ಯಾದಗಿರಿ | ಬೆಂಕಿ ಅವಘಡ; ನಾಲ್ಕು ಅಂಗಡಿಗಳು ಭಸ್ಮ

Date:

Advertisements

ಪ್ಲೈವುಡ್ ವರ್ಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿ ಸುಮಾರು ನಾಲ್ಕು ಅಂಗಡಿಗಳು ಬೆಂಕಿಗಾಹುತಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ನಡೆದಿದೆ.

ನಗರದ ಗ್ಯಾರೇಜ್ ಲೈನ್‌ನ ಪ್ಲೈವುಡ್ ವರ್ಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಕಿ ನಂದಿಸಲು ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಸಿಬಂದಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿ ಅಗ್ನಿಯನ್ನು ನಿಯಂತ್ರಿಸುವಷ್ಟರಲ್ಲಿ ನಾಲ್ಕು ಅಂಗಡಿಗಳ ಅಪಾರ ಸಾಮಗ್ರಿಗಳು ಸುಟ್ಟು ಭಸ್ಮವಾಗಿವೆ.

ಪ್ಲೈವುಡ್ ಅಂಗಡಿಯ ಸಹಿತ ಪೂರ್ಣಿಮಾ ಹೊಟೇಲ್, ಬೈಕ್ ದುರಸ್ತಿ ಗ್ಯಾರೇಜ್ ಮತ್ತು ರೇಡಿಯಂ ವರ್ಕ್ಸ್ ಅಂಗಡಿಗಳಿಗೆ ಬೆಂಕಿ ತಾಗಿದ್ದು, ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.

Advertisements

ಪೊಲೀಸ್ ಸಿಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿ ಶಾಮಕ ದಳದವರಿಗೆ ಅನುವು ಮಾಡಿಕೊಟ್ಟರು. ಬೆಂಕಿಯ ಕೆನ್ನಾಲಿಗೆಯನ್ನು ಕಂಡ ನಗರದ ಜನತೆ ಗಾಬರಿಯೊಳಗಾಗಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕಳೆದ ವರ್ಷವೂ ಇವೇ ಅಂಗಡಿಗಳಿಗೆ ಬೆಂಕಿ ತಾಗಿತ್ತು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಗದಗ | ಮನರೇಗಾ ಯೋಜನೆ ಅನುಷ್ಠಾನ; ಗದಗ ಜಿಲ್ಲಾ ಪಂಚಾಯತಿಗೆ ಎರಡನೇ ಸ್ಥಾನ

“ಗ್ಯಾರೇಜ್‌ನಲ್ಲಿ ಒಂದು ಬುಲೆಟ್ ಹಾಗೂ ನಾಲ್ಕು ಇತರೆ ಬೈಕ್‌ಗಳು ಸುಟ್ಟು ಕರಕಲಾಗಿವೆ. ಹಾಗೆಯೇ ಇತರೆ ಅಂಗಡಿಗಳಲ್ಲಿರುವ ಸಾಮಾಗ್ರಿಗಳು ಸುಟ್ಟು ಅಪಾರ ನಷ್ಟವಾಗಿದೆ” ಎಂದು ಅಂಗಡಿ ಮಾಲೀಕರು ಅಲವತ್ತುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X