ರಾಯಚೂರು | ಶಿಕ್ಷಕ ಹುದ್ದೆಗೆ ಆಯ್ಕೆಯಾದ ಯುವಕ; ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ

Date:

  • ಸಿಂಧುತ್ವ ಪ್ರಮಾಣಪತ್ರ, ಅಭ್ಯಾಸ ಪ್ರಮಾಣ ಪತ್ರ ಪಡೆಯಲು ನಡೆಸಿದ ಪ್ರಯತ್ನ ವಿಫಲವಾಗುವ ಆತಂಕ
  • 2022ರಲ್ಲಿ ಪದವಿ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಶಿಕ್ಷಕ ಹುದ್ದೆಗೆ ಆಯ್ಕೆಯಾದ ಯುವಕ ಸಾವು

ಸ್ಪರ್ಧಾತ್ಮಕ ಪರೀಕ್ಷೆ ಬರೆದು ಶಿಕ್ಷಕ ಹುದ್ದೆಗೆ ಆಯ್ಕೆಯಾಗಿದ್ದ ಯುವಕನೋರ್ವ ಆಡಳಿತ ವ್ಯವಸ್ಥೆ ವಿರುದ್ದ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ ನಡೆದಿದೆ.

- Advertisement -

ತಾಲ್ಲೂಕಿನ ಚಿಕ್ಕಬೂದುರು ಗ್ರಾಮದ ಸಿ.ಚನ್ನಬಸವ (30) ಮೃತ ಯುವಕ . ಪದವಿ ಶಿಕ್ಷಕರ ನೇಮಕಾತಿಯಲ್ಲಿ ಆಯ್ಕೆಯಾಗಿದ್ದನು. ಹುದ್ದೆಗೆ ಸಂಬಂಧಿಸಿದ ಸಿಂಧುತ್ವ ಪ್ರಮಾಣಪತ್ರ ಸೇರಿದಂತೆ ಅಭ್ಯಾಸ ಪ್ರಮಾಣ ಪತ್ರ ಪಡೆಯಲು ನಡೆಸಿದ ಪ್ರಯತ್ನ ವಿಫಲವಾಗಬಹುದೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ..

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕಳೆದ ಒಂದು ವರ್ಷದಿಂದ ನೇಮಕ ಪ್ರಕ್ರಿಯೆ ಮುಂದೂಡುತ್ತಲೇ ಬಂದ ಸರ್ಕಾರದ ನಿರ್ಧಾರದಿಂದ ರೋಸಿ ಹೋಗಿದ್ದನು. ಬೆಂಗಳೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಶಾಲೆಗೆ ಹೋಗಿ ವ್ಯಾಸಂಗ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಿದ್ದು, ಸಕಾಲಕ್ಕೆ ಪ್ರಮಾಣ ಪತ್ರ ದೊರೆಯದೇ ಇರುವುದರಿಂದ ಮನನೊಂದು ಸ್ವಗ್ರಾಮದಲ್ಲಿ ನೇಣಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.

“ನನ್ನ ಸಾವಿಗೆ ನಾನೇ ಕಾರಣ, ಸ್ವಇಚ್ಛೆಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಯಾವುದೇ ಕಾರಣಕ್ಕೂ ಪೋಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ ತೊಂದರೆಗೆ ಒಳಗಾಗಬೇಡಿ ಎಂದು ಪೋಷಕರಿಗೆ ಡೆತ್‌ ನೋಟ್‌ ನಲ್ಲಿ ಬರೆದ ಯುವಕ ʼನನ್ನ ಪೋಷಕರು ದೂರು ಸಲ್ಲಿಸಲು ಠಾಣೆಗೆ ಬಂದರೆ ಪ್ರಕರಣ ತೆಗೆದುಕೊಳ್ಳಬೇಡಿʼ” ಎಂದು ಪೋಲೀಸ್‌ ರಿಗೂ ಡೆತ್‌ ನೋಟ್‌ ನಲ್ಲಿ ಮನವಿ ಮಾಡಿದ್ದಾನೆ.

ಈ ಸುದ್ದಿ ಓದಿದ್ದೀರಾ ? ರಾಯಚೂರು | ಸರ್ಕಾರ ಭೂಮಿಯಲ್ಲಿ ಅಕ್ರಮ; ಭೂ ಮಂಜೂರಾತಿಗೆ ಆಗ್ರಹ

2022 ರಲ್ಲಿ ಪದವಿ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಶಿಕ್ಷಕ ಹುದ್ದೆಗೆ ಆಯ್ಕೆಯಾದ ಚನ್ನಬಸವ ಶಿಕ್ಷಕನಾಗುವ ಕನಸು ನನಸಾಗುವ ಹೊಸ್ತಿಲಿನಲ್ಲಿ ಸಾವಿಗೆ ಶರಣಾಗಿರುವುದು ದುರ್ದೈವದ ಸಂಗತಿ. ಈ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...