ಬಾಗಲಕೋಟೆ | ಹಿಂಗಾರು ಹಂಗಾಮಿನ ನೀರು ಸ್ಥಗಿತ

Date:

Advertisements

ಕೃಷ್ಣಾ ಅಣೆಕಟ್ಟು ಪ್ರದೇಶ ವ್ಯಾಪ್ತಿಯ ಎಲ್ಲ ಕಾಲುವೆಗಳಿಗೆ ಹಿಂಗಾರು ಹಂಗಾಮಿಗೆ ಏಪ್ರಿಲ್ 10  ಮಧ್ಯರಾತ್ರಿಯಿಂದ ನೀರು ಹರಿಸುವುದು ಸ್ಥಗಿತಗೊಳ್ಳಲಿದೆ.

ನವೆಂಬರ್ 23ರಂದು ಬೆಂಗಳೂರಿನಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆಯ ನದಿ ನೀರು ಬಳಕೆಯ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ(ಐಸಿಸಿ) ಡಿ.12ರಿಂದ ಮಾ.30 ರವರೆಗೆ ವಾರಾಬಂಧಿ ಪದ್ಧತಿಯಲ್ಲಿ ಹಿಂಗಾರು ಹಂಗಾಮಿಗೆ ನೀರು ಹರಿಸಲು ನಿರ್ಧರಿಸಲಾಗಿತ್ತು. ರೈತರ ಬೇಡಿಕೆಯ ಹಿನ್ನಲೆಯಲ್ಲಿ ಅದನ್ನು ಏ.10 ರವರೆಗೆ ವಿಸ್ತರಿಸಲಾಗಿತ್ತು. ಇದೀಗ, ನೀರಿನ ಹರಿವನ್ನು ನಿಲ್ಲಿಸಲಾಗುತ್ತಿದೆ.

“ಆಲಮಟ್ಟಿ ಜಲಾಶಯ ವ್ಯಾಪ್ತಿಯ 169 ಕೆರೆಗಳಿಗೆ ವರ್ಷದಲ್ಲಿ ಎರಡು ಬಾರಿ ನೀರು ಹರಿಸಲಾಗುತ್ತದೆ. ಈಗಾಗಲೇ ಬಹುತೇಕ ಕೆರೆಗಳ ಸಾಮರ್ಥ್ಯದ ಶೇ.50 ರಷ್ಟು ಭರ್ತಿಯಾಗಿವೆ” ಎಂದು ಆಲಮಟ್ಟಿ ನೀರಾವರಿ ವಲಯದ ಮುಖ್ಯ ಎಂಜಿನಿಯರ್ ಎಚ್. ಸುರೇಶ ತಿಳಿಸಿದರು.

Advertisements

“ಕೆರೆಗಳ ಭರ್ತಿಗೆ ಬೇಡಿಕೆ ಬಂದರೆ ಜಿಲ್ಲಾಧಿಕಾರಿಗಳ ಮೂಲಕ ಪ್ರಾದೇಶಿಕ ಆಯುಕ್ತರಿಗೆ ಅನುಮತಿಗಾಗಿ ಪತ್ರ ಬರೆಯಲಾಗುವುದು. ಕೆರೆಗಳ ಭರ್ತಿಗಾಗಿ 2 ಟಿಎಂಸಿ ಅಡಿಯಷ್ಟು ನೀರು ಕಾಯ್ದಿರಿಸಲಾಗಿದೆ. ಅಗತ್ಯ ಎನಿಸಿದರೆ ಹಾಗೂ ಅನುಮತಿ ದೊರೆತರೆ ಕೆರೆಗಳ ಭರ್ತಿಗಾಗಿ ನೀರು ಹರಿಸುತ್ತೇವೆ” ಎಂದು ಅವರು ತಿಳಿಸಿದರು.

“ಕಲಬುರ್ಗಿ, ಜೇವರ್ಗಿ, ಸಿಂದಗಿ, ಇಂಡಿ, ಲಿಂಗಸೂರು ಸೇರಿದಂತೆ ಸುತ್ತಮುತ್ತ ಪ್ರದೇಶಗಳಿಗೆ ಆಲಮಟ್ಟಿಯಿಂದ ನೀರು ಒದಗಿಸಲಾಗುತ್ತದೆ. ರಾಯಚೂರಿನ ಉಷ್ಣ ವಿದ್ಯುತ್ ಸ್ಥಾವರ, ಗೂಗಲ್ ಬ್ಯಾರೇಜ್‌ಗೂ ಬೇಸಿಗೆಯ ಬಳಕೆಗೆ ನೀರು ಮೀಸಲಿಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಭೂಗಳ್ಳರ ವಿರುದ್ಧ ಆಮ್ ಆದ್ಮಿ ಅಭ್ಯರ್ಥಿ ಶರಣಪ್ಪ ಸಜ್ಜಿಹೊಲ ಆಕ್ರೋಶ

519.60 ಮೀ ಗರಿಷ್ಠ ಎತ್ತರದ ಜಲಾಶಯದಲ್ಲಿ ಸದ್ಯ 509.75 ಮೀ.ವರೆಗೆ ನೀರು ಸಂಗ್ರಹವಿದೆ. ಜಲಾಶಯದಲ್ಲಿ 28.708 ಟಿಎಂಸಿ ಅಡಿ ನೀರು ಸಂಗ್ರಹವಿದ್ದರೂ, 11.088 ಟಿಎಂಸಿ ಅಡಿ ನೀರು ಮಾತ್ರ ಬಳಕೆಗೆ (ಲೈವ್ ಸ್ಟೋರೇಜ್) ಲಭ್ಯವಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 17 ಟಿಎಂಸಿ ಅಡಿಯಷ್ಟು ಕಡಿಮೆ ನೀರು ಸಂಗ್ರಹವಿದೆ.

ಕಾಲುವೆಗಳ ಜಾಲದ ದುರಸ್ತಿ ಹಾಗೂ ನಿರ್ವಹಣೆಯ ಕ್ಲೋಸರ್ ಕಾಮಗಾರಿ ಈ ವರ್ಷ ನಡೆಯುವುದು ಅನುಮಾನ ಎನ್ನಲಾಗಿದೆ. ಸದ್ಯ ಚುನಾವಣೆ ನೀತಿ ಸಂಹಿತೆಯಿದೆ. ಯಾವುದೇ ಟೆಂಡರ್ ಕರೆಯಲು ಆಯೋಗದ ಅನುಮತಿ ಅಗತ್ಯ ಹಾಗೂ ಕ್ಲೋಸರ್ ಕಾಮಗಾರಿಗಾಗಿ ಅನುದಾನವೂ ಸದ್ಯ ಲಭ್ಯವಾಗಿಲ್ಲ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

Download Eedina App Android / iOS

X