ಕೊಪ್ಪಳ | ಗುಟ್ಕಾ ತಂದುಕೊಡದ ಕಾರಣಕ್ಕೆ 7 ವರ್ಷದ ಬಾಲಕಿ ಹತ್ಯೆ: ಆರೋಪಿ ಬಂಧನ

Date:

Advertisements

ಕೊಪ್ಪಳ ತಾಲ್ಲೂಕಿನ ಕಿನ್ನಾಳ ಗ್ರಾಮದಲ್ಲಿ ಏಪ್ರಿಲ್‌ನಲ್ಲಿ ನಡೆದಿದ್ದ 7 ವರ್ಷದ ಅನುಶ್ರೀ ಮಡಿವಾಳರ ಎಂಬ ಬಾಲಕಿಯ ಕೊಲೆ ಪ್ರಕರಣ ಭೇದಿಸಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಭಾನುವಾರ ಬಂಧಿಸಿದ್ದಾರೆ.

ಗ್ರಾಮದ ಸಿದ್ದಲಿಂಗಯ್ಯ ನಾಯ್ಕಲ್ ಎಂಬಾತ ಆರೋಪಿ ಬಾಲಕಿಯ ಮನೆ ಪಕ್ಕದಲ್ಲಿಯೇ ವಾಸವಾಗಿದ್ದ. ಗ್ರಾಮದ ರಾಘವೇಂದ್ರ ಮಡಿವಾಳರ ಅವರ ಪುತ್ರಿ ಅನುಶ್ರೀ ಏಪ್ರಿಲ್ 19ರಂದು ಮಧ್ಯಾಹ್ನ ಕಾಣೆಯಾಗಿದ್ದಳು. ಎರಡು ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದಳು. ಗುಟ್ಕಾ ತಂದುಕೊಡದ ಕಾರಣಕ್ಕೆ ಆರೋಪಿ ಕೃತ್ಯ ಎಸಗಿದ್ದಾನೆ ಎನ್ನುವ ಮಾಹಿತಿ ತನಿಖೆಯಿಂದ ಗೊತ್ತಾಗಿದೆ.

“ಆರೋಪಿ ಸಿದ್ದಲಿಂಗಯ್ಯ ಘಟನೆ ನಡೆದ ಬೆಳಿಗ್ಗೆ ಒಂದು ಸಲ ಅನುಶ್ರೀಗೆ ಹೇಳಿ ಗುಟ್ಕಾ ತರಿಸಿಕೊಂಡಿದ್ದ. ಅದೇ ದಿನ ಮತ್ತೊಂದು ಸಲ ಗುಟ್ಕಾ ತಂದುಕೊಡುವಂತೆ ಹೇಳಿದಾಗ ಇದಕ್ಕೆ ಅನುಶ್ರೀ ಒಪ್ಪಲಿಲ್ಲ. ಇದೇ ಸಿಟ್ಟಿಗೆ ಆರೋಪಿ ಪಕ್ಕದಲ್ಲಿದ್ದ ಕಟ್ಟಿಗೆಯಿಂದ ಬಾಲಕಿಯ ತಲೆಗೆ ಜೋರಾಗಿ ಹೊಡೆದಿದ್ದರಿಂದ ಅನುಶ್ರೀ ಮೃತಪಟ್ಟಿದ್ದಾಳೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜನನಿಬಿಡ ಪ್ರದೇಶದಲ್ಲಿಯೇ ಈ ಘಟನೆ ನಡೆದಿದ್ದರೂ ಆರೋಪಿಯನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ಸವಾಲಿನ ಕೆಲಸವಾಗಿತ್ತು. ಇದಕ್ಕಾಗಿ ವಿಶೇಷ ತಂಡವನ್ನೂ ರಚಿಸಲಾಗಿತ್ತು.

Advertisements
Bose Military School

ಈ ಸುದ್ದಿ ಓದಿದ್ದೀರಾ? ಚುನಾವಣಾ ಫಲಿತಾಂಶಕ್ಕೂ ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

ಕಾರ್ಯಾಚರಣೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್ ಆರ್., ಡಿವೈಎಸ್‌ಪಿ ಮುತ್ತಣ್ಣ ಸರವಗೋಳ, ಮಹಿಳಾ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಆಂಜನೇಯ ಡಿ.ಎಸ್., ಯಲಬುರ್ಗಾ ವೃತ್ತದ ಸಿಪಿಐ ಮೌನೇಶ್ವರ ಪಾಟೀಲ, ಕೊಪ್ಪಳ ಗ್ರಾಮೀಣ ಸಿಪಿಐ ಸುರೇಶ ಡಿ. ತನಿಖೆ ವೇಳೆ ಗ್ರಾಮೀಣ ಠಾಣೆಯ ಪಿಎಸ್‌ಐ ಡಾಕೇಶ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ʼಬಯಲು ಸೀಮೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿʼ

ಸುಮಾರು ವರ್ಷಗಳಿಂದ ಬಯಲು ಸೀಮೆ ಜಿಲ್ಲೆಗಳಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಹೋರಾಟ...

ಉಡುಪಿ | ಜಗತ್ತಿನಾದ್ಯಂತ ಪ್ರತೀ ವರ್ಷ ನೂರಾರು ಮುದ್ರಣ ಪತ್ರಿಕೆಗಳು ಮುಚ್ಚಿಕೊಳ್ಳುತ್ತಿವೆ – ರಾಜಾರಾಂ ತಲ್ಲೂರು

ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ...

ಹಾವೇರಿ | ತಹಶೀಲ್ದಾರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕು ತಹಶೀಲ್ದಾರ ಕಚೇರಿಗೆ ಮಂಗಳವಾರ ಜಿಲ್ಲಾಧಿಕಾರಿ ಡಾ....

Download Eedina App Android / iOS

X