ಬೀದರ್‌ | ನಕಲಿ ದಾಖಲೆ ಸೃಷ್ಟಿಸಿ ಹುದ್ದೆ ಪಡೆದ ಆರೋಪ; ನೆರವು ನೀಡಿದ ಪಿಡಿಒ ಅಮಾನತಿಗೆ ಆಗ್ರಹ

Date:

ನಕಲಿ ದಾಖಲೆ ಸೃಷ್ಟಿಸಿ ಕರ ವಸೂಲಿಗಾರ ಹುದ್ದೆ ಪಡೆದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಆತನಿಗೆ ನೆರವು ನೀಡಿದ ಭಾಲ್ಕಿ ತಾಲೂಕಿನ ಶಿವಣಿ ಗ್ರಾಮ ಪಂಚಾಯತಿ ಪಿಡಿಒ ಅವರನ್ನು ಕೂಡಲೇ ಅಮಾನತು ಮಾಡಬೇಕೆಂದು ಪ್ರಜಾ ಪ್ರಭುತ್ವ ಸಮಿತಿಯ ಪದಾಧಿಕಾರಿಗಳು ಆಗ್ರಹಿಸಿದರು.

ಸಮಿತಿಯ ಅಧ್ಯಕ್ಷ ಗಗನ ಫುಲೆ ನೇತ್ರತ್ವದಲ್ಲಿ ಭಾಲ್ಕಿ ತಾಲೂಕ ತಹಸೀಲ್ದಾರ್‌ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದರ್‌ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

“ಶಿವಣಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗ್ರಾಮದಲ್ಲಿ ವಾಸಿಸದಿದ್ದರೂ ಅಭ್ಯರ್ಥಿಯೊಬ್ಬರು ಸುಳ್ಳು ವಾಸಸ್ಥಳ ದಾಖಲೆ ಸೃಷ್ಟಿಸಿಕೊಂಡು ಶಿವಣಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಕರ ವಸೂಲಿಗಾರ ಹುದ್ದೆ ಪಡೆದಿದ್ದಾರೆ. ಆ ಮೂಲಕ ಸರ್ಕಾರದ ಕಣ್ಣಿಗೆ ಮಣ್ಣು ಎರಚುವ ಕೆಲಸ ಮಾಡಿದ್ದಾರೆ” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸುಳ್ಳು ವಾಸಸ್ಥಳ ಪ್ರಮಾಣ ಪತ್ರ ಸೃಷ್ಟಿಸಿ ಹುದ್ದೆ ಪಡೆದ ಅಭ್ಯರ್ಥಿ ಹಾಗೂ ಅದಕ್ಕೆ ಸಹಕರಿಸಿದ ಗ್ರಾಮ ಪಂಚಾಯಿತಿ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಹಾಗೂ ಕೃತ್ಯದಲ್ಲಿ ಭಾಗಿಯಾದ ಎಲ್ಲ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಿ ಕ್ರಿಮಿನಲ್ ಮೊಕ್ಕದಮ್ಮೆ ಹೂಡಿ, ಅಮಾನತು ಮಾಡುವಂತೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ ಲೋಕಸಭಾ ಕ್ಷೇತ್ರ | ದಶಕದ ʼಕಮಲʼ ಕೋಟೆ ಭೇದಿಸಲು ʼಕೈʼ ರಣತಂತ್ರ

ಈ ಸಂದರ್ಭದಲ್ಲಿ ಪ್ರಜಾ ಪ್ರಭುತ್ವ ಸಮಿತಿಯ ಸಂತೋಷ ಫುಲೆ, ಕಾಶೀನಾಥ್ ಮದಕಟ್ಟಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ...

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ...

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ...