ಬೀದರ್‌ | ಮಳೆಗೆ ಒಡೆದಿದ್ದ ಕೋಹಿನೂರ್‌, ಅಟ್ಟೂರ್ ಕೆರೆಗಳ ಪುನರುಜ್ಜೀವನಕ್ಕೆ 3.85 ಕೋಟಿ ಮಂಜೂರು

Date:

Advertisements

ಕಳೆದ ತಿಂಗಳು ಸುರಿದ ಭಾರಿ ಮಳೆಯಿಂದಾಗಿ ಒಡೆದು ಹೋಗಿದ್ದ ಬಸವಕಲ್ಯಾಣ ತಾಲೂಕಿನ ಕೋಹಿನೂರ್, ಅಟ್ಟೂರ್ ಗ್ರಾಮಗಳ ಹಳೆ ಕೆರೆಗಳ ಪುನರುಜ್ಜೀವನಕ್ಕೆ ರಾಜ್ಯ ಸರ್ಕಾರ 3.85 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದು ಬೀದರ್‌ ಸಂಸದ ಸಾಗರ್‌ ಖಂಡ್ರೆ ಹೇಳಿದ್ದಾರೆ.

ಕೆರೆ ಒಡೆದ ಪರಿಣಾಮ ಸುತ್ತಲಿನ ನೂರಾರು ಎಕರೆ ಜಮೀನಿಗೆ ನೀರು ನುಗ್ಗಿ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋದ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದರು.

ಈ ಕುರಿತು ತಮ್ಮ ʼಎಕ್ಸ್‌ʼ ಖಾತೆಯಲ್ಲಿ ʼಕಳೆದ ತಿಂಗಳು ಸುರಿದ ಭಾರಿ ಮಳೆಯಿಂದಾಗಿ ಬಸವಕಲ್ಯಾಣ ತಾಲೂಕಿನ ಕೊಹಿನೂರ, ಅಟ್ಟೂರ್ ಗ್ರಾಮಗಳ ಹಳೆ ಕೆರೆಗಳು ಒಡೆದು ಹೋಗಿದ್ದವು. ಅಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಕೆರೆಗಳ ಪುನರುಜ್ಜೀವನಕ್ಕೆ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದ್ದೆ. ಕೊಟ್ಟ ಭರವಸೆ ಅಂತೆ ಕೊಹಿನೂರ, ಅಟ್ಟೂರ್ ಕೆರೆಗಳ ಪುನರುಜ್ಜೀವನಕ್ಕೆ ಕರ್ನಾಟಕ ಸರ್ಕಾರ 3.85 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆʼ ಎಂದು ಹಂಚಿಕೊಂಡಿದ್ದಾರೆ.

Advertisements

ಕೆರೆಗಳ ಪುನರುಜ್ಜೀವನಕ್ಕೆ ಅನುದಾನ ಬಿಡುಗಡೆ ಮಾಡಲು ಸಹಕರಿಸಿದ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಅನುದಾನ ಒದಗಿಸಿದ ಸಣ್ಣ ನೀರಾವರಿ ಸಚಿವ ಎನ್.ಬೋಸರಾಜು ಅವರಿಗೆ ಸಂಸದ ಸಾಗರ್‌ ಖಂಡ್ರೆ ಅವರು ಧನ್ಯವಾದ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X