ಲಂಚ ಪಡೆಯದೇ 600 ಕೋಟಿ ರೂ. ಬಿಲ್‌ ಬಿಡುಗಡೆ: ಕೆಂಪಣ್ಣ

Date:

Advertisements

ಲೋಕೋಪಯೋಗಿ ಇಲಾಖೆಯಡಿ ರಾಜ್ಯದಲ್ಲಿ ಒಂದು ಕೋಟಿ ರೂ.ಗಿಂತ ಕಡಿಮೆ ಬಿಲ್‌ ಇದ್ದ 1054 ಸಣ್ಣ ಗುತ್ತಿಗೆದಾರರ ಒಟ್ಟು 600 ಕೋಟಿ ರೂ. ಬಾಕಿ ಬಿಲ್‌ಅನ್ನು ಲಂಚ ಪಡೆಯದೆ ಇಲಾಖೆ ಬಿಡುಗಡೆ ಮಾಡಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಲೋಕೋಪಯೋಗಿ ಇಲಾಖೆಯು ಯಾವುದೇ ಲಂಚ ಪಡೆಯದೆ, 600 ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿದೆ. ಇದೇ ರೀತಿ ಎಲ್ಲ ಇಲಾಖೆಗಳೂ ಬಿಲ್ ಬಿಡುಗಡೆ ಮಾಡಲಿ” ಎಂದು ಅವರು ಹೇಳಿದರು.

“ಗುತ್ತಿಗೆದಾರರ ಬಾಕಿ ಬಿಲ್‌ ಬಿಡುಗಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಹಕಾರ ನೀಡುತ್ತಿದ್ದಾರೆ. ಬಿಬಿಎಂಪಿಯಲ್ಲಿ ಬಾಕಿ ಉಳಿದಿರುವ ಬಿಲ್‌ಗಳ ಬಿಡುಗಡೆ ಮಾಡುವುದಾಗಿ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

Advertisements

ಹಿಂದಿನ ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್‌ ಪಡೆದು ಬಿಲ್‌ ಪಾವತಿ ಮಾಡಲಾಗುತ್ತಿದೆ. ಸಚಿವರು ಕಮಿಷನ್ ಪಡೆದು, ಬಿಲ್‌ ಬಿಡುಗಡೆ ಮಾಡುತ್ತಿದ್ದಾರೆ ಎಂದು ಕೆಂಪಣ್ಣ ಆರೋಪಿಸಿದ್ದರು. ಮಾತ್ರವಲ್ಲದೆ, ಇತ್ತೀಚೆಗೆ ಕಮಿಷನ್‌ ಬಗ್ಗೆ ಮಾತನಾಡಿದ್ದ ಕೆಂಪಣ್ಣ, ಇಂದಿನ ಕಾಂಗ್ರೆಸ್‌ ಸರ್ಕಾರದಲ್ಲಿಯೂ ಕಮಿಷನ್ ಇದೆ. ಬಿಜೆಪಿ ಸರ್ಕಾರದಲ್ಲಿ ಶಾಸಕರು, ಸಚಿವರು ಕಮಿಷನ್ ಕೇಳುತ್ತಿದ್ದರು. ಈಗ, ಅಧಿಕಾರಿಗಳು ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದೀಗ, ಕಮಿಷನ್ ಪಡೆಯದೆ ಲೋಕೋಪಯೋಗಿ ಇಲಾಖೆ ಬಿಲ್‌ ಪಾವತಿ ಮಾಡಿದೆ ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣರನ್ನು ನಂಬೋದು ಬಲು ಕಷ್ಟವಾಗಿದೆ.. ಏಕೆಂದ್ರೆ, ಬಿಜೆಪಿಯವರು 40 ಪರ್ಸೆಂಟ್ ಕಮಿಷನ್ ಕೇಳ್ತಾರೆ ಅಂತಾ ಬೊಬ್ಬೆ ಹೊಡಿತ್ತಿದ್ರು. ಆನಂತರದಲ್ಲಿ ಬಂದ ಕಾಂಗ್ರೆಸ್ಸಿಗರು ಅವರಿಗಿಂತಲೂ ಹೆಚ್ಚು ಅಂದ್ರು. ಆನಂತರದಲ್ಲಿ ಕಾಂಗ್ರೆಸ್ ನಾಯಕ ಬಿ. ಶಿವರಾಂ ಅವರು ಕೆಂಪಣ್ಣ ಹೇಳಿದ್ದು ಸರಿ ಎನ್ನುವಂತೆ ತಿಳಿಸಿದ್ರು. ಈ ಕೆಂಪಣ್ಣ ಎಲ್ಲಾ ಗುತ್ತಿಗೆದಾರರ ಬಿಲ್ ಗಳು ಕ್ಲಿಯರ್ ಆಗ್ತಾ ಬರುತ್ತಿದ್ದಂತೆ ಎಷ್ಟು ಪರ್ಸೆಂಟ್ ಕಮಿಷನ್ ಅನ್ನೋದು ಗೊತ್ತಿಲ್ಲ… ಅದ್ರೆ ಅಧಿಕಾರಿಗಳು ಮಾತ್ರ ಪ್ಯಾಕೇಜ್ ಕೇಳ್ತಿದ್ದಾರೆ ಅಂತಾ ಹೊಸ ರಾಗ ಎಳಿತ್ತಿದ್ದಾರೆ. .. ಕೆಂಪಣ್ಣ ನಿಮ್ಮಂತವರು ತುಂಬಾನೇ ಡೇಂಜರ್ ಕಂಡ್ರಿ..ಏಕೆಂದ್ರೆ ಸರ್ಕಾರಗಳ ಮೇಲೆ ಕಮಿಷನ್ ಆರೋಪ ಮಾಡ್ತಿದ್ದ ನೀವು.. ಈಗ ಗೊತ್ತಿಲ್ಲ ಅಂತಿದ್ದೀರಿ.. ನಿಮ್ಮನ್ನು ಹೇಗೆ ನಂಬೋದು ಕೆಂಪಣ್ಣ…ಮೊದಲ ನಿಮ್ಮನ್ನು ಮಂಪರ ಪರೀಕ್ಷೆಗೊಳಪಡಿಸಿ ಸತ್ಯ ಹೊರತೆೆಗೆಯಬೇಕಿದೆ….

    ಎಂ.ಶಿವರಾಂ.. ಬೆಂಗಳೂರು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X