ರಾಯಚೂರು | ಕವಿತಾಳ ಪಿ.ಎಸ್.ಐ ಅಮಾನತುಗೊಳಿಸದಿದ್ದರೆ ಸತ್ಯಾಗ್ರಹ : ಗಂಗಪ್ಪ ಎಚ್ಚರಿಕೆ

Date:

Advertisements

ಸಿರವಾರ ತಾಲ್ಲೂಕು ಕವಿತಾಳ ಪಿ.ಎಸ್.ಐ ವೆಂಕಟೇಶ ಅವರು ಅಸ್ಪೃಶ್ಯರ ದೂರುಗಳನ್ನು ದಾಖಲು ಮಾಡಿಕೊಳ್ಳಲು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಇಂತಹ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘಟನೆ ಜಿಲ್ಲಾಧ್ಯಕ್ಷ ಗಂಗಪ್ಪ ತೋರಣದಿನ್ನಿ ಆಗ್ರಹಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 15 ದಿನದೊಳಗೆ ಕವಿತಾಳ ಪಿಎಸ್‌ಐ ವೆಂಕಟೇಶ್‌ ಅವರನ್ನು ಅಮಾನತು ಮಾಡಬೇಕು. ಇಲ್ಲವಾದಲ್ಲಿ ಡಿಸೆಂಬರ್ 10 ರಂದು ಎಸ್.ಪಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ನವೆಂಬರ್ 15 ರಂದು ತೋರಣದಿನ್ನಿ ಕ್ರಾಸ್ ನಲ್ಲಿ ಶ್ರೀ ಯಲ್ಲಮ್ಮ ದೇವಿ ಜಾತ್ರೆಯ ವೇಳೆ ನಾಯಕ ಮತ್ತು ಮಾದಿಗ ಸಮುದಾಯದವರ ನಡುವೆ ನಡೆದ ಗಲಾಟೆಯಲ್ಲಿ ಮಾದಿಗ ಸಮುದಾಯದ ಯುವಕ ಮಾವುತ್ಸಂಗ್ ನಲಿನ್ ಕುಮಾರ್‌ಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆ ದಾಖಲಾಗಿದ್ದರು. ಆದರೂ ಸಹ ಯಾರೊಬ್ಬ ಪೊಲೀಸರು ಅಲ್ಲಿಗೆ ತೆರಳಿಲ್ಲ ಎಂದು ಅಸಮಾಧಾನ ಹೊರಹಾಕಿದರು.

Advertisements

ಹಲ್ಲೆಗೊಳಗಾದ ಯುವಕ ದೂರು ದಾಖಲಿಸಲು ಠಾಣೆಗೆ ಬಂದರೂ ದೂರು ದಾಖಲಿಸದೆ ರಾಜೀ ಸಂಧಾನಕ್ಕೆ ಮುಂದಾಗಿದ್ದಾರೆ. ಮೇಲಾಧಿಕಾರಿಗಳ ಗಮನಕ್ಕೆ ತಂದಾಗ ಎರಡು-ಮೂರು ದಿನಗಳ ನಂತರ ದೂರು ದಾಖಲಿಸಿಕೊಳ್ಳಲಾಗಿದೆ.

ಮಾದಿಗ ಜನಾಂಗದವರು ಮೇಲೆ ಸುಳ್ಳು ಪ್ರಕರಣವನ್ನು ಕೂಡಲೇ ದಾಖಲಿಸಲಾಗಿದೆ. ಅದು ಅಲ್ಲದೆ ದೂರಿನಲ್ಲಿ ಪ್ರಸ್ತಾಪಿಸಿದ ವ್ಯಕ್ತಿಗಳಲ್ಲಿ ಕೆಲವರು ಸುಕ್ಷೇತ್ರ ಹುಲಿಗಿ ಹಾಗೂ ಮಸ್ಕಿಯಲ್ಲಿದ್ದರು. ಪ್ರತ್ಯಕ್ಷ ಸಾಕ್ಷಿಗಳೆಂದು ಹೆಸರಿಸಿದವರಿಗೂ ದೂರಿನ ಬಗ್ಗೆ ಮಾಹಿತಿ ಇಲ್ಲ. ಹೀಗೆ ದಲಿತರು ಮತ್ತು ಮೇಲ್ವರ್ಗದವರ ನಡುವೆ ತಾರತಮ್ಯ ನೀತಿಯನ್ನು ಅನುಸರಿಸುತ್ತಿದ್ದಾರೆ. ಆದ್ದರಿಂದ ಪಿಎಸ್‌ಐ ವೆಂಕಟೇಶ್ ಅವರನ್ನು 15 ದಿನಗಳೊಳಗೆ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ರಾಯಚೂರು | ಮಹಾರಾಷ್ಟ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರಲು ಇವಿಎಂ ದುರ್ಬಳಕೆ: ವಸಂತ ಕುಮಾರ್

ಸುದ್ದಿಗೋಷ್ಠಿಯಲ್ಲಿ ಮಾವುತ್ಸುಂಗ ನಲಿನ್ ಕುಮಾರ್, ಜೋಸೆಫ್‌, ಕರಿಯಪ್ಪ ತೋರಣದಿನ್ನಿ, ಮೌನೇಶ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X