ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆ | ಮಣಿಕಂಠ ರಾಠೋಡ ವಿರುದ್ಧ ಪಾಟ್ನಾದಲ್ಲಿ ಪ್ರಕರಣ ದಾಖಲು

Date:

Advertisements
  • ಖರ್ಗೆ, ಹೆಂಡತಿ ಮಕ್ಕಳನ್ನು ಸಾಫ್‌ ಮಾಡ್ತಿನಿ ಎಂದಿದ್ದ ಆರೋಪಿ
  • ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ

‘ಖರ್ಗೆ, ಹೆಂಡತಿ ಮಕ್ಕಳನ್ನು ಸಾಫ್ ಮಾಡ್ತೀನಿ’ ಎಂದಿರುವ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ವಿರುದ್ಧ ಪಟ್ನಾದಲ್ಲಿ ಪ್ರಕರಣ ದಾಖಲಾಗಿದೆ.

ಬಿಹಾರ ಕಾಂಗ್ರೆಸ್ ಘಟಕವು ಪೊಲೀಸರಿಗೆ ಈ ಸಂಬಂಧ ದೂರು ದಾಖಲಿಸಿದ್ದು, ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬವನ್ನು ಮುಗಿಸುವ ಉದ್ದೇಶವನ್ನು ವ್ಯಕ್ತಪಡಿಸಿರುವುದು ಖಂಡನೀಯ. ನಾವು ಈ ಬಗ್ಗೆ ಎಫ್‌ಐಆರ್‌ ದಾಖಲಿಸಿದ್ದೇವೆ ಎಂದು ಕಾಂಗ್ರೆಸ್ ನಾಯಕ ಅಜಿತ್ ಶರ್ಮಾ ಹೇಳಿದ್ದಾರೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ವಿಧಾನಸಭಾ (ಎಸ್‌ಸಿ ಮೀಸಲು) ಕ್ಷೇತ್ರದಲ್ಲಿ ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಸ್ತುವಾರಿ ಪ್ರಿಯಾಂಕ್‌ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಣಿಕಂಠ ರಾಠೋಡ, ವ್ಯಕ್ತಿಯೊಬ್ಬರ ಜೊತೆಗಿನ ಮೊಬೈಲ್‌ ಸಂಭಾಷಣೆ ವೇಳೆ ಹೇಳಿದ್ದಾರೆ ಎನ್ನಲಾದ ಮಾತು ದೇಶದಾದ್ಯಂತ ವಿವಾದ ಸೃಷ್ಟಿ ಮಾಡಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದವರನ್ನು ಬಂಧಿಸಿ – ದೇವನೂರರ ನೇತೃತ್ವದಲ್ಲಿ ಪ್ರತಿಭಟನೆ

ಆದರೆ, ಕಾಂಗ್ರೆಸ್‌ ನಾಯಕರ ಆರೋಪವನ್ನು ಅಲ್ಲಗಳೆದಿದ್ದ ಮಣಿಕಂಠ ರಾಠೋಡ, ನನ್ನ ವಿರುದ್ಧ ಸುಳ್ಳು ಆರೋಪ ಮಾಡಲು ಯಾರೋ ಮಾತನಾಡಿರುವ ಆಡಿಯೋ ಬಹಿರಂಗಪಡಿಸಲಾಗಿದೆ. ನಾನು ಮಾತನಾಡಿದ ಆಡಿಯೋ ಇದ್ದರೆ ಹಾಕಿ ಎಂದು ಪ್ರಿಯಾಂಕ್‌ ಖರ್ಗೆಗೆ ತಿರುಗೇಟು ನೀಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X