ಬೀದರ್ ತಾಲೂಕಿನ ಬುಧೇರಾ ಗ್ರಾಮದಲ್ಲಿ ಧನರಾಜ್ ತಮ್ಮ ಮಗುವನ್ನು ಮಲಗಿಸಲು ಮನೆಯ (ತಗಡು) ಛಾವಣಿಗೆ ಕಟ್ಟಿದ್ದ ಜೋಕಾಲಿ, ರಭಸದಿಂದ ಬಂದ ಗಾಳಿಗೆ ತಗಡು ಮಗುವಿನ ಸಮೆತ ತೂರಿ ಹೊರಗಿರುವ ಘಟನೆ ನಡೆದಿದೆ.
ಮಗುವಿಗೆ ಗಂಭೀರ ಪೆಟ್ಟಾಗಿರುವ ಸುದ್ದಿ ತಿಳಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ತಕ್ಷಣ ಸ್ಪಂದಿಸಿ ಸಕಾಲಕ್ಕೆ ಅಂಬುಲೆನ್ಸ್ ಕಳಿಸಿ ಮಗುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದರು.
ಶಾಸಕರು ಬೆಂಗಳೂರಿನಲ್ಲಿ ಇರುವ ಕಾರಣ ಬೀದರ್ ತಹಶೀಲ್ದಾರ್ ದಿಲಶಾದ್ ಮಹತ್ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಘಟನೆ ನಡೆದಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಲು ತಿಳಿಸಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಹ ಪರಿಶೀಲನೆ ನಡೆಸಲು ಸೂಚಿಸಿದ್ದಾರೆ.
ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆ ಎಲ್ಲ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಅಧಿಕಾರಿಗಳೆ ತಿಳಿಸಿದ್ದಾರೆ. ಜಿಲ್ಲಾ ಆಸ್ಪತ್ರೆಗೆ ಕರೆ ಮಾಡಿ ಗಾಯಾಳು ಮಗುವಿಗೆ ಉತ್ತಮ ಚಿಕಿತ್ಸೆ ನೀಡಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ವಿಪರೀತ ಗಾಳಿ ಮಳೆಯಿಂದ ಅನಾಹುತ ಸಂಭವಿಸುವ ಸಾಧ್ಯತೆ ಇದ್ದು, ಎಲ್ಲ ಗ್ರಾಮಗಳಲ್ಲಿ ಜನರು ಎಚ್ಚರ ವಹಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮನವಿ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಬೈಕ್ ಅಪಘಾತ; ಸಾಹಿತಿ ಸಾವು