ಗೌರಿಬಿದನೂರು | ಮೂವರು ಮನೆಗಳ್ಳರ ಬಂಧನ

Date:

ಮನೆಗಳ್ಳತನ ಮಾಡುತ್ತಿದ್ದ ಮೂವರು ಖತರ್ನಾಕ್‌ ಕಳ್ಳರನ್ನು ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ನಗರ ಠಾಣೆ ಪೊಲೀಸರ ವಿಶೇಷ ತಂಡ ಬಂಧಿಸಿದ್ದು, ಕಳ್ಳರಿಂದ ಸುಮಾರು 35 ಲಕ್ಷ ಮೌಲ್ಯದ ಚಿನ್ನಾಭರಣ, ನಗದನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಬೆಂಗಳೂರು ಗ್ರಾಮಾಂತರ ತಾಲೂಕಿನ ಜಿಗಣಿ ಬಳಿಯ ಹಾರೋಗದ್ದೆ ಗ್ರಾಮದ ನಿವಾಸಿ ಶಂ ನೂರುಲ್ಲಾ ಬಿನ್‌ ಫಕ್ರುದ್ದಿನ್‌(50), ವಿನೋದ್‌ ಮಾರ್ಕಕರ್‌ ಬಿನ್‌ ವೀರಭದ್ರಪ್ಪ ಮತ್ತು ಸಾಗರ್‌ ಬಂಧಿತ ಕಳ್ಳರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಈ ಮೂವರು ಸೇರಿ ಗೌರಿಬಿದನೂರು ನಗರದ ತ್ಯಾಗರಾಜ ಕಾಲೋನಿಯ ನಿವಾಸಿ ಅಶ್ವತ್ಥನಾರಾಯಣ ಶೆಟ್ಟಿ ಬಿನ್‌ ಲೇ.ಸತ್ಯನಾರಾಯಣಶೆಟ್ಟಿ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಬೀಗ ಮುರಿದು ಜ.14ರಂದು ಮನೆಯಲ್ಲಿದ್ದ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದರು. ಈ ಕುರಿತು ಸಂತ್ರಸ್ತರು ಗೌರಿಬಿದನೂರು ಠಾಣೆಯಲ್ಲಿ ಮರುದಿನ ದೂರು ನೀಡಿದ್ದರು.

ಎಸ್ಪಿ ಕುಶಾಲ್‌ ಚೌಕ್ಸೆ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದ ಚಿಕ್ಕಬಳ್ಳಾಪುರ ಪೊಲೀಸರು ಕಳ್ಳರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳರಿಂದ ಒಟ್ಟು 412 ಗ್ರಾಂ ಬಂಗಾರ, 2.5ಕೆಜಿ ಬೆಳ್ಳಿ, 2 ವಾಚ್‌ ಮತ್ತು 420ರೂಪಾಯಿ ರೂ. ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ವಿಶೇಷ ತಂಡದಲ್ಲಿ ಗೌರಿಬಿದನೂರು ವೃತ್ತದ ಸಿಪಿಐ ಕೆ. ಪಿ ಸತ್ಯನಾರಾಯಣ, ಎಸ್‌ಐಗಳಾದ ಚಂದ್ರಕಲಾ, ಗೋಪಾಲ, ರಮೇಶ್‌ ಗುಗ್ಗುರಿ, ಪ್ರಭಾಕರ್‌, ಸಿಬ್ಬಂದಿಗಳಾದ ಶ್ರೀರಾಮಯ್ಯ, ರಿಜ್ವಾನ್‌, ಶ್ರೀನಿವಾಸ್‌ರೆಡ್ಡಿ, ಅಶ್ವತ್ಥ, ಮಹಂತೇಶ್‌, ಮರಳುಸಿದ್ದೇಶ್ವರ, ಶಿವಶೇಖರ್‌, ರವಿಕುಮಾರ್‌, ಮುನಿಕೃಷ್ಣ ಅವರಿದ್ದರು. ಕಳ್ಳರನ್ನು ಬಂಧಿಸಿದ ವಿಶೇಷ ತಂಡಕ್ಕೆ ಎಸ್ಪಿ ಕುಶಾಲ್‌ ಚೌಕ್ಸೆ ನಗದು ಬಹುಮಾನವನ್ನು ಘೋಷಣೆ ಮಾಡಿದ್ದು, ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ರಾಕೇಶ್ ಕುಮಟಗಿ ನೇಮಕ

ನ್ಯಾಯ, ಸಮಾನತೆ ಹಾಗೂ ಸಂವಿಧಾನದ ಆಶಯಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಭೀಮ್ ಆರ್ಮಿ ಭಾರತ್...

ಸ್ತ್ರೀ ಸಬಲೀಕರಣಕ್ಕೆ ರಾಣಿ ಚನ್ನಮ್ಮನ ಜೀವನ, ಹೋರಾಟವೇ ಪ್ರೇರಣೆ: ಪ್ರೊ. ಸಿ.ಎಂ ತ್ಯಾಗರಾಜ

ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರು ಪ್ರತಿಪಾದಿಸಿದ ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ...

ಬಾಗಲಕೋಟೆ | ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ: ರಾಷ್ಟ್ರಮಟ್ಟದ ಸಾಧನೆಗೆ ಸಚಿವ ಕಾಶಪ್ಪನವರ ಕರೆ

ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ...