ಜೇವರ್ಗಿ ಪುರಸಭೆಯ 16 ಜನ ಪೌರಕಾರ್ಮಿಕ ಕಾಯಂ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

Date:

Advertisements

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಪುರಸಭೆಯಲ್ಲಿ ಸುಮಾರು 15 ವರ್ಷಗಳಿಂದ ಕೆಲಸ ಮಾಡಿರುವ 16 ಜನ ಪೌರಕಾರ್ಮಿಕರನ್ನು ಖಾಲಿಯಿರುವ ಹುದ್ದೆಗಳಿಗೆ ಕೂಡಲೇ ನೇಮಕಾತಿ ಮಾಡಬೇಕೆಂದು ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಬಸವೇಶ್ವರ ವೃತ್ತದವರೆಗೆ ತೆರಳಿ ಸಮಾವೇಶಗೊಂಡಿತ್ತು. ಕೆಲ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು, ಬಳಿಕ ಸಿಎಂ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಅವರಿಗೆ ಸಲ್ಲಿಸಿದರು.

ಪೌರಕಾರ್ಮಿಕರು ಸುಮಾರು 15 ವರ್ಷಗಳಿಂದ ಜೇವರ್ಗಿ ಪಟ್ಟಣವನ್ನು ಪ್ರತಿದಿನ ಬೆಳಗಿನ ಜಾವ 5 ಗಂಟೆಗೆ ಎದ್ದು ಪಟ್ಟಣದ 23 ವಾರ್ಡಗಳ ಸ್ವಚ್ಛಗೊಳಿಸುವ ಕಾರ್ಯ ಮಾಡಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ತಮ್ಮ ಆರೋಗ್ಯ ಲೆಕ್ಕಿಸದೆ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದರು.

Advertisements

ʼಜೇವರ್ಗಿ ಪುರಸಭೆ ಅಧಿಕಾರಿಗಳು ಕಾರ್ಮಿಕರನ್ನು ಮನ ಬಂದಂತೆ ದುಡಿಸಿಕೊಂಡು ತಿಂಗಳಿಗೆ ಎರಡು-ಮೂರು ಸಾವಿರ ಕೈ ಚೀಟಿ ಮುಖಾಂತರ ಸಂಬಳ ನೀಡಿದ್ದಾರೆ. ದಲಿತ ಕುಟುಂಬದಿಂದ ಬಂದ ಪೌರಕಾರ್ಮಿಕರು ತಮ್ಮ ಬಡತನದ ಬೇಗುದಿಗೆ ಅಧಿಕಾರಿಗಳು ಕೊಟ್ಟಷ್ಟು ಸಂಬಳ ಪಡೆದು ಉಪಜೀವನ ನಡೆಸಿದ್ದರು. ಬಳಿಕ ಏಕಾಏಕಿ 17 ಜನ ಕಾರ್ಮಿಕರನ್ನು ಕೆಲಸದಿಂದ ತೆಗೆದಿದ್ದರುʼ ಎಂದು ಆರೋಪಿಸಿದರು.

ʼಜೇವರ್ಗಿ ಪುರಸಭೆಯಲ್ಲಿ ಕೆಲಸ ನಿರ್ವಹಿಸಿದ 16 ಜನ ಪೌರಕಾರ್ಮಿಕರನ್ನು ತಕ್ಷಣ ನೇಮಕಾತಿ ಮಾಡಿಕೊಳ್ಳಬೇಕು. ಪೌರಕಾರ್ಮಿಕರ ದಾಖಲಾತಿಗಳನ್ನು ನಾಶ ಮಾಡಿದ ಅಧಿಕಾರಿಗಳನ್ನು ತಕ್ಷಣವೇ ಅಮಾನತ್ತುಗೊಳಿಸಿ, ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಳ್ಳಬೇಕು. ಪುರಸಭೆಯಲ್ಲಿ ಸರಕಾರದ ನಿಯಮಗಳನ್ನು ಮೀರಿ ಹಲವು ವರ್ಷಗಳಿಂದ ಸೇವೆಯಲ್ಲಿರುವ ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆಗೊಳಿಸಬೇಕುʼ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಇದ್ದರೆ ಇರಬೇಕು ಇಂಥ ಸರ್ಕಾರಿ ಶಾಲೆ : ಹಳ್ಳಿ ಶಾಲೆಗೆ ಬಣ್ಣದ ಚಿತ್ತಾರ!

ಜೇವರ್ಗಿ ಮಾಜಿ ಶಾಸಕ ದೊಡ್ಡಗೌಡ ಪಾಟೀಲ್ ನರಿಬೋಳ ಸೇರಿದಂತೆ ಪ್ರಮುಖರಾದ ಚಂದ್ರಶೇಖರ ಹರನಾಳ, ಶಾಂತಪ್ಪ ಕೂಡಲಗಿ, ಮರೇಪ್ಪ ಬಡಿಗೇರ, ಭೀಮರಾಯ ನಗನೂರ್, ಪುಂಡಲಿಕ ಗಾಯಕವಾಡ, ಮಹೇಶ್ ರಾಠೋಡ, ಮಲ್ಲಣ್ಣ ಕೊಡಚಿ, ಶ್ರೀಹರಿ ಕರಕಿಹಳ್ಳಿ, ಸಿದ್ರಾಮ್ ಕಟ್ಟಿ, ದವಲಪ್ಪ ಮದನ, ಸಿದ್ದು ಕೆರೂರ, ಗುಂಡಪ್ಪ ಜಡಗಿ, ಶಿವಶರಣಪ್ಪ ಮಾರಡಗಿ, ಮಹೇಶ್ ಕೋಕಿಲೆ, ಪರಮಾನಂದ ಯಲಗೋಡ, ರವಿ ಕುರಳಗೇರಾ, ಅಬ್ದುಲ್ ಘನಿ, ಶಿವಶರಣಪ್ಪ ಮಂದೇವಾಲ, ಪ್ರಭಾಕರ್ ಸಾಗರ, ಯಮನೇಶ ಅಂಕಲಗಿ, ಶಿವಕುಮಾರ್ ಗೋಲಾ, ಸಿದ್ರಾಮ ಯಳಸಂಗಿ, ವಿಜಯಕುಮಾರ ಧರೇನ, ಶ್ರೀಮಂತ ಕೀಲೆದಾರ್, ಭೀಮರಾಯ ಬಳ್ಳಬಟ್ಟಿ, ಸಿದ್ದು ಶರ್ಮಾ, ಗುರುಲಿಂಗಪ್ಪ ಗೆವನಳ್ಳಿ, ಮಲ್ಲಿಕಾರ್ಜುನ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X