ಬೆಂಗಳೂರು | ಶೇ.60ರಷ್ಟು ಪತ್ರಕರ್ತೆಯರು ಆನ್‌ಲೈನ್‌ ದಾಳಿಗೊಳಗಾಗುತ್ತಿದ್ದಾರೆ: ಕೆ ಪಿ ಅಶ್ವಿನಿ

Date:

ಪತ್ರಕರ್ತೆಯರ ಮೇಲೆ ನಿರಂತರವಾಗಿ ಆನ್‌ಲೈನ್‌ನಲ್ಲಿ ದಾಳಿ ನಡೆಸಲಾಗುತ್ತಿದೆ. ಈ ಬಗ್ಗೆ ನಾನು ನಡೆಸಿದ ಅಧ್ಯಯನದಲ್ಲಿ ಶೇ.60ರಿಂದ 70ರಷ್ಟು ಪತ್ರಕರ್ತೆಯರು ತಮ್ಮ ವರದಿ, ಲೇಖನಗಳ ಕಾರಣಕ್ಕಾಗಿ ಆನ್‌ಲೈನ್‌ನಲ್ಲಿ ದಾಳಿಗೊಳಗಾಗಿರುವ ಅಂಶ ಬಹಿರಂಗವಾಗಿದೆ ಎಂದು ವಿಶ್ವಸಂಸ್ಥೆಯ ವರ್ಣಭೇದ ನೀತಿ ಸದಸ್ಯೆ ಹಾಗೂ ಮಾನವ ಹಕ್ಕುಗಳ ತಜ್ಞೆ ಕೆ ಪಿ ಅಶ್ವಿನಿ ಹೇಳಿದರು.

- Advertisement -

ಬೆಂಗಳೂರು ನಗರದಲ್ಲಿ ಕರ್ನಾಟಕ ಪತ್ರಕರ್ತೆಯರ ಸಂಘ ಗುರುವಾರ ಆಯೋಜಿಸಿದ್ದ ನಾಗಮಣಿ ಎಸ್. ರಾವ್ ದತ್ತಿ ಉಪನ್ಯಾಸ ಹಾಗೂ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ‘ಮಾಧ್ಯಮದಲ್ಲಿ ಮಹಿಳಾ ಪ್ರಾಮುಖ್ಯತೆ ಮತ್ತು ಜವಾಬ್ದಾರಿ’ ವಿಷಯ ಕುರಿತು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ ತನ್ನದೇ ಧ್ವನಿಯನ್ನು ಕಾಪಾಡಿಕೊಂಡು, ಸ್ವತಂತ್ರವಾಗಿ ಯೋಚಿಸಿ, ಬದುಕಿನ ನೈಜ ಅನುಭವಗಳನ್ನು ಪ್ರಾಮಾಣಿಕವಾಗಿ ದಾಖಲಿಸುವ ಬರಹಗಾರರು ಎಷ್ಟು ಮುಖ್ಯರಾಗುತ್ತಾರೆ ಎಂಬುದಾಗಿದೆ. ತಂತ್ರಜ್ಞಾನ...

ಹಿಂದೂ ಕೋಡ್ ಬಿಲ್ ಹೋರಾಟಕ್ಕೆ 75 ವರ್ಷ: ಸಮಾನತೆಯ...

ಅಂಬೇಡ್ಕರ್ ಅವರ ದೃಷ್ಟಿಯಲ್ಲಿ ಹಿಂದೂ ಕೋಡ್ ಬಿಲ್ ಕೇವಲ ಮಹಿಳಾ ಹಕ್ಕುಗಳ ಮಸೂದೆಯಾಗಿರಲಿಲ್ಲ; ಅದು ಶತಮಾನಗಳಿಂದ ಬೇರೂರಿದ್ದ ಜಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಪ್ರಬಲ ಅಸ್ತ್ರವೂ ಆಗಿತ್ತು. ಜಾತಿ ವ್ಯವಸ್ಥೆಯು ಜೀವಂತವಾಗಿರುವುದೇ 'ಸಜಾತೀಯ...

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್...

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ ಅದು ಕೋಟ್ಯಂತರ ಜನರ ಬದುಕು. ಆ ಬದುಕಿನ ಮೇಲೆ ಯಾವುದೇ ಹೆಚ್ಚುವರಿ ಹೊರೆ ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ನಿಜವಾದ ಜವಾಬ್ದಾರಿ. ಒಂದು...

ಇದನ್ನೂ ಓದಿ : ಬೆಂಗಳೂರು | ಭ್ರಷ್ಟ ಅಧಿಕಾರಿಯ ಮನೆಯಲ್ಲಿ ಚಿನ್ನ, ಬೆಳ್ಳಿಗಳ ರಾಶಿ: ಬೆಚ್ಚಿಬಿದ್ದ ಲೋಕಾಯುಕ್ತ ಅಧಿಕಾರಿಗಳು!

“ಇತ್ತೀಚೆಗಷ್ಟೇ ಡೇಟಿಂಗ್ ಆ್ಯಪ್ ಬಗ್ಗೆ ಬರೆದ ತಳಸಮುದಾಯದ ಪತ್ರಕರ್ತೆಯೊಬ್ಬರ ಮೇಲೂ ನಿರಂತರ ದಾಳಿ ನಡೆಸಲಾಗಿತ್ತು. ಆದರೆ, ಆಕೆ ಕಾರ್ಯನಿರ್ವಹಿಸುವ ಮಾಧ್ಯಮ ಸಂಸ್ಥೆ ಟ್ರೋಲ್ ಮಾಡುವವರಿಗೆ ಕಾನೂನು ಸಮರದ ಎಚ್ಚರಿಕೆ ನೀಡಿದ ಮೇಲಷ್ಟೇ ಅದು ನಿಂತಿತು. ಈ ರೀತಿಯ ಬೆಂಬಲದ ವಾತಾವರಣ ಎಲ್ಲ ಮಾಧ್ಯಮ ಸಂಸ್ಥೆಗಳಲ್ಲೂ ಇರಬೇಕು” ಎಂದು ಆಶಿಸಿದರು.

“ಕಳೆದ ಮೂರು ದಶಕಗಳಲ್ಲಿ ಮಾಧ್ಯಮರಂಗ ವೇಗವಾಗಿ ಬೆಳೆದಿದೆ. ಆದರೆ, ಜಾಗತಿಕ ಮಟ್ಟಕ್ಕೆ ಹೋಲಿಸಿದರೆ ಭಾರತೀಯ ಮಾಧ್ಯಮಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ತೃಪ್ತಿಕರವಾಗಿಲ್ಲ. ಅದರಲ್ಲೂ ಕೋವಿಡ್ ನಂತರದ ದಿನಗಳಲ್ಲಿ ಪತ್ರಕರ್ತೆಯರು ತಮ್ಮ ವೈಯಕ್ತಿಕ ಬದುಕು ಹಾಗೂ ವೃತ್ತಿ ಎರಡನ್ನೂ ನಿಭಾಯಿಸಲಾಗದೇ ಹೆಚ್ಚಿನ ಸಂಖ್ಯೆಯಲ್ಲಿ ವೃತ್ತಿಯನ್ನು ತೊರೆದಿರುವುದು ವಿಷಾದನೀಯ” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ನಬಾರ್ಡ್ ಸಾಲ ಖೋತಾ ಮಾಡಿದ ಮೋದಿ ಸರ್ಕಾರ ರೈತಪರವೇ?

ಕಾರ್ಯಕ್ರಮದಲ್ಲಿ ವಿವಿಧ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆಯರಾದ ಆರ್ ಪೂರ್ಣಿಮಾ, ಎಚ್ ಎಲ್ ಸೀತಾದೇವಿ, ಎಚ್ ಎನ್ ಆರತಿ, ಶಾಂತಕುಮಾರಿ ಕೆ, ಭಾರತಿ ಹೆಗಡೆ, ರಶ್ಮಿ ಎಸ್, ಮಂಜುಳಾ ಕಿರುಗಾವಲು, ಮಂಜುಳಾ ಹುಲಿಕುಂಟೆ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಕರ್ತ ವಿ ಟಿ ರಾಜಶೇಖರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ದತ್ತಿನಿಧಿ ಸ್ಥಾಪಕಿ ನಾಗಮಣಿ ಎಸ್ ರಾವ್, ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ʼನಿನ್ನನ್ನು ಪಾಕಿಸ್ತಾನಕ್ಕೆ ಕಣ್ಮರೆ ಮಾಡುವೆನುʼ: ಮಹಿಳೆಗೆ ಕಿರುಕುಳ, ಎಫ್‌ಐಆರ್

ಬೆಂಗಳೂರು ಮಹಿಳೆಗೆ ಆಕಸ್ಮಿಕವಾಗಿ ಪರಿಚಯವಾದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ʼಸ್ನೇಹವನ್ನು ಮುರಿದರೆ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು: ರೈತರ ಸಮಸ್ಯೆಗಳಿಗೆ ಧ್ವನಿ ಯಾರು?

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ...

ಬೆಂಗಳೂರು ಸಂಚಾರ ನರಕ: 4 ಕಿ.ಮೀ. ದೂರದ ಮನೆ ತಲುಪಲು 2.5 ಗಂಟೆ ರಸ್ತೆಯಲ್ಲೇ ಕಳೆದ ವಿದ್ಯಾರ್ಥಿಗಳು

ಬೆಂಗಳೂರಿನಲ್ಲಿರುವ ರಾಜ್ಯ ಹೆದ್ದಾರಿ-35ರ (SH-35) ವರ್ತೂರು-ಗುಂಜೂರು ಮಾರ್ಗದಲ್ಲಿ ಸಂಚರಿಸುವ ನೂರಾರು ಶಾಲಾ...

ತೆರಿಗೆ ವಂಚನೆ ಪ್ರಕರಣ ಮುಚ್ಚಿಹಾಕಲು ಲಂಚ: ಜಿಎಸ್‌ಟಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಪೊಲೀಸರು, ಬೆಂಗಳೂರಿನ ಕೋರಮಂಗಲದಲ್ಲಿ ಕೇಂದ್ರ ಜಿಎಸ್‌ಟಿ ಇಲಾಖೆಯ ಸೂಪರಿಂಟೆಂಡೆಂಟ್ ಮತ್ತು...