ಬೀದರ್‌ | 20 ಕಳ್ಳತನ ಪ್ರಕರಣ: 44 ಲಕ್ಷ ಮೌಲ್ಯದ ಸ್ವತ್ತು ಜಪ್ತಿ : ಎಸ್ಪಿ. ಚನ್ನಬಸವಣ್ಣ.ಎಸ್.ಎಲ್

Date:

Advertisements
ಬೀದರ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾದ 20 ಕಳ್ಳತನ ಪ್ರಕರಣಗಳನ್ನು ಭೇದಿಸಿ 14 ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆರೋಪಿಗಳಿಂದ 44.07 ಲಕ್ಷ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ ಎಂದು ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಹೇಳಿದರು.
ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಆವರಣದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಬೀದರ ಗಾಂಧಿ ಗಂಜ ಠಾಣಾ ವ್ಯಾಪ್ತಿಯ ಹಕ್ ಕಾಲೋನಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 7.25 ಲಕ್ಷ ರೂ. ಬೆಲೆಯ 155 ಗ್ರಾಂ. ಬಂಗಾರದ ಬಿಸ್ಕಟ್‌ಗಳು, 3 ಸಾವಿರ ನಗದು ಹಣ ಹಾಗೂ ಕಳುವು ಮಾಡಿದ ಬಂಗಾರ ಮಾರಾಟ ಮಾಡಿ ಖರೀದಿಸಿದ 2.50 ಲಕ್ಷ ರೂ. ಮೌಲ್ಯದ ಸ್ಕಾರ್ಪಿಯೋ ಕಾರು ವಶಕ್ಕೆ ಪಡೆಯಲಾಗಿದೆ. ಆರೋಪಿತರಲ್ಲಿ ಓರ್ವ ಅಪ್ರಾಪ್ತನಾಗಿದ್ದು ಅವನಿಗೆ ರಿಮ್ಯಾಂಡ್ ಹೋಮ್ ಗೆ ಒಪ್ಪಿಸಲಾಗಿದೆ” ಎಂದು ಹೇಳಿದರು.
ಹುಮನಾಬಾದ ಹಾಗೂ ಹಳ್ಳಿಖೇಡ (ಬಿ) ಠಾಣಾ ವ್ಯಪ್ತಿಯಲ್ಲಿ ನಡೆದ 8 ಕಳ್ಳತನ ಪ್ರಕಣದಲ್ಲಿ ಭಾಗಿಯಾಗಿರುವ ಓರ್ವ ಆರೋಪಿಯನ್ನು ಬಂಧಿಸಿ ಆರೋಪಿತನಿಂದ 20.10 ಲಕ್ಷ ರೂ.ಗಳ 31 ತೊಲೆ 9 ಗ್ರಾಂ ಬಂಗಾರದ ಆಭರಣಗಳು ಮತ್ತು 150 ತೊಲೆ ಬೆಳ್ಳಿಯ ಆಭರಣಗಳು ವಶಕ್ಕೆ ಪಡೆಯಲಾಗಿದೆ. ಈ ಆರೋಪಿಯು ತೆಲಂಗಾಣ ರಾಜ್ಯದಲ್ಲಿ ವಿವಿಧ 53 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ. ಬೆಮಳಖೇಡಾ ಠಾಣಾ ವ್ಯಾಪ್ತಿಯಲ್ಲಿ ನಡೆದ 6 ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 3.62 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.
“ಅದೇ ರೀತಿ ಬೀದರ ನೂತನ ನಗರ ಪೊಲೀಸ್ ಠಾಣೆ, ಮನ್ನಳಿ ಪೊಲೀಸ್ ಠಾಣೆ, ಜನವಾಡ ಪೊಲೀಸ್ ಠಾಣೆ, ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಎಂಟು ಜನ ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ 10.56 ಲಕ್ಷ ರೂ. ಬೆಲೆಯ ವಿದ್ಯುತ್ ಕಂಡಕ್ಟರ್‌ಗಳು, ಕಿರಾಣಿ ಅಂಗಡಿ ಸಾಮಾನುಗಳು ಮತ್ತು ಎತ್ತು ಮತ್ತು ಬಂಡಿ ಕೃತ್ಯಕ್ಕೆ ಬಳಸಿದ ಗೂಡ್ಸ್ ವಾಹನ ಸೇರಿದಂತೆ ಇತರೆ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ” ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬೀದರ ಪೊಲೀಸ್ ಉಪಾಧೀಕ್ಷಕ ಶಿವನಗೌಡ ಪಾಟೀಲ್, ಗಾಂಧಿ ಗಂಜ ಠಾಣೆಯ ಪೊಲೀಸ್ ನಿರೀಕ್ಷಕ ಹನುಮರಡ್ಡೆಪ್ಪ, ಬೀದರ ಗ್ರಾಮೀಣ ವೃತ್ತದ ಪೊಲೀಸ್ ನಿರೀಕ್ಷಕ ಶ್ರೀನಿವಾಸ ಅಲ್ಲಾಪೂರೆ, ನೂತನ ನಗರ ಠಾಣೆಯ ಪೊಲೀಸ್ ನಿರೀಕ್ಷಕ ವಿಜಯಕುಮಾರ, ಚಿಟಗುಪ್ಪಾ ಸಿಪಿಐ ಮಹೇಶಗೌಡ ಪಾಟೀಲ್, ಪಿಎಸ್‌ಐ ತಸ್ಲೀಂ ಸುಲ್ತಾನಾ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X