ಹಾವೇರಿ | ಮಸೀದಿ ಅಭಿವೃದ್ಧಿ ಹಣ ದುರ್ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ: ಸಚಿವ ಝಮೀರ್

Date:

Advertisements

ಮಸೀದಿ ಅಭಿವೃದ್ಧಿ ಅನುದಾನ ಸೇರಿ ಸಮುದಾಯದ ಕಲ್ಯಾಣಕ್ಕೆ ನೀಡುವ ಹಣ ದುರ್ಬಳಕೆ ಮಾಡಿದರೆ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಝಮೀರ್ ಅಹಮದ್ ಖಾನ್ ಎಚ್ಚರಿಕೆ ನೀಡಿದ್ದಾರೆ.

ಹಾವೇರಿಯಲ್ಲಿ ಹಾವೇರಿ-ಗದಗ ಜಿಲ್ಲೆಗಳ ವಖ್ಫ್ ಅದಾಲತ್ ಉದ್ಘಾಟನೆ ಮಾಡಿ ಮಾತನಾಡಿದ ಅವರು, ವಕ್ಫ್ ಬೋರ್ಡ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಮಸೀದಿ ಅಭಿವೃದ್ಧಿ, ಕಬರಸ್ಥಾನ ನಿರ್ವಹಣೆ ಸೇರಿ ಸಮುದಾಯದ ಕಲ್ಯಾಣಕ್ಕೆ ನೀಡುವ ಅನುದಾನದ ಹಣ ದುರ್ಬಳಕೆ ಆಗುತ್ತಿರುವ ದೂರುಗಳು ಬಂದಿವೆ. ಅದೇ ರೀತಿ ಅನುದಾನ ಕೊಡಿಸಿದ್ದೇವೆ ಎಂದು ಲಂಚ ಪಡೆಯುತ್ತಿರುವ ಬಗ್ಗೆಯೂ ಮಾಹಿತಿ ಬಂದಿದ್ದು, ಯಾವುದೇ ಕಾರಣಕ್ಕೂ ಇದನ್ನು ಸಹಿಸುವುದಿಲ್ಲ ಎಂದು ಹೇಳಿದರು.

ಜಮೀರ್ 3

ಯಾರಾದರೂ ಲಂಚ ಕೇಳಿದರೆ ಮೊದಲು ಪೊಲೀಸ್ ಠಾಣೆಗೆ ದೂರು ನೀಡಿ ನನ್ನ ಗಮನಕ್ಕೆ ತನ್ನಿ. ಅವರನ್ನು ಜೈಲಿಗೆ ಹಾಕಿಸುವ ಕೆಲಸ ನಾನೇ ಮಾಡುತ್ತೇನೆ. ಯಾರೇ ಆಗಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Advertisements

ವಕ್ಫ್ ಆಸ್ತಿ ಉಳಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ. ಅದು ದೇವರ ಕೆಲಸ ಎಂದು ಹೇಳಿದ ಸಚಿವರು, ವಕ್ಫ್ ಬೋರ್ಡಿನಿಂದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಹಾಗೂ ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಈ ಬಗ್ಗೆ ಹೆಚ್ಚು ಆಸಕ್ತಿ ವಹಿಸಿ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಹೃದಯ ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ರಾಯಚೂರು | ಏಮ್ಸ್‌ ಮಂಜೂರಾತಿಗಾಗಿ ಹೈಕಮಾಂಡ್‌ಗೆ ಒತ್ತಾಯಿಸುವೆ : ಕೇಂದ್ರ ಸಚಿವ ವಿ ಸೋಮಣ್ಣ

ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದು. ಇದು ದುರುದ್ದೇಶದಿಂದ ಕೂಡಿದೆ. ವಕ್ಫ್ ಆಸ್ತಿ ಸರ್ಕಾರದ್ದಲ್ಲ. ಅದು ಸಮುದಾಯದ್ದು. ಕಾಯ್ದೆ ತಿದ್ದುಪಡಿಗೆ ನಮ್ಮ ವಿರೋಧ ಇದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಹಾವೇರಿ-ಗದಗ ಜಿಲ್ಲೆಯ 32 ಮಸೀದಿಗಳ ಅಭಿವೃದ್ಧಿಗೆ ₹8.50 ಕೋಟಿ ರೂ. ಅನುದಾನದ ಚೆಕ್ ವಿತರಿಸಲಾಯಿತು.

ವಕ್ಫ್ ಅದಾಲತ್ ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ, ಎರಡೂ ಜಿಲ್ಲೆಗಳಲ್ಲಿ ಬಾಕಿ ಇರುವ ಖಾತೆ ಸೇರಿದಂತೆ ಸರ್ವೆ ಹಾಗೂ ಇತರೆ ಪ್ರಕರಣಗಳನ್ನು ಒಂದು ತಿಂಗಳಲ್ಲಿ ಇತ್ಯರ್ಥಪಡಿಸಲು ಗಡುವು ನೀಡಿದರು.

ಈ ಸಂದರ್ಭ ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಹಾವೇರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ, ಮಾಜಿ ಸಂಸದ ಐ ಜಿ ಸನದಿ, ಮಾಜಿ ಶಾಸಕ ಅಜ್ಜಮ್ ಪೀರ್ ಖಾದ್ರಿ, ಯಾಸೀರ್ ಪಟಾನ್, ಫೈಸ್ ಇಬ್ರಾಹಿಂ, ಸಿರಾಜ್ ಉಪಸ್ಥಿತರಿದ್ದರು.

ಮೀಟಿಂಗ್
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X