ಬೀದರ್‌ | ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಮಾ.24 ರಿಂದ ಮೂರು ದಿನ ನಾಟಕ ಪ್ರದರ್ಶನ

Date:

Advertisements

ಭಾಲ್ಕಿ ಹಿರೇಮಠ ಸಂಸ್ಥಾನ ಮತ್ತು ಶ್ರೀ ಶಿವಕುಮಾರ ಕಲಾ ಸಂಘ ಸಾಣೆಹಳ್ಳಿ ಸಹಯೋಗದಲ್ಲಿ ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮದಲ್ಲಿ ಮಾ.24 ರಿಂದ 26ರವರೆಗೆ ಮೂರು ದಿವಸ ನಾಟಕ ಪ್ರದರ್ಶನಗೊಳ್ಳಲಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ನಾಟಕ ವೀಕ್ಷಿಸುವಂತೆ ಭಾಲ್ಕಿ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಾಣೇಹಳ್ಳಿ ಶಿವಸಂಚಾರ ಕಲಾವಿದರಿಂದ ಪ್ರತಿವರ್ಷ ಮೂರು ನಾಟಕಗಳು ಪ್ರದರ್ಶನವಾಗುತ್ತವೆ. ನಾಟಕದ ಮೂಲಕ ಬಸವಾದಿ ಶರಣರ ಚಿಂತನೆಗಳನ್ನು ಜೊತೆಗೆ ಸಾಮಾಜಿಕ ವಿಷಯಗಳ ಅರಿವು ಮೂಡಿಸುವ ಕಾರ್ಯ ಶಿವಸಂಚಾರ ಕಲಾವಿದರು ಮಾಡುತ್ತಿದ್ದಾರೆ.ನಾಟಕದಂತಹ ಪ್ರಭಾವಿ ಮಾದ್ಯಮಗಳಿಂದ ತತ್ವಪ್ರಸಾರ ಮಾಡುವ ಹಾಗೂ ನಮ್ಮ ಅರಿವಿನ ಪ್ರಜ್ಞೆಯನ್ನು ವಿಸ್ತರಿಸುವ ಪ್ರಯತ್ನ ಅಭಿನಂದನೀಯವಾಗಿದೆ.

ಚನ್ನಬಸವಾಶ್ರಮದಲ್ಲಿ ಪ್ರತಿದಿನ ಸಂಜೆ 6ಕ್ಕೆ ನಾಟಕ ಪ್ರದರ್ಶನಗೊಳ್ಳಲಿವೆ. ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು ನಾಟಕ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದಾರೆ. ಸಾಣೇಹಳ್ಳಿಯ ಶಿವಸಂಚಾರ ಅಭಿನಯಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಿಲ್ಲೆಯಲ್ಲಿ ತೀವ್ರ ಬರ; ನೀರಿಗಾಗಿ ತೆಲಂಗಾಣಕ್ಕೆ ಹೊರಟ ತಾಂಡಾ ಜನರು

ಜಯಂತ ಕಾಯ್ಕಿಣಿ ರಚಿಸಿರುವ, ಹುಲಗೆಪ್ಪ ಕಟ್ಟಿಮನಿ ನಿರ್ದೇಶನದ ʼಜತೆಗಿರುವನು ಚಂದಿರʼ ಮತ್ತು ಕೆ.ಎನ್.ಸಾಳುಂಕೆ ರಚನೆಯ, ಮಾಲತೇಶ ಆರ್.ಬಡಿಗೇರ ವಿನ್ಯಾಸ ಮತ್ತು ನಿರ್ದೇಶನದ ʼತಾಳಿಯ ತಕರಾರುʼ ಹಾಗೂ ಡಾ.ನಟರಾಜ್ ಬೂದಾಳು ರಚನೆಯ, ಸಿ.ಬಸವಲಿಂಗಯ್ಯ ಅವರ ನಿರ್ದೇಶನದ ʼಕಲ್ಯಾಣದ ಬಾಗಿಲುʼ ನಾಟಕ ಪ್ರದರ್ಶನಗೊಳ್ಳಲಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X