ಕೋಲಾರದಿಂದ ಟೊಮೆಟೋ ತುಂಬಿಕೊಂಡು ಜೈಪುರಕ್ಕೆ ಹೊರಟಿದ್ದ ಲಾರಿ ನಾಪತ್ತೆ!

Date:

Advertisements
  • ಜು.27ರಂದು ಸುಮಾರು 21 ಲಕ್ಷ ಮೌಲ್ಯದ ಟೊಮೆಟೋ ತುಂಬಿಕೊಂಡು ಜೈಪುರಕ್ಕೆ ಹೊರಟಿದ್ದ ಲಾರಿ
  • ಲಾರಿ ಚಾಲರಿಬ್ಬರ ಮೇಲೆ ಕಳ್ಳತನದ ಅನುಮಾನ; ಮಂಡಿ ವ್ಯಾಪಾರಿಗಳಿಂದ ಕೋಲಾರ ನಗರ ಠಾಣೆಗೆ ದೂರು

ಟೊಮೆಟೋ ಬೆಲೆ ಗಗನಕ್ಕೇರುತ್ತಿರುವ ಮಧ್ಯೆಯೇ ಕಳ್ಳತನದ ವರದಿಗಳೂ ಕೂಡ ಹೆಚ್ಚಾಗುತ್ತಿದೆ. ಈ ನಡುವೆ ಕೋಲಾರದಿಂದ ರಾಜಸ್ಥಾನಕ್ಕೆ ಹೊರಟಿದ್ದ ಟೊಮೆಟೋ ಲಾರಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

ಸುಮಾರು 21 ಲಕ್ಷ ಮೌಲ್ಯದ ಟೊಮೆಟೋ ತುಂಬಿದ್ದ ಲಾರಿ ನಾಪತ್ತೆಯಾಗಿರುವುದಾಗಿ ಕೋಲಾರ ಎಪಿಎಂಸಿಯ ಮಂಡಿ ಮಾಲೀಕರು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜುಲೈ 27ರಂದು ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ 21 ಲಕ್ಷ ಮೌಲ್ಯದ ಟೊಮೆಟೋ ತುಂಬಿದ್ದ ಲಾರಿ ನಾಪತ್ತೆಯಾಗಿದೆ. ಕೋಲಾರದ ಮೆಹಕ್ ಟ್ರಾನ್ಸ್​​ಪೋರ್ಟ್​ ಸಂಸ್ಥೆಗೆ ಸೇರಿದ ಲಾರಿ ಇದಾಗಿತ್ತು. ಇದರಲ್ಲಿ ಎ.ಜೆ.ಟ್ರೇಡರ್ಸ್ ಸಕ್ಲೇನ್ ಹಾಗೂ ಎಸ್.ವಿ.ಟಿ ಟ್ರೇಡರ್ಸ್ ಮುನಿರಡ್ಡಿ ಎಂಬುವವರಿಗೆ ಸೇರಿದ್ದ 21 ಲಕ್ಷ ಮೌಲ್ಯದ ಟೊಮೆಟೋಗಳಿದ್ದವು. ಲಾರಿ ಜು.30ರಂದು ಜೈಪುರಕ್ಕೆ ತಲುಪಬೇಕಿತ್ತು. ಚಾಲಕ ನಿನ್ನೆಯಿಂದ(ಜು.29) ಮೊಬೈಲ್​ ಸಂಪರ್ಕಕ್ಕೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಳ್ಳತನವಾಗಿರುವ ಅನುಮಾನ ವ್ಯಕ್ತಪಡಿಸಿ ಮಂಡಿ ಮಾಲೀಕರು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisements

ರಾಜಸ್ಥಾನ ನೋಂದಾಯಿತ RJ 04 GC 3756 ನಂಬರಿನ ಲಾರಿಯಲ್ಲಿ ಇಬ್ಬರು ಚಾಲಕರು ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

tomato lorry

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿರುವ ಹೆಸರು ಹೇಳಲಿಚ್ಛಿಸದ ಟ್ರಾನ್ಸ್​​ಪೋರ್ಟ್​ ಸಂಸ್ಥೆಯ ವ್ಯಕ್ತಿಯೋರ್ವರು, ‘ಲಾರಿಯಲ್ಲಿ ಇಬ್ಬರು ಚಾಲಕರು ತೆರಳಿದ್ದರು. ರಾಜಸ್ಥಾನದಿಂದ ಬಂದಿದ್ದ ಲಾರಿ ಕೋಲಾರದ ಎಪಿಎಂಸಿಯಿಂದ ಟೊಮೆಟೋ ತುಂಬಿಕೊಂಡು ಜು.27ರಂದು ಹೋಗಿತ್ತು. ನಿಗದಿತ ಸ್ಥಳಕ್ಕೆ 300 ಕಿ.ಮೀ ಇರುವಾಗ ನಮಗೆ ಕೊನೆಯ ಕರೆ ಬಂದಿತ್ತು. ಕೊನೆಯ ಟೋಲ್ ಪ್ಲಾಝಾದಿಂದ ಲಾರಿ ಪಾಸಾಗಿರುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ. ಸಂಸ್ಥೆಯ ಮಾಲೀಕರು ಕೋಲಾರದಿಂದ ಜೈಪುರಕ್ಕೆ ಮಾಹಿತಿ ಪಡೆಯಲು ತೆರಳಿದ್ದಾರೆ’ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X