ʼಭಾರತ್ ಜೋಡೋʼ ಪಾದಯಾತ್ರೆಯ ನಂತರ ಕಾಂಗ್ರೆಸ್‌ಗೆ ಹೊಸ ಶಕ್ತಿ ಬಂದಿದೆ : ವಿ.ಎಸ್ ಉಗ್ರಪ್ಪ

Date:

Advertisements
  • 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ.
  • ಜೋಡೋ ಯಾತ್ರೆ ಮೂಲಕ ಜನರಲ್ಲಿ ರಾಷ್ಟ್ರ ಪ್ರೇಮ, ಭಾವೈಕ್ಯತೆ , ಸೌಹಾರ್ದತೆ ಬಿತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್‌ ಗಾಂಧಿ ನೇತ್ರತ್ವದಲ್ಲಿ ನಡೆದ ʼಭಾರತ್ ಜೋಡೋʼ ಪಾದಯಾತ್ರೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಹೊಸ ಶಕ್ತಿ ಬಂದಿದ್ದು, ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದರು.

ಬಳ್ಳಾರಿ ನಗರದ ಸರ್ಕಾರಿ ವಸತಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷದ ಯುವ  ಮುಖಂಡ ರಾಹುಲ್ ಗಾಂಧಿ ಅವರು ಕಳೆದ ವರ್ಷ ಭಾರತ್ ಜೋಡೋ ಯಾತ್ರೆ ಕೈಗೊಂಡು ಇಂದಿಗೆ ಒಂದು ವರ್ಷವಾಗಿದೆ. ಭಾರತದ ಇತಿಹಾಸದಲ್ಲಿ ಗಾಂಧೀಜಿ, ವಿನೋಬಾ ಭಾವೆ ಸೇರಿದಂತೆ ಅನೇಕರು ದೇಶದ ಸಮಸ್ಯೆಗಳನ್ನು ವಿದ್ಯಮಾನಗಳನ್ನು ಅರ್ಥೈಸಿಕೊಳ್ಳಲು ಪಾದಯಾತ್ರೆ ಮಾಡಿದ್ದರು. ಅದೇ ರೀತಿಯಲ್ಲಿ ರಾಹುಲ್ ಗಾಂಧಿಯವರು ಕಳೆದ ವರ್ಷ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಾರೆ” ಎಂದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಕೈಗೊಂಡು ದೇಶದ ವಿವಿಧ ವಿಷಯ ಮತ್ತು ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಹಾಗೂ ಜನರಲ್ಲಿ ಸಾಮರಸ್ಯ, ಐಕ್ಯತೆ ಮೂಡಿಸಲು ದೇಶದ ವಿವಿಧ ಆಯಾಮಗಳು ಅರ್ಥೈಸಿಕೊಳ್ಳಲು ಪಾದಯಾತ್ರೆ ಹಮ್ಮಿಕೊಂಡ ಏಕೈಕ ರಾಜಕಾರಣಿ ರಾಹುಲ್ ಗಾಂಧಿ, ಪಾದಯಾತ್ರೆ ಮೂಲಕ ಜನರಲ್ಲಿ ರಾಷ್ಟ್ರ ಪ್ರೇಮ, ರಾಷ್ಟ್ರ ಭಕ್ತ, ಸೌಹಾರ್ದತೆ, ಸಾಮರಸ್ಯ ಮೂಡಿಸಿ ಮಹಾನ್ ರಾಷ್ಟ್ರ ನಾಯಕನಾಗಿ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಹೊರಹೊಮ್ಮಿದ್ದಾರೆ” ಎಂದು ಬಣ್ಣಿಸಿದರು.

Advertisements

“ಮುಖಂಡ ರಾಹುಲ್ ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆ, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ನಂತರ ಕಾಂಗ್ರೆಸ್ ಪಕ್ಷಕ್ಕೆ ಹೊಸ ಶಕ್ತಿ ಬಂದಿದೆ. ಕಾಂಗ್ರೆಸ್ ಪಕ್ಷದ ವಕ್ತಾರರಾದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ಕಾಂಗ್ರೆಸ್ ಪಕ್ಷ ಸಂಘಟಿತವಾಗಿದೆ. ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡುವಲ್ಲಿ ಕಾಂಗ್ರೆಸ್ಸಿನ ಭಾರತ್ ಜೋಡೋ ಪಾದಯಾತ್ರೆ ಯಶಸ್ಸು ಕಂಡಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಉದ್ಯೋಗ, ಬೆಲೆ ಏರಿಕೆ ನಿಯಂತ್ರಣಕ್ಕೆ ಆಗ್ರಹ

ಸುದ್ದಿಗೋಷ್ಠಿಯಲ್ಲಿ ವೆಂಕಟೇಶ್ ಹೆಗ್ಡೆ, ಸಂಗಕಲ್ಲು ವಿಜಯ್ ಕುಮಾರ್ ಸೇರಿದಂತೆ ಮತ್ತಿತರಿದ್ದರು.

ವರದಿ: ರಾಧಾಕೃಷ್ಣ, ಸಿಟಿಜನ್‌ ಜರ್ನಲಿಸ್ಟ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X