ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಪತ್ನಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿರಿಸಿದ ಪತಿ!

Date:

ಉತ್ತರಪ್ರದೇಶದ ಮೀರತ್‌ನಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಪತ್ನಿ ಹತ್ಯೆಗೈದು ಬಳಿಕ ಡ್ರಮ್‌ನಲ್ಲಿರಿಸಿದ್ದ‌ ಪ್ರಕರಣ ಮಾಸುವ‌ ಮುನ್ನವೇ‌ ಅದೇ ಮಾದರಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಆಕೆಯ ದೇಹವನ್ನು ಸೂಟ್​​ಕೇಸ್‌ನಲ್ಲಿ ತುಂಬಿಟ್ಟಿದ್ದ ಭಯಾನಕ‌ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಕಮ್ಮನಹಳ್ಳಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಮಹಾರಾಷ್ಟ್ರ ಮೂಲದ ರಾಕೇಶ್​ ಎಂಬಾತ ತನ್ನ ಪತ್ನಿ ಗೌರಿ ಸಾಂಬೆಕರ್ (32) ಎಂಬವಳನ್ನು ಕೊಲೆಗೈದು, ಬಳಿಕ ಮೃತದೇಹವನ್ನು ಸೂಟ್​​ಕೇಸ್​ನಲ್ಲಿ ತುಂಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...
1003939613

ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿ ರಾಕೇಶ್‌ನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಪತ್ನಿಯನ್ನು ಕೊಂದ ಬಳಿಕ ‘ಗೌರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ’ ಎಂದು ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಿರುವುದಾಗಿ ತಿಳಿದು ಬಂದಿದೆ. ಇದರಿಂದ ಬೆಚ್ಚಿಬಿದ್ದ ಗೌರಿ ಪೋಷಕರು ಕೂಡಲೇ ಮಹಾರಾಷ್ಟ್ರದ ಸ್ಥಳೀಯ ಪೊಲೀಸ್​ ಠಾಣೆಗೆ ತೆರಳಿ ರಾಕೇಶ್​ ಕೃತ್ಯವನ್ನು ತಿಳಿಸಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನ ಹುಳಿಮಾವು ಪೊಲೀಸರಿಗೆ ದೂರು ರವಾನಿಸಿದ್ದಾರೆ. ನಂತರ ಬೆಂಗಳೂರು ಪೊಲೀಸರು ಮನೆಗೆ ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಸ್ಥಳಕ್ಕೆ ಡಿಸಿಪಿ ಸಾರಾ ಫಾತಿಮಾ ಸಹ ಭೇಟಿ ಪರಿಶೀಲನೆ ನಡೆಸಿದ್ದಾರೆ.

1003939704

”ಮಹಾರಾಷ್ಟ್ರ ಪೊಲೀಸರು ನಮ್ಮ ಕಂಟ್ರೋಲ್​​ ರೂಂಗೆ ನೀಡಿದ ಮಾಹಿತಿ ಮೇರೆಗೆ ಹುಳಿಮಾವು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಮನೆಯ ಬಾತ್ ರೂಮ್‌ನಲ್ಲಿ‌ ಸೂಟ್ ಕೇಸ್‌ನಲ್ಲಿ‌ ಮಹಿಳೆ ಗೌರಿಯ ಮೃತದೇಹ ಪತ್ತೆಯಾಗಿದೆ. ಪರಾರಿಯಾಗಿದ್ದ ಆರೋಪಿ‌ ರಾಕೇಶ್​ನನ್ನು ವಶಕ್ಕೆ ಪಡೆಯಲಾಗಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡದ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ” ಎಂದು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದಾರೆ.

2 ವರ್ಷಗಳ ಹಿಂದೆ ಮದುವೆಯಾಗಿದ್ದ ರಾಕೇಶ್ ಹಾಗೂ ಗೌರಿ ಒಂದು ತಿಂಗಳ‌ ಹಿಂದಷ್ಟೆ ದೊಡ್ಡಕಮ್ಮನಹಳ್ಳಿಯಲ್ಲಿ ಮನೆ ಪಡೆದು ವಾಸವಿದ್ದರು. ಇಬ್ಬರೂ ಸಹ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಪ್ರಸ್ತುತ ವರ್ಕ್ ಫ್ರಂ ಹೋಮ್ ಇದ್ದ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...