ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿರುವ ವೃದ್ಧ ಮಹಿಳೆ: ಕಣ್ಣು ಹಾಯಿಸುವರೇ ಅಧಿಕಾರಿಗಳು?

Date:

Advertisements

ಅಧಿಕಾರಿಗಳ ಎಡವಟ್ಟು, ನಿರ್ಲಕ್ಷ್ಯದಿಂದಾಗಿ ಅನ್ನಭಾಗ್ಯ, ಗೃಹಲಕ್ಷ್ಮಿ, ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತವಾಗಿರುವ ನಿರ್ಗತಿಕ ವೃದ್ಧ ಮಹಿಳೆಯೊಬ್ಬರು ಸಂಕಷ್ಟದಲ್ಲಿ ಬದುಕು ದೂಡುತ್ತಿದ್ದಾರೆ.

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಮೋರಂಬಿ ಗ್ರಾ.ಪಂ.ವ್ಯಾಪ್ತಿಗೆ ಒಳಪಡುವ ರಾಚಪ್ಪ ಗೌಡಗಾಂವ್ ಗ್ರಾಮದಲ್ಲಿ ಜೀಜಾಬಾಯಿ ಮಾಧವರಾವ್ ಎನ್ನುವ ನಿರ್ಗತಿಕ ವಯೋವೃದ್ಧ ಮಹಿಳೆ ಸರ್ಕಾರದ ಸೌಲಭ್ಯ ಸಿಗದೇ ತುತ್ತು ಅನ್ನಕ್ಕಾಗಿ ಪರದಾಡುವಂತಾಗಿದೆ.

ಜೀಜಾಬಾಯಿಗೆ ಓರ್ವ ಮಗನಿದ್ದ, ಆತ ಎಂಟತ್ತು ವರ್ಷದ ಹಿಂದೆ ಸಾವನಪ್ಪಿದ್ದಾನೆ, ಸೊಸೆ ಬೇರೆ ಕಡೆ ವಾಸವಾಗಿದ್ದಾರೆ. ಸಕ್ಕರೆ ಕಾರ್ಖಾನೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗಂಡನನ್ನು ಕಳೆದುಕೊಂಡ ಜೀಜಾಬಾಯಿ, ಸದ್ಯ ತಗಡಿನ ಶೀಟ್ ಇರುವ ಮನೆಯಲ್ಲಿ ಒಂಟಿ ಜೀವನ ನಡೆಸುತ್ತಿದ್ದಾರೆ. ಅಜ್ಜಿಗೆ 64 ವರ್ಷದವಾದರೂ ʼಕಷ್ಟ ಎಲ್ಲರಿಗೂ ಬರುತ್ತದೆʼ ಎಂದು ಹೆದರದೇ ಕೂಲಿಗೆ ಹೋಗುವುದು ಅನಿವಾರ್ಯವಾಗಿದೆ.

Advertisements

ʼಈ ಅಜ್ಜಿಗೆ ಇಲ್ಲಿಯವರೆಗೆ ಯಾವುದೇ ಸರಕಾರಿ ಸೌಲಭ್ಯಗಳು ದೊರಕದೇ ಇರುವುದು ವಿಪರ್ಯಾಸ. ಇವರ ಬಳಿ ಚುನಾವಣೆ ಚೀಟಿ, ಆಧಾರ್‌ ಚೀಟಿ, ಬ್ಯಾಂಕ್‌ ಪಾಸ್‌ ಬುಕ್‌ ಇದೆ. ಈ ಹಿಂದೆ ಅಂತ್ಯೋದಯ ಪಡಿತರ ಚೀಟಿ ಸಹ ಇತ್ತು. ಆದರೆ ಕಂದಾಯ ಇಲಾಖೆ ಅಧಿಕಾರಿಗಳ ಎಡವಟ್ಟಿನಿಂದ ಅಂತ್ಯೋದಯ ಪಡಿತರ ಚೀಟಿ ರದ್ದಾಗಿದ್ದು, ಅಜ್ಜಿಯ ಹೆಸರು ಬಿಪಿಎಲ್ ಚೀಟಿ ಪಟ್ಟಿಗೆ ಸೇರ್ಪಡೆಯಾಗಿದೆ. ಇದರಿಂದಾಗಿ ಕಳೆದ 2 ವರ್ಷದಿಂದ ಅನ್ನಭಾಗ್ಯ ಯೋಜನೆಯ ಅಕ್ಕಿ ಕೂಡ ನೀಡುತ್ತಿಲ್ಲ. ಇನ್ನು ವೃದ್ಧಾಪ್ಯ ವೇತನ, ವಿಧವಾ ವೇತನ, ಗೃಹಲಕ್ಷ್ಮಿ ಯೋಜನೆಯಿಂದ ವಂಚಿತಗೊಂಡಿದ್ದಾರೆ.

ʼಗಂಡ, ಮಗನನ್ನು ಕಳೆದುಕೊಂಡು ಒಬ್ಬಂಟಿಯಾಗಿ ಬದುಕುತ್ತಿದ್ದೇನೆ. ನನಗೆ ಒಂದು ಗುಂಟೆ ಜಮೀನು ಕೂಡ ಇಲ್ಲ. ಆದರೆ ಕಳೆದ ಎರಡು ವರ್ಷದಿಂದ ಇರುವ ಉಚಿತ ರೇಷನ್‌ ಕಾರ್ಡ್‌ ಕಟ್‌ ಮಾಡ್ಯಾರ್. ಹಿಂಗಾಗಿ ತಿಂಗಳ ರೊಕ್ಕ, ಗೃಹಲಕ್ಷ್ಮಿ, ರೇಷನ್‌ ಏನೂ ಬರಲ್ಲ.ಮೊದಲೇ ಕೂಲಿ ಮಾಡೋಕೆ ಕೈಲಾಗಲ್ಲ, ಬದುಕೋದು ಭಾಳ್‌ ಕಷ್ಟ ಆಗ್ಯಾದ್. ಈಗಾದರೂ ಅಧಿಕಾರಿಗಳು‌ ಹೊಸ ರೇಷನ್‌ ಕಾರ್ಡ್‌ ಮಾಡ್ಸಿ, ತಿಂಗಳ ರೊಕ್ಕ ಕೊಡಲಿʼ ಎಂದು ವೃದ್ಧ ಮಹಿಳೆ ಜೀಜಾಬಾಯಿ ಈ ದಿನ.ಕಾಮ್‌ ಜೊತೆಗೆ ಮಾತನಾಡಿ ಅಳಲು ತೋಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಶಾಸಕ ಮುನಿರತ್ನ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸುವಂತೆ ಮುಖ್ಯಮಂತ್ರಿಗೆ ಮನವಿ

ಈ ಬಗ್ಗೆ ಭಾಲ್ಕಿ ತಹಶೀಲ್ದಾರ್‌ ಮಲ್ಲಿಕಾರ್ಜುನ್‌ ವಡ್ಡನಕೇರಿ ಅವರಿಗೆ ವಿಚಾರಿದಾಗ, ʼಜೀಜಾಬಾಯಿ ಅವರ ಪಡಿತರ ಚೀಟಿ ಬದಲಾವಣೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಿ ಹೊಸ ರೇಷನ್‌ ಕಾರ್ಡ್‌ ಬದಲಾವಣೆ ಮಾಡಿಕೊಡಲಾಗುವುದು. ರೇಷನ್‌ ಕಾರ್ಡ್‌ ಬಂದ ಬಳಿಕ ವೃದ್ಧಾಪ್ಯ ವೇತನ ಸಹ ಮಂಜೂರು ಮಾಡಲಾಗುವುದುʼ ಎಂದು ತಿಳಿಸಿದ್ದಾರೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X