ಬೀದರ್‌ | ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಖಂಡಿಸಿ ಬೃಹತ್‌ ಪ್ರತಿಭಟನೆ

Date:

Advertisements

ಬೀದರ ಜಿಲ್ಲೆಯಲ್ಲಿ ಶೋಷಿತರ, ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ದಬ್ಬಾಳಿಕೆಗಳು ನಡೆಯುತ್ತಿರುವುದನ್ನು ಖಂಡಿಸಿ ಶೋಷಿತರ ಸಂರಕ್ಷಣಾ ಸಮಿತಿಯಿಂದ ಬೀದರ್‌ನಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಡಾ.ಬಿ.ಆರ್.‌ ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿಗಳವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸಿಎಂ ಸಿದ್ದರಾಮಯ್ಯನವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರಿಗೆ ಸಲ್ಲಿಸಿದರು.

“ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜಿಲ್ಲೆಯಲ್ಲಿ ಶೋಷಿತ, ದಲಿತ, ಹಿಂದುಳಿದ ಅಲ್ಪಸಂಖ್ಯಾತರ ಮೇಲೆ ನಿರಂತರ ಅತ್ಯಾಚಾರ, ದಬ್ಬಾಳಿಕ, ಹಲ್ಲೆಗಳು ನಡೆಯುತ್ತಿವೆ. ಡಾ.ಬಿ. ಆರ್.‌ಅಂಬೇಡ್ಕರ್ ಮೂರ್ತಿಗೆ ಅಪಮಾನ ಮಾಡುವುದು, ಅಂಬೇಡ್ಕರ್‌ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಬರೆಯುವ ಕೃತ್ಯಗಳು ನಿರಂತರವಾಗಿ ನಡೆಯುತ್ತಿದೆ. ಇನ್ನೊಂದೆಡೆ ಸಂಸದ ಅನಂತಕುಮಾರ ಹೆಗೆಡೆ ಪುನಃ ಪುನಃ ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಆದರೂ ಸರ್ಕಾರ ಇಂತಹ ಕಿಡಿಗೇಡಿಗಳ ಮೇಲೆ ಯಾವುದೇ ಕಾನೂನು ಕ್ರಮಕೈಗೊಳ್ಳುತ್ತಿಲ್ಲ” ಎಂದು ವಿಷಾದಿಸಿದರು.

Advertisements

“ಯಾವುದೇ ಜಿಲ್ಲೆಯಲ್ಲಿ ಶೋಷಿತ, ದಲಿತರ ಮೇಲೆ ದೌರ್ಜನ್ಯ ದಬ್ಬಾಳಿಕೆ ನಡೆದರೆ ಆಯಾ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ. ಆದರೆ ಅದು ಆದೇಶಕಷ್ಟೇ ಸಿಮೀತವಾಗಿದೆ. ಇಲ್ಲಿಯವರೆಗೂ ಡಿಸಿ, ಎಸ್‌ಪಿಗಳು ಯಾವುದೇ ತಪ್ಪಿಸ್ಥ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಂಡ ಉದಾಹರಣೆಗಳಿಲ್ಲ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವರ ಕುಮ್ಮಕ್ಕುನಿಂದ ಅಧಿಕಾರಿಗಳು ಸಚಿವರ ಕೈಗೊಂಬೆಯಾಗಿದ್ದಾರೆ” ಎಂದು ಆರೋಪಿಸಿದರು.

“ಸುಮಾರು 50ಕ್ಕೂ ಹೆಚ್ಚು ವರ್ಷಗಳಿಂದ ಬಡ ದಲಿತರು ವ್ಯವಸಾಯ ಮಾಡಿ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು. ಆದರೆ, ಅನ್ಯಾಯವಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬಡ ರೈತರ ಕೃಷಿ ಭೂಮಿ ವಶಪಡಿಸಿಕೊಂಡು, ಅವರ ಹೆಸರಿನಲ್ಲಿದ್ದ ಪಹಣಿ, ಮ್ಯುಟೇಶನ್, ʼಸಿʼ ಫಾರಂ ಸೇರಿದಂತೆ ಇತರ ದಾಖಲಾತಿಗಳು ರದ್ದುಪಡಿಸುತ್ತಿದ್ದಾರೆ. ಇನ್ನೊಂದೆಡೆ ಬಗರ್‌ ಹುಕುಂ ಸಾಗುವಳಿ ಭೂಮಿಯನ್ನು ಜಾತಿ ಬಲಾಡ್ಯರು ಅಕ್ರಮ ಸಾಗುವಳಿ ಮಾಡಿಕೊಂಡಿದ್ದಾರೆ. ಆದರೆ ಅರಣ್ಯ ಅಧಿಕಾರಿಗಳು ಜಾತಿ ಬಲಾಡ್ಯರಿಂದ ಅಕ್ರಮ ಭೂಮಿ ವಶಪಡಿಸಿಕೊಳ್ಳಲು ಯಾಕೆ ಧೈರ್ಯ ತೋರುತ್ತಿಲ್ಲ” ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು

ಪ್ರತಿಭಟನೆಯಲ್ಲಿ ಶೋಷಿತರ ಸಂರಕ್ಷಣಾ ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ರಾಜಕುಮಾರ ಮೂಲಭಾರತಿ ಜಿಲ್ಲಾಧ್ಯಕ್ಷ ವಿಷ್ಣುವರ್ಧನ ವಾಲದೊಡ್ಡಿ, ಉಪಾಧ್ಯಕ್ಷ ರಾಜಕುಮಾರ ಶಿಂಧೆ, ಸುರೇಶ ಜೋಜನಾಕರ್, ಸಂಘಟನಾ ಕಾರ್ಯದರ್ಶಿ ಗೌತಮ ಪ್ರಸಾದ ಸೇರಿದಂತೆ ಸಮಿತಿಯ ಪ್ರಕಾಶ ರಾವಣ, ಅಮೃತ ಮುತ್ತಂಗಿಕರ್, ಸಿದ್ದಾರ್ಥ ಪ್ಯಾಗೆ ಸುಭಾಷ ಲಾಧಾ ರಾಜಕುಮಾರ್‌ ಸಿಂಧೆ ಹಾಗೂ ಮಹಿಳೆಯರು ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X