ಚಾಮರಾಜನಗರ | ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಸಂಕಲ್ಪ; ಗಮನ ಸೆಳೆದ ವಾಕಥಾನ್

Date:

Advertisements

ಚಾಮರಾಜನಗರ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಸಂಕಲ್ಪದೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಾಕಥಾನ್‍ಗೆ ಚಾಲನೆ ನೀಡಲಾಯಿತು.

ವಿಶೇಷವಾಗಿ ಹಮ್ಮಿಕೊಳ್ಳಲಾಗಿದ್ದ ವಾಕಥಾನ್ ನಲ್ಲಿ ಪ್ರತಿಜ್ಞಾ ಸ್ವೀಕಾರ ಸೇರಿದಂತೆ ಬೃಹತ್ ಜನಜಾಗೃತಿ ಜಾಥಾ ಪಟ್ಟಣದ ನಾಗರಿಕರ ಗಮನ ಸೆಳೆಯಿತು. ನಗರದ ಚಾಮರಾಜೇಶ್ವರ ದೇವಾಲಯದ ಅವರಣದಲ್ಲಿ ಬೃಹತ್ ವಾಕಥಾನ್‍ನಲ್ಲಿ ಭಾಗವಹಿಸಲು ಸಮಾವೇಶಗೊಂಡರು.

ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕಾಲೇಜು ವಿದ್ಯಾರ್ಥಿಗಳು, ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶುಕ್ರವಾರದ ಕವಾಯತು ಮುಗಿಸಿ ವಾಕಥಾನ್ ಸೇರಿಕೊಂಡ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಜಿಲ್ಲೆಯವರೇ ಆದ ನಟ ಗಣೇಶ್ ರಾವ್ ಮತ್ತು ಅಂತರಾಷ್ಟ್ರೀಯ ಖೋ ಖೋ ಕ್ರೀಡಾಪಟು ಚೈತ್ರಾ ಅವರು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ವಾಕಥಾನ್‍ಗೆ ವಿಶೇಷ ಮೆರಗು ತಂದರು.

Advertisements

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರೊಂದಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಅವರು ಹಸಿರು ನಿಶಾನೆ ತೋರಿದರು.

ವಾಕಥಾನ್ ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ” ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಆಶಯದಂತೆ ಚಾಮರಾಜನಗರವನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ನಗರದಲ್ಲಿ ಪ್ರಪ್ರಥಮ ಬಾರಿಗೆ ಬೃಹತ್ ವಾಕಥಾನ್ ಆಯೋಜಿತವಾಗಿದೆ. ಮಾರ್ಚ್-8ರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ದಿನದಿಂದ ನವೆಂಬರ್ 14ರ ಮಕ್ಕಳ ದಿನಾಚರಣೆವರೆಗಿನ ಅವಧಿಯಲ್ಲಿ ಜಿಲ್ಲೆಯ ಪ್ರತಿ ಗ್ರಾಮ, ಗ್ರಾಮ ಪಂಚಾಯಿತಿ, ಹೋಬಳಿ, ತಾಲೂಕು, ಉಪ ವಿಭಾಗ ಹಾಗೂ ಜಿಲ್ಲಾಮಟ್ಟದಲ್ಲಿ ವಿಶೇಷ ಗಮನ ಸೆಳೆಯುವಂತಹ ಪರಿಣಾಮಕಾರಿ ಕಾರ್ಯಕ್ರಮಗಳ ಮೂಲಕ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತಗೊಳಿಸುವ ಸದುದ್ದೇಶ ಹೊಂದಲಾಗಿದೆ ” ಎಂದರು.

” ಬಾಲ್ಯವಿವಾಹವನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 18 ವರ್ಷ ತುಂಬಿರದ ಹೆಣ್ಣು ಮಕ್ಕಳು ವಿವಾಹವಾಗಬಾರದು. ಬಾಲ್ಯ ವಿವಾಹದಿಂದ ಹಲವಾರು ಸಮಸ್ಯೆಗಳು ಎದುರಾಗಲಿವೆ. ಮಕ್ಕಳ ಆರೋಗ್ಯ, ಶಿಕ್ಷಣ ಕುಂಠಿತವಾಗಲಿದೆ. ಸಂತೋಷದಿಂದ ಕಳೆಯಬೇಕಾದ ಬಾಲ್ಯವನ್ನು ಮಕ್ಕಳಿಂದ ಬಲವಂತವಾಗಿ ಕಸಿದಂತಾಗಲಿದೆ. ಕುಟುಂಬ, ಆರ್ಥಿಕ ಹಿನ್ನೆಡೆ ಮತ್ತು ಸೋಷಿಯಲ್ ಮೊಬಿಲಿಟಿಗೆ ತೊಂದರೆಯಾಗಲಿದೆ.

ಬಾಲ್ಯ ವಿವಾಹ ನಡೆದ ಮೇಲೆ ಶಿಕ್ಷೆ ಕೊಡಿಸುವುದಕ್ಕಿಂತ ಮಕ್ಕಳ ತಂದೆ-ತಾಯಿ, ಪೋಷಕರಿಗೆ ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ವ್ಯಾಪಕ ಅರಿವು ಮೂಡಿಸಿ ಬಾಲ್ಯ ವಿವಾಹ ತಡೆಯುವುದೇ ಉತ್ತಮವಾಗಿದೆ. ಜನರ ಮನ ಪರಿವರ್ತನೆ ಇಲ್ಲಿ ಪ್ರಮುಖ ಪಾತ್ರ ವಹಿಸಲಿದೆ ” ಎಂದು ಹೇಳಿದರು.

ಗ್ರಾಮ ಪಂಚಾಯಿತಿಗಳಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳು ಆಗಬೇಕು. ಬಾಲ್ಯವಿವಾಹ ಸಂಪೂರ್ಣ ನಿರ್ಮೂಲನೆ ಸರ್ಕಾರದ, ಅಧಿಕಾರಿಗಳ, ಪೊಲೀಸರ ಜವಾಬ್ದಾರಿ ಮಾತ್ರವಲ್ಲ. ಅದು ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿಯಾಗಿದ್ದು, ಬಾಲ್ಯವಿವಾಹ ತಡೆಗೆ ಎಲ್ಲರೂ ಪಣತೊಡಬೇಕು. ಜಿಲ್ಲೆಯ ಪ್ರಗತಿಗೆ ಪೂರಕವಾಗಿ ಕೆಲಸ ಮಾಡಿ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತವನ್ನಾಗಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಮಾತನಾಡಿ ” ಸಾಮಾಜಿಕ ಅನಿಷ್ಠ ಪದ್ದತಿಯಾಗಿರುವ ಬಾಲ್ಯ ವಿವಾಹವನ್ನು ಬೇರು ಸಮೇತ ಕಿತ್ತೊಗೆಯಲು ತಳಮಟ್ಟದ ಅಧಿಕಾರಿಗಳಿಂದ ನಿರಂತರ ಪ್ರಯತ್ನಗಳಾಗಬೇಕಿದೆ. ಬಾಲ್ಯ ವಿವಾಹ ತಡೆಗೆ ಚಾಮರಾಜನಗರದಲ್ಲಿ ವಿಶಿಷ್ಟವಾಗಿ ಗಮನ ಸೆಳೆಯುವ ಬೃಹತ್ ವಾಕಥಾನ್ ಆಯೋಜನೆ ದೇಶ, ರಾಜ್ಯದಲ್ಲಿಯೇ ಪ್ರಥಮವಾಗಿದೆ. ಈ ಕಾರ್ಯಕ್ರಮ ಎಲ್ಲ ಜನರನ್ನು ತಲುಪಬೇಕು. ವಿಶೇಷವಾಗಿ ಇಡೀ ದೇಶಕ್ಕೆ ಉತ್ತಮ ಸಂದೇಶ ತಲುಪಬೇಕು. ಆಗಮಾತ್ರ ಇದು ಸಾರ್ಥಕವಾಗಲಿದೆ ” ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಮಾತನಾಡಿ ” ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡುತ್ತಿದೆ. ಖುಷಿಯಿಂದ ಕಳೆಯಬೇಕಾದ ಬಾಲ್ಯವನ್ನು ಮಕ್ಕಳಿಂದ ಬಲವಂತವಾಗಿ ಕಿತ್ತುಕೊಳ್ಳದೇ ಅವರನ್ನು ಮುಂದಿನ ಭವಿಷ್ಯದ ಜೀವನಕ್ಕೆ ಸಿದ್ದಪಡಿಸಬೇಕಾದ ಜವಾಬ್ದಾರಿ ಪೋಷಕರಿಗೆ ಇದೆ. ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಂದ ಅಹವಾಲು ಸ್ವೀಕರಿಸಲು ಆಪ್ತಗೆಳತಿ ದೂರು ಪೆಟ್ಟಿಗೆಗಳನ್ನು ಇಡಲಾಗಿದ್ದು, ಬಾಲ್ಯ ವಿವಾಹ ತಡೆಗೂ ಇದು ನೆರವಾಗಲಿದೆ. ಆಪ್ತಗೆಳತಿ ದೂರು ಪೆಟ್ಟಿಗೆಗಳ ಮೂಲಕ 2024ರ ನವೆಂಬರ್‍ನಿಂದ ಇದುವರೆಗೆ ಸ್ವೀಕರಿಸಲಾದ 315 ದೂರುಗಳನ್ನು ಸೂಕ್ತವಾಗಿ ಇತ್ಯರ್ಥಪಡಿಸಲಾಗಿದೆ ” ಎಂದು ಹೇಳಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಕೊಡಗು | ಬಡವರಿಗೆ ದಕ್ಕಲಿಲ್ಲ ವಸತಿ ಯೋಜನೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಬಾಲ್ಯ ವಿವಾಹ ನಿರ್ಮೂಲನೆಯ ಪ್ರತಿಜ್ಞಾವಿಧಿ ಬೋಧಿಸಿ, ವಾಕಥಾನ್‍ಗೆ ಶುಭ ಹಾರೈಸಿದರು. ಚಾಮರಾಜೇಶ್ವರ ದೇವಾಲಯದಿಂದ ಆರಂಭವಾದ ಬೃಹತ್ ಜನಜಾಗೃತಿ ವಾಕಥಾನ್‍ನಲ್ಲಿ ಎಲ್ಲಾ ಗಣ್ಯರು ಸೇರಿದಂತೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿದರು. ಬಳಿಕ ನಗರದ ಭುವನೇಶ್ವರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬಾಲ್ಯ ವಿವಾಹ ನಿರ್ಮೂಲನೆಯ ಘೋಷ ವಾಕ್ಯಗಳನ್ನು ಕೂಗುವುದರ ಮೂಲಕ ಜಾಗೃತಿ ಮೂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X