ಬೀದರ್‌ | ಆಧುನಿಕ ಅನುಭವ ಮಂಟಪಕ್ಕೆ 50 ಕೋಟಿ ರೂ. ಬಿಡುಗಡೆ : ಸಚಿವ ಈಶ್ವರ ಖಂಡ್ರೆ

Date:

Advertisements

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಗಳ ಬಿಲ್ ಪಾವತಿ ಮಾಡಲು 50 ಕೋಟಿ ರೂ. ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯಯವರು ಬಿಡುಗಡೆ ಮಾಡಿದ್ದು, ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಆಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.

“ಆಧುನಿಕ ಅನುಭವ ಮಂಟಪ ಕಾಮಗಾರಿಗೆ ಕಾಂಗ್ರೆಸ್ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ ಎಂದು ವಿರೋಧ ಪಕ್ಷದ ಕೆಲವರು ವೃಥಾ ಆರೋಪ ಮಾಡುತ್ತಿರುವುದರಲ್ಲಿ ಹುರುಳಿಲ್ಲ. ಸರ್ಕಾರ ಬಸವಕಲ್ಯಾಣದ ಅಭಿವೃದ್ಧಿಗೆ ಮತ್ತು ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ಬದ್ಧವಾಗಿದೆ” ಎಂದು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಮಾರ್ಚ್ ತಿಂಗಳವರೆಗಿನ ಬಿಲ್ ಪಾವತಿ ಮಾಡಲು ಕೂಡಲೇ 50 ಕೋಟಿ ರೂ. ನೀಡಬೇಕು ಎಂದು ನಾನು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಕೂಡಲೇ ಅವರು ಹಣ ಮಂಜೂರು ಮಾಡಿದರು. ಆ ಹಣ ಜಿಲ್ಲಾಧಿಕಾರಿ ಖಾತೆಗೂ ಜಮಾ ಆಗಿದೆ. ಆದರೂ ಕೆಲವರು ಸುಳ್ಳು ಪ್ರಚಾರ ಮಾಡಿ ಜನರಲ್ಲಿ ಗೊಂದಲ ಉಂಟು ಮಾಡುವ ಕಾರ್ಯ ಮಾಡುತ್ತಿದ್ದಾರೆ. ಇದು ಅಕ್ಷಮ್ಯ ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ನ್ಯಾಯಾಲಯಗಳಲ್ಲಿ ಪೂಜೆ-ಪುನಸ್ಕಾರ ನಿಲ್ಲಿಸಿ; ಸಂವಿಧಾನಕ್ಕೆ ತಲೆಬಾಗಿ: ನ್ಯಾಯಮೂರ್ತಿ ಅಭಯ್ ಓಕಾ

“ಮುಂದಿನ ದಿನಗಳಲ್ಲಿ ಬಸವಕಲ್ಯಾಣದ ಆಧುನಿಕ ಅನುಭವ ಮಂಪಟಕ್ಕೆ ಹೆಚ್ಚಿನ ಅನುದಾನ ತಂದು, ಕಾಮಗಾರಿಗೆ ವೇಗ ನೀಡಿ, ಬಸವ ಭಕ್ತರ ಮತ್ತು ಕಲ್ಯಾಣ ಕರ್ನಾಟಕದ ಜನರ, ಜಗತ್ತಿನಲ್ಲಿ ಇರುವ ಶರಣರ ಕನಸು ನನಸು ಮಾಡಲು ಸರ್ವ ಪ್ರಯತ್ನ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಸ್ಪಷ್ಟಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X