ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹೊಸಮನೆ ಠಾಣಾ ವ್ಯಾಪ್ತಿಯ ಸಾಯಿನಗರದಲ್ಲಿ ಚೂರಿ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಕೋಡಿಹಳ್ಳಿ ನಿವಾಸಿ ನವೀನ್ ಕುಮಾರ್ (25) ಮೃತ ಯುವಕ. ಚೂರಿಯಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳ ಗುಂಪು ಪರಾರಿಯಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಿಜೆಪಿ ನಾಮಪತ್ರಗಳ ತಿರಸ್ಕರಿಸದಂತೆ ಸಿಎಂ ಕಚೇರಿಯಿಂದ ಒತ್ತಡ; ಡಿಕೆಶಿ ಆರೋಪ
ಗಾರೆ ಕೆಲಸ ಮಾಡಿಕೊಂಡಿದ್ದ ನವೀನ್ ಕುಮಾರ್, ಈ ಹಿಂದೆ ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ವ್ಯಕ್ತಿಯೋರ್ವನ ಬಳಿ ಮೊಬೈಲ್ ಅಡವಿಟ್ಟಿದ್ದ ಈತ, ಗೆಳೆಯ ಅರುಣ್ ಕುಮಾರ್ ಜತೆಯಲ್ಲಿ ಮೊಬೈಲ್ ಬಿಡಿಸಿಕೊಳ್ಳಲು ಸತ್ಯಸಾಯಿ ನಗರಕ್ಕೆ ಹೋಗಿದ್ದಾಗ ಗಲಾಟೆ ನಡೆದು ಬೆನ್ನಿಗೆ ಚೂರಿಯಿಂದ ಇರಿಯಲಾಗಿದೆ ಎಂದು ತಿಳಿದುಬಂದಿದೆ. ಗಂಭೀರ ಪರಿಸ್ಥಿತಿಯಲ್ಲಿದ್ದ ನವೀನ್ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ.