ಬೆಳಗಾವಿ | 5 ವರ್ಷದಲ್ಲಿ ವಸತಿ ಶಾಲೆಗಳ 92 ಮಂದಿ ವಿದ್ಯಾರ್ಥಿಗಳ ಆತ್ಮಹತ್ಯೆ

Date:

Advertisements

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ (ಕೆಆರ್‌ಇಎಸ್‌)ಯಿಂದ ನಡೆಸುತ್ತಿರುವ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಕಳೆದ ಐದು ವರ್ಷಗಳಲ್ಲಿ 92 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಈ ಪೈಕಿ 29 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲವು ವಿದ್ಯಾರ್ಥಿಗಳು ಮನೆಗೆ ಹಿಂದಿರುಗುವಾಗ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ವಿಧಾನಸಭೆಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಸಲ್ಲಿಸಿದ 2023-24ರ ಮಧ್ಯಂತರ ವರದಿಯಲ್ಲಿ ತಿಳಿಸಿದೆ.

ಬೆಳಗಾವಿ ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾದ ವರದಿಯಲ್ಲಿ ತಿಳಿಸಿದ್ದು, ಇಂತಹ ಸಾವುಗಳ ಬಗ್ಗೆ ವಿವರವಾದ ತನಿಖೆಯ ಅಗತ್ಯವನ್ನು ಒತ್ತಿ ಹೇಳಿದ ಸಮಿತಿಯು, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯವು ತನಿಖೆಯನ್ನು ನಡೆಸಿದೆಯೇ ಎಂಬ ಬಗ್ಗೆ ಪೋಷಕರಿಂದ ಮಾಹಿತಿಯನ್ನು ಪಡೆಯುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಯಾವುದೇ ತನಿಖೆ ನಡೆಸದಿದ್ದರೆ, ಸರ್ಕಾರವು ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕೆಂದು ಸಮಿತಿ ಹೇಳಿದೆ.

ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ವಿಶೇಷ ಸಮಾಲೋಚನೆ ಅಧಿವೇಶನಗಳನ್ನು ನಡೆಸುವಂತೆ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

Advertisements

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ನೀಡಲಾದ 2.5 ಲಕ್ಷ ಕೋಟಿ ರೂ.ಗಳಲ್ಲಿ ಅವರಿಗೆ ಎಷ್ಟು ತಲುಪಿದೆ ಎಂಬ ಪ್ರಶ್ನೆಗಳನ್ನು ಸಮಿತಿಯು ಎತ್ತಿದ್ದು, ಈ ಹಣವನ್ನು ಸರಿಯಾಗಿ ಬಳಸುವುದನ್ನು ಖಚಿತಪಡಿಸಿಕೊಳ್ಳಲು ಹೊಸ ಕಾರ್ಯವಿಧಾನವನ್ನು ಕೋರಿದೆ.

“ಕರ್ನಾಟಕದಲ್ಲಿ 1.8 ಕೋಟಿ ಎಸ್‌ಸಿ/ಎಸ್‌ಟಿಗಳಿದ್ದಾರೆ. 2013 ರಿಂದ, ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಅಡಿಯಲ್ಲಿ ಎಸ್‌ಸಿ/ಎಸ್‌ಟಿಗಳಿಗೆ ಸರ್ಕಾರ 2.5 ಲಕ್ಷ ಕೋಟಿ ರೂ. ಹಣ ನೀಡಿದೆ. ಆದರೆ, ಆ ಹಣ ಅವರಿಗೆ ತಲುಪುತ್ತಿಲ್ಲ. ಈ ಹಣವನ್ನು ಸರಿಯಾಗಿ ಬಳಸಿಕೊಳ್ಳುವಂತೆ ನೋಡಿಕೊಳ್ಳಲು ಹೊಸ ಕಾರ್ಯವಿಧಾನದ ಅಗತ್ಯವಿದೆ” ಎಂದು ವರದಿ ಹೇಳಿದೆ.

“ನಕಲಿ ಎಸ್‌ಸಿ/ಎಸ್‌ಟಿ ಜಾತಿ ಪ್ರಮಾಣ ಪತ್ರಗಳ ಸಮಸ್ಯೆ ಅವ್ಯಾಹತವಾಗಿ ಮುಂದುವರೆದಿದ್ದು, 175 ತಹಶೀಲ್ದಾರ್‌ಗಳು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕುರುಬರು, ಬ್ರಾಹ್ಮಣರು, ವೀರಶೈವರು, ಮುದಲಿಯಾರುಗಳು ಮತ್ತು ಇತರರು ಎಸ್‌ಸಿ/ಎಸ್‌ಟಿ ಪ್ರಮಾಣಪತ್ರಗಳನ್ನು ಪಡೆದಿದ್ದಾರೆ” ಎಂದು ವರದಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಕೀಲನ ಬರ್ಬರ ಹತ್ಯೆ; ಆರೋಪಿಗಳಿಗಾಗಿ ಶೋಧ

206 ಶಾಲೆಗಳಲ್ಲಿ ಕೇವಲ 93 ಮಹಿಳಾ ವಾರ್ಡನ್‌ಗಳು ಮಾತ್ರ ಬಾಲಕಿಯರಿಗೆ ಲಭ್ಯರಿದ್ದಾರೆ ಎಂದು ಸಮಿತಿಯು ಕೆಆರ್‌ಇಐಎಸ್ ಶಾಲೆಗಳಲ್ಲಿ ಬಾಲಕಿಯರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಪ್ರತಿ ಶಾಲೆಗೆ ಮಹಿಳಾ ಹೋಂಗಾರ್ಡ್‌ಗಳನ್ನು ನೇಮಿಸುವಂತೆ ಸಮಿತಿ ಸರ್ಕಾರವನ್ನು ಕೋರಿದೆ.

“ಸಮಾಜ ಕಲ್ಯಾಣ ಇಲಾಖೆಯು ನಡೆಸುತ್ತಿರುವ ಹಲವಾರು ವಸತಿ ನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಭಯಾನಕ ಸ್ಥಿತಿಯಲ್ಲಿವೆ. ಸರಿಯಾದ ಶೌಚಾಲಯಗಳು ಮತ್ತು ಸ್ನಾನಗೃಹಗಳಿಲ್ಲದೆ, ವಿದ್ಯಾರ್ಥಿಗಳು ಬಯಲಿನಲ್ಲಿ ಸ್ನಾನ ಮಾಡುತ್ತಿದ್ದಾರೆ” ಎಂದು ಸಮಿತಿಯ ವರದಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X