ಆಲಮೇಲ | ಸರ್ಕಾರಿ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜಿಗೆ ದಸಂಸ ಆಗ್ರಹ

Date:

ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಿರ್ಮಾಣವಾಗಿರುವ ಪಟ್ಟಣ ಪಂಚಾಯತ್ ಸರ್ಕಾರಿ ವಾಣಿಜ್ಯ ಮಳಿಗೆಗಳನ್ನು ಬಹಿರಂಗವಾಗಿ ಹರಾಜು ಮಾಡುವಂತೆ ಆಗ್ರಹಿಸಿ‌ ದಲಿತ ಸಂಘರ್ಷ ಸಮಿತಿ ಸಿಂದಗಿ ತಾಲೂಕು ಘಟಕದಿಂದ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

ಶಿವಕುಮಾರ ಮೇಲಿನಮನಿ ಮನವಿ ಸಲ್ಲಿಸಿ ಮಾತನಾಡಿ, “ವಾಣಿಜ್ಯ ಮಳಿಗೆಗಳನ್ನು ಹರಾಜು ಮಾಡುವ ಬಗ್ಗೆ ಪಟ್ಟಣ ಪಂಚಾಯಿತಿ ಸದಸ್ಯರ ಸಭೆ ಕರೆದು ಎಲ್ಲರ ಒಪ್ಪಿಗೆ ಪಡೆದುಕೊಳ್ಳಬೇಕು. ಕಾನೂನಿನ ರೀತಿ ಸಾರ್ವಜನಿಕ ಮಾಹಿತಿಗಾಗಿ ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟಿಸುವುದು ಮತ್ತು ಕರಪತ್ರಗಳನ್ನು ಹಂಚುವುದು, ಡಂಗೂರ ಸಾರುವ ಮೂಲಕ ಪ್ರಚಾರ ಮಾಡಿ ಹರಾಜು ಮಾಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

“ಒಟ್ಟು 21 ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಬೇಕಿದ್ದು, ಅವುಗಳಲ್ಲಿ 17 ಕಟ್ಟಡಗಳು ಮಾತ್ರ ನಿರ್ಮಾಣವಾಗಿವೆ. ಕಾಮಗಾರಿ ಪೂರ್ಣಗೊಳಿಸದೆ ಆತುರದಲ್ಲಿ ಹರಾಜು ಮಾಡಲು ಮುಂದಾಗಿದ್ದಾರೆ. ಆಲಮೇಲ ಪಟ್ಟಣ ಪಂಚಾಯಿತಿಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಇತಿಹಾಸದ ಪುಟ ಸೇರಿದ ʼಅಂಬೇಡ್ಕರ್ ಗೀತೆʼಗಳು: ಪ್ರಶಂಸೆ ಗಳಿಸಿದ ಟೈಗರ್ ನಾಗ್

“ಕೆಪಿಆರ್ ಸಕ್ಕರೆ ಕಾರ್ಖಾನೆಯಿಂದ ಪ್ರತಿವರ್ಷ 7.45 ಲಕ್ಷ ತೆರಿಗೆ ಹಣ, ಪಟ್ಟಣದ ತರಕಾರಿ ಮಾರುಕಟ್ಟೆಯಿಂದ 5.40 ಲಕ್ಷ ರೂ. ಸೇರಿದಂತೆ ಪಂಚಾಯತಿಗೆ ಬರುವ ಆದಾಯದಲ್ಲಿ ಅವ್ಯವಹಾರ ಮಾಡಲಾಗಿದೆ. ಲೋಕಾಯುಕ್ತರು ಸ್ವಯಂ ಪ್ರೇರಣೆಯಿಂದ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಶಶಿಧರ ನಾಯ್ಕೋಡಿ, ರಾಜು ಮೇತ್ರಿ, ಅನಿಲ ನಾಯ್ಕೋಡಿ, ಶರಣು ಬೇವಿನಗಿಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...