ವಿಜಯಪುರ | ಆಲಮಟ್ಟಿ ಜಲಾಶಯ; ಅಣೆಕಟ್ಟೆ ಎತ್ತರ ಆಗಲೇಬೇಕು: ಶಾಸಕ ಯಶವಂತರಾಯ ಗೌಡ

Date:

Advertisements

ಆಲಮಟ್ಟಿ ಜಲಾಶಯದ ಅಣೆಕಟ್ಟು ಎತ್ತರವನ್ನು ಹೆಚ್ಚಿಸುವ ನಿರ್ಧಾರದಿಂದ ಸರಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು. ಆಲಮಟ್ಟಿ ಅಣೆಕಟ್ಟು ಎತ್ತರ ಆಗಲೇಬೇಕು ಎಂದು ವಿಜಯಪುರ ಜಿಲ್ಲೆ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಸರಕಾರವನ್ನು ಒತ್ತಾಯಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಅಣೆಕಟ್ಟು ಎತ್ತರವನ್ನು ಹೆಚ್ಚಳ ಮಾಡುವಂತೆ ರೈತರು ನಡೆಯುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಒಂದು ವರ್ಷದವರೆಗೆ ಜನಪ್ರಿಯ ಯೋಜನೆಗಳು ನಿಂತರೂ ಚಿಂತೆಯಿಲ್ಲ. ಆದರೆ ಅಣೆಕಟ್ಟು ಎತ್ತರ ಹೆಚ್ಚಳ ನಿಲ್ಲಬಾರದು. ಈ ಭಾಗದ ರೈತರ ತ್ಯಾಗಕ್ಕೆ ಬೆಲೆ ಬರಬೇಕಾದರೆ, ಅಣೆಕಟ್ಟು ಎತ್ತರವಾಗಲೇಬೇಕಿದೆ ಎಂದರು.

ಅಣೆಕಟ್ಟು ಎತ್ತರ ಹೆಚ್ಚಳ ನಮ್ಮ ಪಕ್ಷದ ಹಾಗೂ ಸರ್ಕಾರದ ಬದ್ಧತೆ ಸಹ ಹೌದು. ಸರ್ಕಾರ ಈ ಕಾರ್ಯಸಾಧನೆ ಮಾಡಲಿದೆ ಎಂಬ ವಿಶ್ವಾಸವಿದೆ. ರೈತರ ವಿಷಯ ಬಂದಾಗ ಪಕ್ಷಭೇದ ಮರೆತು ಒಂದಾಗುತ್ತೇವೆ. ಸರ್ಕಾರಗಳು ಕೃಷ್ಣ, ಕಾವೇರಿಗೆ ನೀಡಿದ ಆದ್ಯತೆಯನ್ನು ಉಳಿದ ನದಿಗಳಿಗೂ ನೀಡಬೇಕು. ಭೀಮೆಯ ಬಗ್ಗೆ ಗಮನಹರಿಸಲಿ. ಕೃಷ್ಣಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಘೋಷಣೆಯಾಗಬೇಕಿದೆ. ಸರ್ಕಾರ ನಿರೀಕ್ಷಿತ ಪ್ರಮಾಣದಲ್ಲಿ ಕೃಷ್ಣೆಗೆ ಅನುದಾನ ನೀಡಿಲ್ಲ. ಆದರೆ ಇನ್ನೂ ಮೂರು ವರ್ಷಗಳಿವೆ. ಖಂಡಿತವಾಗಿಯೂ ಆದ್ಯತೆಯ ದೊಡ್ಡ ಅನುದಾನ ದೊರಕುವ ನಿರೀಕ್ಷೆ ಇದೆ ಎಂದರು.

Advertisements

ಸರ್ಕಾರ ಈ ವಿಷಯದಲ್ಲಿ ರೈತರಿಗೆ ಅನ್ಯಾಯ ಮಾಡಬಾರದು. ಈ ವಿಷಯದಲ್ಲಿ ಆತಂಕ್ಕೊಳಗಾಗಿರುವ ರೈತರು ಪ್ರತ್ಯೇಕತೆ ಬೇಡಿಕೆ ಇರಿಸಿದ್ದಾರೆ. ನಮ್ಮ ನಾಡು ಕಟ್ಟಲು ಅನೇಕ ಮಹನೀಯರು ಶ್ರಮಿಸಿದ್ದಾರೆ. ಹೀಗಾಗಿ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಂಡು ಪ್ರತ್ಯೇಕತೆ ಭಾವನೆ ಬೆಳೆಯದಂತೆ ನೋಡಿಕೊಳ್ಳಬೇಕಾಗಿರುವುದು ಸರ್ಕಾರದ ಜವಾಬ್ದಾರಿ ಎಂದರು.

ಇದನ್ನೂ ಓದಿ : ವಿಜಯಪುರ | ಶಾಲೆಗೆ ಹೋಗುವಾಗ ಪುಢಾರಿಗಳ ಕಿರುಕುಳ; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ರೈತರ ವಿಷಯದಲ್ಲಿ ರಾಜಕಾರಣ ಮಾಡಿದರೆ ಅದು ಅನ್ನದಾತನಿಗೆ ಮಾಡುವ ಮೋಸ. ಹೀಗಾಗಿ ರೈತರಿಗೆ ಅನ್ಯಾಯವಾದಾಗ ನಮ್ಮದೇ ಸರ್ಕಾರ ಇದ್ದಾಗಲೇ ಟೀಕಿಸಿದ್ದೆ ಎಂದರು.

ಹೊಸ ಜಿಲ್ಲೆಗಳ ರಚನೆ ಸಂದರ್ಭದಲ್ಲಿ ಇಂಡಿಯನ್ನು ಜಿಲ್ಲಾಯನ್ನಾಗಿ ಮಾಡಬೇಕು. ಒಂದು ವೇಳೆ ಕಡೆಗಣಿಸಿದರೆ ಕ್ಷೇತ್ರದ ಜನರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಗ್ಯಾರಂಟಿ ಯೋಜನೆ ಕಡುಬಡವರಿಗೆ ದೊಡ್ಡ ಪ್ರಯೋಜನವಾಗಿದೆ. ಇದು ನಮ್ಮ ಬದ್ದತೆ. ಗ್ಯಾರಂಟಿಗಳು ಅತ್ಯಗತ್ಯ. ಅದರ ಜೊತೆಗೆ ಉಳಿದ ಅಭಿವೃದ್ಧಿ ಯೋಜನೆಗಳಿಗೂ ಆದ್ಯತೆ ನೀಡಬೇಕು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X