ಭಾಲ್ಕಿ | ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ

Date:

Advertisements

ಪ್ರತಿಯೊಂದು ಮಗುವಿನಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಪ್ರತಿಭೆ ಅನಾವರಣಕ್ಕೆ ವೇದಿಕೆ ಒದಗಿಸಿಕೊಡುವುದೇ ಪ್ರತಿಭಾ ಕಾರಂಜಿ ಆಗಿದೆ ಎಂದು ಶಿಕ್ಷಣ ಸಂಯೋಜಕ ಮಲ್ಲಿಕಾರ್ಜುನ ಕನ್ನಾಳೆ ಹೇಳಿದರು.

ಭಾಲ್ಕಿ ತಾಲೂಕಿನ ಡೋಣಗಾಪುರ ರಾಚೋಟೇಶ್ವರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದ್ದ 2024-25ನೇ ಸಾಲಿನ ಡೋಣಗಾಪುರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ʼವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಲ್ಲಿಯೂ ತೊಡಗಿಸಿಕೊಳ್ಳಬೇಕು. ಒಂದೇ ಪ್ರಯತ್ನದಿಂದ ಗುರಿ ತಲುಪಲು ಸಾಧ್ಯವಿಲ್ಲ. ನಿರಂತರ ಪ್ರಯತ್ನ, ತಾಳ್ಮೆ ಮೈಗೂಡಿಸಿಕೊಂಡರೆ ಸಾಧನೆ ಶಿಖರ ಮುಟ್ಟಬಹುದುʼ ಎಂದು ಸಲಹೆ ನೀಡಿದರು.

Advertisements

ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದತ್ತಾತ್ರಿ ಕಾಟಕರ ಮಾತನಾಡಿ, ʼಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚಿಸುತ್ತವೆ. ಹೆಚ್ಚಿನ ವಿದ್ಯಾರ್ಥಿಗಳು ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಶಿಕ್ಷಕರು ಪ್ರೇರಣೆ ನೀಡಬೇಕುʼ ಎಂದರು.

WhatsApp Image 2024 09 23 at 7.44.11 AM

ಸಿಆರ್‌ಪಿ ಚಂದ್ರಕಾಂತ ತಳವಾಡೆ ಮಾತನಾಡಿ, ʼಸ್ಪರ್ಧೆಯಲ್ಲಿ ಗೆಲವು ಸಾಧಿಸಲೆಂದೇ ಸ್ಪರ್ಧಿಸಬಾರದು. ಸೋಲು-ಗೆಲುವು ಸರ್ವೇಸಾಮಾನ್ಯ. ಆದರೆ ಎಲ್ಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಅನಾವರಣಗೊಳಿಸುವುದು ಮುಖ್ಯವಾಗಿದೆʼ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹಿಂದೂ-ಮುಸ್ಲಿಮರು ಶತ್ರುಗಳಲ್ಲ : ಅಕ್ಬರ್‌ ಅಲಿ

ಕಾರ್ಯಕ್ರಮದಲ್ಲಿ ಡೋಣೆಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೀರಶೆಟ್ಟಿ ಬಿರಾದಾರ, ಡೋಣಗಾಪುರ ಪಂಚಾಯತ್ ಅಧ್ಯಕ್ಷ ಸುರೇಶ ಮೋರೆ, ಪಿಕೆಪಿಎಸ್ ಅಧ್ಯಕ್ಷ ಶಾಂತವೀರ ಪಾಟೀಲ, ಶಿವರಾಜ ಪಾಟೀಲ, ಸಂಜಯ ಪುರಿ, ಶಿವರಾಜ ಘೋದೆ, ಕೃಷ್ಣ, ವಿಶ್ವನಾಥ, ಉತ್ತಮ ಸಿಂಧೆ, ಸತ್ಯವಾನ ಕಾಂಬಳೆ, ಜಗನಾಥ ನಾಟೆಕಾರ, ಸರಿತಕುಮಾರಿ, ಪದ್ಮಾವತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಚನ್ನಪ್ಪ ಚಿದ್ರೆ ನಿರೂಪಿಸಿದರು, ಗಂಗಾಧರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X