ಬೀದರ್‌ | ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು 30 ವರ್ಷಗಳ ನಂತರ ಬಂಧನ

Date:

Advertisements

ಕಮಲನಗರ ತಾಲ್ಲೂಕಿನ ಠಾಣಾಕುಶನೂರ ಠಾಣೆ ಪಿಎಸ್‌ಐ ಅಯ್ಯಂಗಾ‌ರ್ ಮೇಲೆ 30 ವರ್ಷದ ಹಿಂದೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕಮಲನಗರ ತಾಲ್ಲೂಕಿನ ಮುಧೋಳ(ಬಿ) ತಾಂಡಾದ ದೇವಿದಾಸ ರಾಠೋಡ್ (60) ಎಂಬಾತ ಆರೋಪಿಯನ್ನು ಮಹಾರಾಷ್ಟ್ರದ ಮರಖೇಲ್ ವ್ಯಾಪ್ತಿಯ ಲೋಣಿ ತಾಂಡಾದಲ್ಲಿ ಅಲ್ಲಿನ ಮುಖ್ಯ ಪೇದೆ ದೀಪಕ ನೆರವಿನಿಂದ ಬಂಧಿಸಲಾಗಿದೆ.

1993ರ ನವೆಂಬರ್‌ 13 ರಂದು ಠಾಣಾಕುಶನೂರ ಠಾಣೆಯ ಅಂದಿನ ಪಿಎಸ್‌ಐ ಅಯ್ಯಂಗಾರ್ ಮೇಲೆ  ಡಕಾಯಿತರ ಗುಂಪೊಂದು ಆಯುಧಗಳಿಂದ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ. ದರೋಡೆಗಾಗಿ 129 ಜನ ಅಕ್ರಮ ಕೂಟ ರಚಿಸಿಕೊಂಡು ಕಂಟ್ರಿ ಪಿಸ್ತೂಲ್ ಇತರ ಮಾರಕಾಸ್ತ್ರಗಳೊಂದಿಗೆ ಭವಾನಿ ಬಿಜಲಗಾಂವ್ ಮತ್ತು ಅಕ್ಕಪಕ್ಕದ ಗ್ರಾಮಗಳಿಗೆ ಹೋಗುತ್ತಿರುವ ಮಾಹಿತಿ ಆಧರಿಸಿ ಪಿಎಸ್‌ಐ ಅಯ್ಯಂಗಾರ್ ಮತ್ತು ಸಿಬ್ಬಂದಿ ತಡೆಯಲು ಹೋದಾಗ ಹಲ್ಲೆ ಮಾಡಿದ್ದು, 127 ಜನರ ವಿರುದ್ಧ ಠಾಣಾಕುಶನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ತಲೆಮರೆಸಿಕೊಂಡಿದ್ದರಿಂದ ಪ್ರಕರಣ ಎಲ್‌ಪಿಆ‌ರ್ ನಲ್ಲಿತ್ತು.‌ ಅದರಲ್ಲಿ ದೇವಿದಾಸ ರಾಠೋಡ್ ಕೂಡ ಒಬ್ಬನಾಗಿದ್ದ.

Advertisements

ಈ ಹಿಂದೆ ಘೋರ ಅಪರಾಧ ಆರೋಪಿತನ ಪತ್ತೆ ಹಚ್ಚಿ ಬಂಧನಕ್ಕೆ ಕಳುಹಿಸಿದ ಭಾಲ್ಕಿ ಡಿವೈಎಸ್‌ ಪಿ ಶಿವಾನಂದ ಪವಾಡಶೆಟ್ಟಿ, ಕಮಲನಗರ ಸಿಪಿಐ ರಾಮಪ್ಪಾ ಸಾವಳಗಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಠಾಣಾಕುಶನೂರು ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗೆ ಎಸ್.ಪಿ. ಚನ್ನಬಸವಣ್ಣ ಲಂಗೋಟಿ ಪ್ರಶಂಸನಾ ಪತ್ರದೊಂದಿಗೆ ಬಹುಮಾನ ನೀಡಿ ಶ್ಲಾಘಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | 82ರ ಇಳಿ ವಯಸ್ಸಿನಲ್ಲೂ ಆರದ ಉತ್ಸಾಹ; ಸ್ವತಃ ಖರ್ಚಿನಲ್ಲೇ ಊರಿನ ರಸ್ತೆ ದುರಸ್ತಿ

ಈ ಸಂದರ್ಭದಲ್ಲಿ ಠಾಣಾಕುಶನೂರು ಠಾಣೆ ಪಿ.ಎಸ್.ಐ ಉದ್ದಂಡಪ್ಪಾ, ಎಎಸ್‌ಐ ಅನಿಲಕುಮಾರ ಹಾಗೂ ಸಿಬ್ಬಂದಿಗಳಾದ ಸಂಗಮೇಶ್, ಸಂಜೀವಕುಮಾರ, ಬಾಲಾಜಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X