ಕಲಬುರಗಿ | ಜೈಲಿನಿಂದ ಬಿಡುಗಡೆಯಾದ 93 ವರ್ಷದ ವೃದ್ಧೆ ಖೈದಿ ಮನೆಯಲ್ಲಿ ನಿಧನ

Date:

Advertisements

ಸೊಸೆಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಪೇರೋಲ್‌ ಮೇಲೆ ಬಿಡುಗಡೆಯಾಗಿದ್ದ ಜೇವರ್ಗಿ ಪಟ್ಟಣದ ವೃದ್ಧೆ ಖೈದಿ ನಾಗಮ್ಮ ಅಣ್ಣಾರಾವ್‌ (93) ಶುಕ್ರವಾರ ಮನೆಯಲ್ಲಿಯೇ ನಿಧನರಾಗಿದ್ದಾರೆ.

ನ.16ರಂದು ಸಾರ್ವಜನಿಕ ಅಹವಾಲು ಸ್ವೀಕರಿಸಲು ಜಿಲ್ಲೆಗೆ ಆಗಮಿಸಿದ್ದ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಕಲಬುರಗಿ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ್ದರು. ಕಳೆದ ಒಂದು ವರ್ಷದಿಂದ ಜೈಲಿನಲ್ಲಿದ್ದ ವೃದ್ಧೆ ನಾಗಮ್ಮ ಅವರನ್ನು ಭೇಟಿ ಮಾಡಿದ್ದರು. ಅನಾರೋಗ್ಯದಿಂದ ಹಾಸಿಗೆಯಲ್ಲಿದ್ದ ನಾಗಮ್ಮ ಅವರ ಸ್ಥಿತಿಯನ್ನು ಕಂಡು ಉಪಲೋಕಾಯುಕ್ತರು ಮರುಗಿದ್ದರು. ತಕ್ಷಣವೇ ಕಾನೂನು ಸೇವಾ ಪ್ರಾಧಿಕಾರಕ್ಕೆ ಕರೆ ಮಾಡಿ ಮಹಿಳೆಯ ಶಿಕ್ಷೆ ಪ್ರಮಾಣ ಕಡಿತಗೊಳಿಸಿ ಬಿಡುಗಡೆಗೊಳಿಸಲು ಮೇಲ್ಮನವಿ ಸಲ್ಲಿಸಲು ಉಪಲೋಕಾಯುಕ್ತರು ಸಲಹೆ ನೀಡಿದ್ದರು.

ನ್ಯಾಯಮೂರ್ತಿ ಬಿ.ವೀರಪ್ಪ ಅವರು ಕಲಬುರಗಿ ಎಸ್ಪಿ ಅವರಿಗೆ ವೃದ್ಧೆಯನ್ನು ಪೆರೋಲ್‌ ಮೇಲೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರು. ನ.28ರಂದು ವೃದ್ಧೆಗೆ ಒಂದು ತಿಂಗಳ ಪೆರೋಲ್‌ ಮಂಜೂರಾಗಿದ್ದರಿಂದ ಅವರ ಇಬ್ಬರು ಹೆಣ್ಣು ಮಕ್ಕಳು ಬಂದು ಮನೆಗೆ ಕರೆದುಕೊಂಡು ಹೋಗಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಆನ್‌ಲೈನ್ ಜೂಜಿನಲ್ಲಿ ₹80 ಲಕ್ಷ ಹಣ ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆ

ಸಾವಿನ ಕೊನೆ ಕ್ಷಣದಲ್ಲಿ ಮನೆ ಸೇರಬೇಕೆಂದು ಕೋರಿಕೆ ಇಟ್ಟಿದ್ದ 93 ವರ್ಷದ ವೃದ್ಧೆಯ ಕೊನೆ ಆಸೆಯನ್ನು ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ಈಡೇರಿಸಿದ್ದಾರೆ. ಆದರೆ ಮನೆಗೆ ತೆರಳಿದ ವಾರದ ಬಳಿಕ ವೃದ್ಧೆ ನಾಗಮ್ಮ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಆ ಮೂಲಕ ಅಂತಿಮ ಕ್ಷಣ ಮನೆಯಲ್ಲಿ ಕಳೆಯಬೇಕೆಂಬ ಅವರ ಆಸೆಯನ್ನು ಈಡೇರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X