ಚಿಕ್ಕಬಳ್ಳಾಪುರ | ಸಚಿವ ಸುಧಾಕರ್‌ ಉಡುಗೊರೆ ನೀಡಿದ್ದ ಗ್ಯಾಸ್‌-ಸ್ಟೌ ಸ್ಫೋಟ

Date:

Advertisements
  • ಚುನಾವಣೆಗೂ ಮುನ್ನ ಕ್ಷೇತ್ರ ಜನರಿಗೆ ಗ್ಯಾಸ್‌-ಸ್ಟೌ ಹಂಚಿಕೆ
  • ಸ್ಪೋಟಗೊಂಡಾಗ ಸ್ಥಳದಲ್ಲಿ ಯಾರು ಇಲ್ಲದಿದ್ದರಿಂದ ತಪ್ಪಿದ ಅನಾಹುತ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರನ್ನು ಸೆಳೆಯಲು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ವಿತರಿಸಿದ್ದ ತಮ್ಮ ಭಾವಚಿತ್ರವಿರುವ ಗ್ಯಾಸ್‌-ಸ್ಟೌ ಸ್ಫೋಟಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ನಡೆಸಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಮಹಿಳಾ ಮತದಾರರನ್ನು ಸೆಳೆಯುವ ಉದ್ದೇಶದಿಂದ ಚುನಾವಣೆ ಘೋಷಣೆಗೂ ಮುನ್ನವೇ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮನೆ-ಮನೆಗೂ ಡಾ. ಕೆ ಸುಧಾಕರ್‌ ಭಾವಚಿತ್ರವಿರುದ ಗ್ಯಾಸ್‌-ಸ್ಟೌ ಹಂಚಲಾಗಿತ್ತು. 

ಪುರ ಗ್ರಾಮದ ವೆಂಕಟೇಶ್ ಎಂಬುವರ ಪತ್ನಿ ಸ್ಟೌ ಮೇಲೆ ಬೇಳೆ ಬೇಯಿಸಲು ಇಟ್ಟು ಹೊರಗಡೆ ಕೆಲಸದಲ್ಲಿ ನಿರತರಾಗಿದ್ದರು. ಕೆಲವು ಸಮಯದ ಬಳಿಕ ಅಡುಗೆ ಮನೆಯಿಂದ ಸ್ಫೋಟದ ಸದ್ದು ಕೇಳಿದೆ. ಒಳಹೋಗಿ ನೋಡಿದಾಗಿ ಸ್ಟೌ ಸಿಡಿದು ಛಿದ್ರಗೊಂಡಿತ್ತು. ಅದರ ಮೇಲೆ ಇಟ್ಟಿದ್ದ ಕುಕ್ಕರ್ ಕೆಳಗೆ ಬಿದ್ದಿತ್ತು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Advertisements

ನೀವು ಉಡುಗೊರೆಯಾಗಿ ಕೊಟ್ಟ ಕಳಪೆ ಸ್ಟೌನಿಂದ ಪ್ರಾಣಕ್ಕೆ ತೊಂದರೆಯಾಗಿದ್ದರೆ ಯಾರು ಜವಾಬ್ದಾರಿ? ಎಂದು ವೆಂಕಟೇಶ್ ಅವರು ಕೆ ಸುಧಾಕರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?  ಚುನಾವಣೆ 2023 | ಪದ್ಮನಾಭನಗರದಲ್ಲಿ ಆರ್ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

ಸ್ಟೌ ಸ್ಫೋಟಗೊಂಡ ಬಳಿಕ ಅದರ ಚಿತ್ರ ‌ಮತ್ತು‌ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ತಕ್ಷಣ ಬಿಜೆಪಿ ಸ್ಥಳೀಯ ಮುಖಂಡರು ಮತ್ತು ಅಭ್ಯರ್ಥಿ ಡಾ. ಕೆ ಸುಧಾಕರ್‌ ಫೌಂಡೇಶನ್ ಕಡೆಯುವರು ಸ್ಫೋಟವಾಗಿದ್ದ ಸ್ಟೌ ಕೊಂಡೊಯ್ದಿದ್ದಾರೆ.

‌ಘಟನೆಯಿಂದ ಭಯಗೊಂಡಿರುವ ಗ್ರಾಮದ ಮಹಿಳೆಯರು ತಮ್ಮ ಮನೆಗಳಿಗೂ ಉಡುಗೊರೆಯಾಗಿ ನೀಡಿದ್ದ ಸ್ಟೌಗಳ ಬಳಕೆಗೆ ಹಿಂಜರಿಯುತ್ತಿದ್ದಾರೆ. ಕಳಪೆ ಸ್ಟೌ ಕೊಟ್ಟ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X