ಬೀದರ್‌ | ಆದಾಯಕ್ಕಿಂತ 6.43 ಲಕ್ಷ ರೂ. ಅಧಿಕ ಆಸ್ತಿ; ಎಂಜಿನಿಯರ್‌ಗೆ 4 ವರ್ಷ ಜೈಲು, 25 ಲಕ್ಷ ದಂಡ

Date:

Advertisements

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಕಾರಂಜಾ ಕಾಲುವೆ ನಿರ್ಮಾಣ ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಫಿರೋಜುದ್ದಿನ್ ಖಮ್ರೋದ್ದಿನ್ ಖಾನ್ ಅವರಿಗೆ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಧೀಶರ ನ್ಯಾಯಾಲವು 4 ವರ್ಷ ಜೈಲು ಹಾಗೂ 25 ಲಕ್ಷ ರೂ. ದಂಡ ವಿಧಿಸಿದೆ.

ಆರೋಪಿಯು ಅದಾಯಕ್ಕಿಂತ 6.43 ಲಕ್ಷ ರೂ. ಹೆಚ್ಚಿನ ಅಕ್ರಮ ಆಸ್ತಿ ಹೊಂದಿರುವುದು ಸಾಬೀತು ಆಗಿರುವುದರಿಂದ ಆರೋಪಿ ವಿರುದ್ಧ ಮಂಗಳವಾರ ನ್ಯಾಯಾಧೀಶ ವಿಜಯಕುಮಾರ ಎಮ್. ಆನಂದಶೆಟ್ಟಿ ಅವರು ತೀರ್ಪು ನೀಡಿದ್ದಾರೆ. ಲಂಚ ನಿಷೇಧ ಕಾಯ್ದೆಯ ಕಲಂ 13(2) ಪ್ರಕಾರ ಶಿಕ್ಷೆ ವಿಧಿಸಲಾಗಿದೆ. ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ವೇಳೆ ದೊರೆತ ಚಿನ್ನಾಭರಣ ಹಾಗೂ ನಗದು ಹಣ ಜಪ್ತಿ ಮಾಡಲು ಆದೇಶಿಸಿದ್ದಾರೆ.

ಬೀದರ್‌ ನಗರದ ಗುರುನಗರ ಕಾಲೋನಿಯ ನಿವಾಸಿಯಾದ ಫಿರೋಜುದ್ದಿನ್ ಖಾನ್‌ 1982ರಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್‌ ಆಗಿ ಸೇವೆಗೆ ಸೇರಿದ್ದರು. ನಂತರ ಬೀದರ, ಹುಮನಾಬಾದನಲ್ಲಿ  ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ, ಕಾರಂಜಾ ಕಾಲುವೆ ನಿರ್ಮಾಣ ಯೋಜನೆ, ಕಾರಂಜಾ ಏತ ನೀರಾವರಿ, ಜಲ ಸಂಪನ್ಮೂಲ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

Advertisements

ಬೀದರ ಜಿಲ್ಲೆಯ ಕಾರಂಜಾ ಕಾಲುವೆ ನಿರ್ಮಾಣ ಯೋಜನೆಯ ಹುಮನಾಬಾದ ಕ್ಯಾಂಪ್‌ನಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಆಗಿ ಕರ್ತವ್ಯದಲ್ಲಿದಾಗ 2008ರ ಫೆ.2ರಂದು ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ನಗರದ‌ ಗುರುನಾನಕ ಕಾಲೋನಿಯ ಅವರ ಮನೆ, ನೆಹರು ಕ್ರೀಡಾಂಗಣ ಹತ್ತಿರದ ಅವರ ಮಾವ ಲೈಕೊದ್ದೀನ್ ಮನೆ ಮತ್ತು ಗೋಲೆಖಾನಾದಲ್ಲಿನ ಅಣ್ಣ ಎಮ್.ಝಡ್.ಬಾಬರ್ ಅವರ ಮನೆಗಳ ಮೇಲೆ ದಾಳಿ ನಡೆಸಿದರು. ಹುಮನಾಬಾದ ಕಛೇರಿಯಲ್ಲಿ ಸಹ ಶೋಧನೆ ನಡೆಸಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಾಗತಿಕ ಮಟ್ಟದಲ್ಲಿ ಬಸವ ಚಿಂತನೆ ತಲುಪಿಸುವುದು ಇಂದಿನ ತುರ್ತು : ಆರ್.ಕೆ.ಹುಡುಗಿ

ಆರೋಪಿಯ ಆದಾಯ, ಸ್ಥಿರಾಸ್ತಿ, ಚರಾಸ್ತಿ ಮತ್ತು ಖರ್ಚು ವೆಚ್ಚ ಲೆಕ್ಕ ಮಾಡಿದಾಗ ಅದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವುದು ಕಂಡು ಬಂದಿರುವುದರಿಂದ ಲೋಕಾಯುಕ್ತ ಡಿವೈಎಸ್‌ಪಿ ಟಿ.ಜಿ. ರಾಯ್ಕರ್ ತನಿಖೆ ನಡೆಸಿ,  ದೋಷರೋಪಣಾ ಪತ್ರ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿತ್ತು. ಲೋಕಾಯುಕ್ತ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಕೇಶವರಾವ ಶ್ರೀಮಾಳೆ ಅವರು ವಾದ ಮಂಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X