ಹಾಸನ | ಕಾಡಾನೆಗಳ ದಾಂದಲೆ; ಅಪಾರ ಪ್ರಮಾಣದಲ್ಲಿ ಕಾಫಿ-ಮೆಣಸಿನ ಬೆಳೆ ಹಾನಿ

Date:

  • 17 ಕಾಡಾನೆಗಳ ಹಿಂಡು ದಾಳಿ – ಮರಿ ಆನೆಗಳ ಚಿನ್ನಾಟ
  • ಜಮ್ಮನಹಳ್ಳಿಯ ನಾಗರಾಜ್‌, ವಿಶ್ವನಾಥ್‌ ಅವರ ಕಾಫಿ ತೋಟಕ್ಕೆ ದಾಳಿ

ಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ದಾಂದಲೆ ನಡೆಸಿದ್ದು, ಲಕ್ಷಾಂತರ ಮೌಲ್ಯದ ಕಾಫಿ-ಮೆಣಸಿನ ಬೆಳೆ ನಾಶವಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಜಮ್ಮನಹಳ್ಳಿಯ ನಾಗರಾಜ್‌ ಮತ್ತು ವಿಶ್ವನಾಥ್‌ ಎಂಬುವರ ಕಾಫಿ ತೋಟಕ್ಕೆ 17 ಕಾಡಾನೆಗಳ ಹಿಂಡು ಬುಧವಾರ ರಾತ್ರಿ ಲಗ್ಗೆ ಇಟ್ಟಿವೆ. ಮರಿ ಆನೆಗಳನ್ನು ಹೊಂದಿರುವ ಕಾಡಾನೆಗಳ ಗುಂಪು ಹೂವು ಬಿಟ್ಟಿರುವ ಕಾಫಿ ಗಿಡಗಳು, ಮೆಣಸಿನಬಳ್ಳಿ, ನೀರಿನ ಪೈಪ್‌ ಇತ್ಯಾದಿಗಳನ್ನು ನಾಶ ಮಾಡಿವೆ. ಕಾಫಿ ತೋಟಕ್ಕೆ ಸೋಲಾರ್‌ ಬೇಲಿ ಇಲ್ಲದ್ದರಿಂದ ಕಾಡಾನೆಗಳು ತೋಟಕ್ಕೆ ನುಗ್ಗಿವೆ ಎನ್ನಲಾಗಿದೆ.

ಕೆಲವು ವರ್ಷಗಳಿಂದ ಸಕಲೇಶಪುರ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಬಹುತೇಕರು ಬೆಳೆ ಬೆಳೆಯುವುದನ್ನೇ ಬಿಟ್ಟಿದ್ದಾರೆ. ಅನೇಕ ಕಡೆ ಹೊಲಗದ್ದೆಗಳು ಇಂದಿಗೂ ಪಾಳುಬಿದ್ದಿವೆ. ಒಂದು ವೇಳೆ ಧೈರ್ಯ ಮಾಡಿ ಬೆಳೆ ಬೆಳೆದರೂ ಫಸಲನ್ನು ರಕ್ಷಿಸಿಕೊಂಡು, ಕೈಗೆ ತೆಗೆದುಕೊಳ್ಳಲು ಹರಸಾಹಸಪಡಬೇಕಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕೋಳಿ ಸಾಂಬರ್‌ಗಾಗಿ ಜಗಳ; ಮಗನನ್ನೇ ಹತ್ಯೆಗೈದ ತಂದೆ

ಕಾಡಾನೆ ಹಾವಳಿಯಿಂದ ಉಂಟಾಗುವ ಬೆಳೆ ಹಾನಿಗೆ ಅರಣ್ಯ ಇಲಾಖೆಯಿಂದ ಸಿಗುವ ಪರಿಹಾರ ತೀರ ಕಡಿಮೆ. ಜೊತೆಗೆ ತ್ವರಿತವಾಗಿಯೂ ಸಿಗುವುದಿಲ್ಲ. ಹಾಗಾಗಿ ಮಲೆನಾಡು ಭಾಗದ ರೈತರು ಮತ್ತು ಬೆಳೆಗಾರರು ಕಾಡಾನೆ ಸಮಸ್ಯೆಯಿಂದಾಗಿ ಹೈರಾಣಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...