹೊರವಲಯದ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತ ನಡುವೆ ಬುಧವಾರ ರಾತ್ರಿ ಘರ್ಷಣೆ ಸಂಭವಿಸಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ.
ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಆಗುವ ಘಟನೆಗಳು ನಡೆಯದಂತೆ ತಡೆಯುವ ಸಲುವಾಗಿ ಈ ಐದು ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಯಾಗಿರುವ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹೈಕಮಾಂಡ್ ನನ್ನ ಸಿಎಂ ಮಾಡಿದ್ರೆ ಬೇಡ ಅನ್ನೋಕೆ ಆಗುತ್ತಾ?: ಡಾ. ಜಿ ಪರಮೇಶ್ವರ್
ಬುಧವಾರ ಸಂಜೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಮೂಡುಶೆಟ್ಟೆಯಲ್ಲಿ ಕಾರಿನಲ್ಲಿ ತೆರಳುತಿದ್ದಾಗ ಗಲಾಟೆ ನಡೆದಿತ್ತು. ಈ ವೇಳೆ ಕಲ್ಲೆಸೆತದಿಂದಾಗಿ ಮೂವರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಒಬ್ಬ ಪೊಲೀಸ್ ಸಿಬ್ಬಂದಿಗೆ ಗಾಯವಾಗಿತ್ತು. ಎರಡೂ ಕಡೆಯಿಂದ ಸಾಕಷ್ಟು ಜನ ಸೇರಿದ್ದರಿಂದ ಉದ್ರಿಕ್ತ ವಾತಾವರಣ ಉಂಟಾಗಿತ್ತು.