ಬೀದರ್‌ | ಪಿಎಂಎವೈ-ಜಿ : ಜಿಲ್ಲೆಗೆ 15 ಸಾವಿರ ಮನೆ ಮಂಜೂರು : ಸಂಸದ ಸಾಗರ ಖಂಡ್ರೆ

Date:

Advertisements

ಬೀದರ್‌ ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಭಾಗಿತ್ವದಲ್ಲಿ ಜಿಲ್ಲೆಗೆ ಪ್ರಧಾನ ಮಂತ್ರಿ ಆವಾಸ್‌ ಯೋಜನೆ -ಗ್ರಾಮೀಣ (ಪಿಎಂಎವೈ-ಜಿ) ಅಡಿಯಲ್ಲಿ 15 ಸಾವಿರ ಮನೆಗಳು ಮಂಜೂರಾಗಿವೆ ಎಂದು ಬೀದರ ಸಂಸದ ಸಾಗರ ಈಶ್ವರ ಖಂಡ್ರೆ ತಿಳಿಸಿದರು.

ಸೋಮವಾರ ಭಾಲ್ಕಿಯ ಸಂಸದರ ಕಚೇರಿ ಆವರಣದಲ್ಲಿ 2024-25ನೇ ಸಾಲಿನಲ್ಲಿ ಭಾಲ್ಕಿ ತಾಲ್ಲೂಕಿನ ಗ್ರಾಮೀಣ ಭಾಗದ 665 ಫಲಾನುಭವಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಿಂದ ಮಂಜೂರಾದ ಪಿಎಂಎವೈ-ಜಿ ಮನೆಗಳ ಫಲಾನುಭವಿಗಳಿಗೆ ತಿಳುವಳಿಕೆ ಪತ್ರ ವಿತರಣೆ ಮಾಡಿ ಮಾತನಾಡಿದರು.

ಪಿಎಂಎವೈ-ಜಿ ಅಡಿಯಲ್ಲಿ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ 1.20 ಲಕ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 1.75 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಮನೆ ಮಂಜೂರಾತಿ ಸೇರಿದಂತೆ ಯಾವುದಕ್ಕೂ ಮಧ್ಯವರ್ತಿಗಳ ನಂಬಬೇಡಿ, ಮನೆಯ ಆರ್ಥಿಕ ನೆರವು ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಆಗಲಿದೆ. ಮೊದಲ ಕಂತು ಜಮೆಯಾದ ಬಳಿಕ ಮನೆ ಕಾಮಗಾರಿ ಆರಂಭಿಸತಕ್ಕದ್ದು ಎಂದರು.

Advertisements

ಭಾಲ್ಕಿ ತಾಲ್ಲೂಕಿನ ಗ್ರಾಮಾಂತರ ವ್ಯಾಪ್ತಿಗೆ ಒಟ್ಟು 3 ಸಾವಿರ ಮನೆ ಮಂಜೂರಾಗಿದ್ದು, ಈ ಪೈಕಿ ಮೊದಲ ಹಂತದ 665 ಫಲಾನುಭವಿಗಳಿಗೆ ಇಂದು ತಿಳುವಳಿಕೆ ಪತ್ರ ನೀಡಲಾಗಿದೆ. ಗ್ರಾಮೀಣ ಭಾಗದಲ್ಲಿ ಇನ್ನೂ ವಸತಿ ರಹಿತರ ಗುರುತಿಸುವಿಕೆ ಕಾರ್ಯ ನಡೆಯುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಮನೆಗಳನ್ನು ಹಂಚಿಕೆ ಮಾಡಲಾಗುವುದುʼ ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಸ್ ಟಿಕೆಟ್‌ ದರ ಹೆಚ್ಚಳ ಖಂಡಿಸಿ ಎಬಿವಿಪಿ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಭಾಲ್ಕಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಹಣಮಂತ ಚೌವ್ಹಾಣ, ಮಾಜಿ ಪುರಸಭೆ ಅಧ್ಯಕ್ಷ ಬಸವರಾಜ್ ವಂಕೆ, ಕಾಂಗ್ರೆಸ್ ಮುಖಂಡ ವಿಲಾಸರಾವ್ ಮೋರೆ, ಅಂಬಾದಾಸ್ ಕೋರೆ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳ ಫಲಾನುಭವಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X