ಕೊಪ್ಪಳ | ಕಾಣೆಯಾಗಿದ್ದ ಏಳು ವರ್ಷದ ಬಾಲಕಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

Date:

ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ ಅನುಶ್ರೀ ಮಡಿವಾಳರ (7) ಭಾನುವಾರ ಶವವಾಗಿ ಪತ್ತೆಯಾಗಿದ್ದಾಳೆ.

- Advertisement -

ಕಿನ್ನಾಳ ಗ್ರಾಮದಲ್ಲಿ ವಾಸವಾಗಿದ್ದ ರಾಘವೇಂದ್ರ ಮಡಿವಾಳರ ದಂಪತಿಗಳು ಮಗಳು ಅನುಶ್ರೀಯನ್ನು ಅಜ್ಜಿ ಬಳಿ ಬಿಟ್ಟು ಕೂಲಿ ಕೆಲಸಕ್ಕೆ ಹೋಗಿದ್ದರು. ಏ.19ರಂದು ಮಧ್ಯಾಹ್ನ ಆಟವಾಟಲು ಅಂತ ಹೊರಗಡೆ ಹೋದ ಬಾಲಕಿ ಅನುಶ್ರೀ ಮರಳಿ ಮನೆಗೆ ಬರಲಿಲ್ಲ. ಗಾಬರಿಗೊಂಡ ಪೋಷಕರು ಕೊಪ್ಪಳ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು. ಭಾನುವಾರ (ಏ.21) ರಂದು ಅವರ ಮನೆ ಹತ್ತಿರದ ಪಾಳು ಜಾಗದಲ್ಲಿ ಚೀಲದಲ್ಲಿ ಶವವಾಗಿ ಬಾಲಕಿಯ ದೇಹ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪಾಳು ಜಾಗದಲ್ಲಿ ಚೀಲದಿಂದ ವಾಸನೆ ಬರುತ್ತಿರುವುದನ್ನು ಗ್ರಹಿಸಿದ ಜನರಿಗೆ ಬಾಲಕಿ ಶವ ಕಂಡಿದೆ. ಬಾಲಕಿ ಶವ ಪತ್ತೆಯಾಗಿರುವ ಸ್ಥಳ ಕಿನ್ನಾಳದ ಗ್ರಾಮದ ಮಧ್ಯದಲ್ಲಿದೆ. ಅದರ ಸುತ್ತಲೂ ಮನೆಗಳಿವೆ. ಇಂಥ ಸ್ಥಳದಲ್ಲಿ ಶವ ಕಂಡಿದ್ದು ಜನರಲ್ಲಿ ಆಘಾತ ಮೂಡಿಸಿದೆ.

ಬಾಲಕಿ ಪತ್ತೆಗಾಗಿ ಕಿನ್ನಾಳ ಪಂಚಾಯಿತಿಯ ವಾಹನಗಳ ಮೈಕ್‌ನಲ್ಲಿ ವ್ಯಾಪಕ ಪ್ರಚಾರ ಮಾಡಲಾಗಿತ್ತು. ಗ್ರಾಮದಲ್ಲಿರುವ ಕೆಲ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗಿತ್ತು. ಆದರೂ ಬಾಲಕಿಯ ಸುಳಿವು ಸಿಕ್ಕಿರಲಿಲ್ಲ.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಡಿವೈಎಸ್‌ಪಿ ಮುತ್ತಣ್ಣ ಸವರಗೋಳ, ಹೆಚ್ಚುವರಿ ಎಸ್‌.ಪಿ. ಹೇಮಂತಕುಮಾರ್‌, ಕೊಪ್ಪಳ ಗ್ರಾಮೀಣ ಠಾಣೆಯ ಸಿಪಿಐ ಸುರೇಶ ಡಿ. ಸೇರಿದಂತೆ ಹಲವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

“ಬಾಲಕಿ ಅನುಶ್ರೀಯನ್ನು ಕೊಲೆ ಮಾಡಿ ಚೀಲದಲ್ಲಿ ತುಂಬಿಡಲಾಗಿದೆ. ಪಾಳು ಮನೆಯೊಂದರಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬಳ್ಳಾರಿಯಿಂದ ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ತಡರಾತ್ರಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ” ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಈದಿನ ಸಂದರ್ಶನ | ಬದ್ಧತೆ ಮೈಗೂಡಿಸಿಕೊಂಡು ಓದಿದರೆ ಕೋಚಿಂಗ್‌ ಅಗತ್ಯವಿಲ್ಲ

ಘಟನೆ ಕುರಿತು ಪ್ರತಿಕ್ರಿಯಿಸಿದ ಎಸ್‌.ಪಿ. ಯಶೋಧಾ “ಕೊಲೆ ಬಗ್ಗೆ ಕೆಲವರ ಮೇಲೆ ಸಂಶಯವಿದ್ದು ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು. ಘಟನೆಗೆ ಕಾರಣವೇನು ಎನ್ನುವುದು ಸದ್ಯಕ್ಕೆ ಗೊತ್ತಾಗಿಲ್ಲ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...