ಬೀದರ್‌ | ಸಂವಿಧಾನ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳಿ : ವಿನೋದ್‌ ರತ್ನಾಕರ್‌

Date:

ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಯೊಬ್ಬ ಭಾರತೀಯ ಪ್ರಜೆಗಳಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ಹಾಗೂ ಸಮಾನತೆ ಕಲ್ಪಿಸುವ ಉದ್ದೇಶದಿಂದ ಸಂವಿಧಾನವನ್ನು ಈ ದೇಶಕ್ಕೆ ಕೊಟ್ಟಿದ್ದಾರೆ. ಆದರೆ ಕೆಲವು ವ್ಯಕ್ತಿಗಳು ಮತ್ತು ಸಂಘಟನೆಗಳು ತಮ್ಮ ಸ್ವಾರ್ಥಪೂರಿತ ಉದ್ದೇಶಗಳಿಗೆ ಹೊಸ ಸಂವಿಧಾನ ರಚನೆಯ ಆಶಯಗಳನ್ನು ವ್ಯಕ್ತಪಡಿಸುತ್ತಿದ್ದು, ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದಲಿತ ಯುನಿಟಿ ಮೂಮೆಂಟ್‌ ಸಂಸ್ಥಾಪಕ ವಿನೋದ ರತ್ನಾಕರ್‌ ಒತ್ತಾಯಿಸಿದ್ದಾರೆ.

- Advertisement -

ʼಹೊಸ ಸಂವಿಧಾನ ರಚನೆಯ ಉದ್ದೇಶವು ದೇಶದ ಏಕತೆ, ಅಖಂಡತೆ ಮತ್ತು ಪ್ರಜಾಪ್ರಭುತ್ವ ವಿರುದ್ಧದ ಒಂದು ಕೃತ್ಯ. ಈ ರೀತಿಯ ಚಟುವಟಿಕೆಗಳು ಸಂವಿಧಾನದ ಮೂಲಭೂತ ತತ್ವಗಳನ್ನು ಘಾಸಿಗೊಳಿಸಲು ಯತ್ನಿಸುತ್ತವೆ. ಇದನ್ನು ಯಾವುದೇ ರೀತಿಯಲ್ಲಿ ಸಹಿಸಲಾಗುವುದಿಲ್ಲʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ʼಭಾರತದ ಸಂವಿಧಾನವು ಎಲ್ಲ ಧರ್ಮಗಳಿಗೂ ಸಮಾನ ಮಹತ್ವವನ್ನು ಒದಗಿಸುತ್ತದೆ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ಲಿಂಗ, ಜಾತಿ, ಧರ್ಮ, ಭಾಷೆ ಎಂಬ ಭೇದವಿಲ್ಲದೆ ಪ್ರತಿಯೊಬ್ಬ ವ್ಯಕ್ತಿಗೆ ಸಮಾನ ಅವಕಾಶವನ್ನು ನೀಡುತ್ತದೆ. ಸಮಾಜದಲ್ಲಿ ಇರುವ ಅಸಮಾನತೆಗಳನ್ನು ಪರಿಹರಿಸಲು ಕಾನೂನು ಮತ್ತು ಆಡಳಿತ ಕ್ರಮಗಳನ್ನು ಒದಗಿಸುವ ಮೂಲಕ ಸಾಮಾಜಿಕ ನ್ಯಾಯ ಎತ್ತಿ ಹಿಡಿಯುತ್ತದೆ. ಹೀಗಾಗಿ ದೇಶದ ಸಂವಿಧಾನದ ಶ್ರೇಷ್ಠತೆಯನ್ನು ಯಾವ ಕಾರಣಕ್ಕೂ ಬದಲಿಸುವ ಅಗತ್ಯವಿಲ್ಲ. ಅದರ ಪ್ರತಿಯೊಂದು ಪ್ರಕರಣವು ಭಾರತದ ಪ್ರಗತಿಯನ್ನು ದೃಢಪಡಿಸಲು ರೂಪಿತವಾಗಿದೆʼ ಎಂದು ವಿಶ್ಲೇಷಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೋಗಿಲೆ ಕಂಠದ ಪ್ರಕೃತಿಗೆ ಬೇಕಿದೆ ಪ್ರೋತ್ಸಾಹ

ʼಸಂವಿಧಾನ ವಿರೋಧಿ ಕೃತ್ಯಗಳಿಗೆ ಜವಾಬ್ದಾರಿ ಆಗಿರುವವರನ್ನು ಗುರುತಿಸಿ, ಅವರ ವಿರುದ್ಧ ಸರ್ಕಾರ ಹಾಗೂ ಪೊಲೀಸ್ ಇಲಾಖೆಕಾನೂನು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಲ್ಲಿ ಸಂವಿಧಾನದ ಮಹತ್ವವನ್ನು ವಿವರಿಸುವ ಜಾಗೃತಿ ಕಾರ್ಯಕ್ರಮಗಳನ್ನು ಸರ್ಕಾರ ಆಯೋಜಿಸಬೇಕು. ದೇಶದ ಸಂವಿಧಾನ ವಿರೋಧಿ ಚಟುವಟಿಕೆಗಳ ಕುರಿತು ತಕ್ಷಣವೇ ಗಂಭೀರ ತನಿಖೆ ನಡೆಸಿ, ಸಂವಿಧಾನಕ್ಕೆ ಹಾನಿಯಾಗುವುದು ತಪ್ಪಿಸಬೇಕು. ಭಾರತದ ಸಂವಿಧಾನ ಬದಲಾಯಿಸಲು ಯತ್ನಿಸುವಂತಹ ಅಪ್ರಜಾಪ್ರಭುತ್ವ ಶಕ್ತಿಗಳ ವಿರುದ್ಧ ಕಠಿಣ ಕಾನೂನುಬದ್ಧ ಕ್ರಮ ಜರುಗಿಸಲು ಹೊಸ ಕಾನೂನುಗಳ ಪ್ರಸ್ತಾಪ ಮಾಡಬೇಕುʼ ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರೌಂಡ್ ರಿಪೋರ್ಟ್ | ಮೆರವಣಿಗೆಯ ದಾರಿಯಿಂದ ರಾಜಕೀಯದ ದಾರಿಗೆ: ಟಿ. ನರಸೀಪುರದಲ್ಲಿ ಸಹಬಾಳ್ವೆಯ ಪ್ರಶ್ನೆ

2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ,...

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...