ಚಾಮರಾಜನಗರ ಜಿಲ್ಲೆ, ಹನೂರು ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರಿಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಹಶೀಲ್ದಾರ್ ಕೆ ಎನ್ ಚೈತ್ರ ಧ್ವಜಾರೋಹಣ ನೆರವೇರಿಸಿದರು.
ಶಾಸಕ ಎಂ ಆರ್ ಮಂಜುನಾಥ್ ಮಾತನಾಡಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಅದ್ದೂರಿಯಾಗಿ ಆಚರಣೆ ಮಾಡಿರುವದು ಬಹಳ ಸಂತೋಷವಾಗಿದೆ, ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹನೀಯರ ನೆನಪು ಮಾಡಿಕೊಳ್ಳುವ ದಿನವಾಗಿದೆ, ಅವರ ತ್ಯಾಗ, ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಹೋರಾಟಕ್ಕಾಗಿ ತಮ್ಮ ಬದುಕನ್ನು ಮುಡಿಪಾಗಿಟ್ಟರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತಿನಂತೆ ಶಿಕ್ಷಣವನ್ನು ತಮ್ಮ ಲಾಭಕ್ಕೆ ಬಳಸಿ ಕೊಳ್ಳದೆ, ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಿ. ದೇಶದ ಜನರ ಬದುಕಿಗೆ ಸರ್ಕಾರ ಮುಂದಾಗ ಬೇಕಾಗಿದೆ. ಯುವಕರು ದೇಶದ ಸಂಪತ್ತು, ಈ ನಿಟ್ಟಿನಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ ಎಂದರು.

ಹನೂರು ಗುಡ್ಡ ಗಾಡು ಪ್ರದೇಶವಾಗಿದೆ. ಸಾಕಷ್ಟು ಬೌಗೊಳಿಕವಾಗಿ ದೊಡ್ಡ ಕ್ಷೇತ್ರ. ಆದ್ದರಿಂದ, ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆ ಹರಿಸಬೇಕಿದೆ. ಮಹನೀಯರ ತತ್ವ, ಆದರ್ಶಗಳನ್ನು ಮೈಗೂಡಿಸಿ ಕೊಳ್ಳಬೇಕಾಗಿದೆ. ಕ್ಷೇತ್ರದ ಜನರು ನನಗೆ ಶಾಸಕನಾಗಲು ಅವಕಾಶ ನೀಡಿದ್ದೀರಿ ಅದರಂತೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮ ವಹಿಸುತ್ತೇನೆ ಎಂದರು.
ಹನೂರು ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಅಂಜಲಿ ವಿ. ಎಲ್ಲೆಮಾಳ, ಚೆನ್ನಾಲಿಂಗನಹಳ್ಳಿ ಪ್ರಿಯ ದರ್ಶಿನಿ. ಸುಸೈನ ಮಾರಹಳ್ಳಿ ಮೂರು ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಿದರು. 13 ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವೀಲ್ ಚೇರ್ ವಿತರಣೆ ಮಾಡಲಾಯಿತು ಜೊತೆಗೆ ಸ್ವಚ್ಛತಾ ಕಾರ್ಮಿಕ ಮಹಿಳೆ ರಾಮಿ ಅವರಿಗೆ ಸನ್ಮಾನ ಮಾಡಲಾಯಿತು. ಅಗ್ನಿ ಶಾಮಕ ಸಿಬ್ಬಂದಿಯ ಅತುತ್ಯಮ ಸೇವೆ ಗುರುತಿಸಿ ಪೆರಿಯಾ ನಾಯಗಮ್ ರವರನ್ನು ಸನ್ಮಾನ ಮಾಡಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಸಂಭ್ರಮದ ಜನಸ್ವಾತಂತ್ರ್ಯೋತ್ಸವ; ಸಂವಿಧಾನ ಸಂರಕ್ಷಣಾ ಪಡೆಗೆ ಚಾಲನೆ

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕೆ. ಎನ್ ಚೈತ್ರ, ಪ.ಪಂ ಅಧ್ಯಕ್ಷೆ ಮುಮ್ತಾಜ್ ಬಾನು, ಉಪಾಧ್ಯಕ್ಷ ಆನಂದ್ ಕುಮಾರ್, ತಾ. ಗ್ಯಾರಂಟಿ ಯೋಜನೆಯ ಅಧ್ಯಕ್ಷ ರಾಚಪ್ಪ, ಪ.ಪಂ ಸದಸ್ಯೆ ಪವಿತ್ರ ಪ್ರಸನ್ನ, ಇ ಓ ಉಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಎ ಇ ಇ ರಂಗಸ್ವಾಮಿ, ಪೊಲೀಸ್ ಇನ್ಸ್ಪೆಕ್ಟರ್ ಆನಂದ್ ಮೂರ್ತಿ, ಅರೋಗ್ಯ ಇಲಾಕಾಧಿಕಾರಿ ಡಾ. ಪ್ರಕಾಶ್, ಪ.ಪಂ ಸದಸ್ಯರಾದ ಮಂಜುಳಾ, ರೂಪ, ಮಹೇಶ್, ಸಂಪತ್ ಕುಮಾರ್, ಆರ್ ಐ ಶೇಷಣ್ಣ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.