ಕರ್ನಾಟಕದಲ್ಲಿ ‘ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ’ ಅಸ್ತಿತ್ವಕ್ಕೆ

Date:

Advertisements

ಬೆಂಗಳೂರಿನ ಕಾನ್ಶಿರಾಮ್ ನಗರದ ಅಂಬೇಡ್ಕರ್ ಭವನದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಕಾನ್ಶಿರಾಮ್ ಸಾಹೇಬರ ಅನುಯಾಯಿಗಳ ಸರ್ವ ಸದಸ್ಯರ ಸಭೆ ನಡೆಯಿತು. ಈ ಸಭೆಯಲ್ಲಿ “ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ” ಎಂದು ಅಸ್ತಿತ್ವಕ್ಕೆ ತರಲಾಗಿದೆ ಎಂದು ಘೋಷಣೆ ಮಾಡಲಾಯಿತು.

ಬಹುಜನ ಸಮಾಜ ಚಳುವಳಿಯ ಹಿರಿಯ ನಾಯಕರಾದ ಮಾರಸಂದ್ರ ಮುನಿಯಪ್ಪ ಅವರನ್ನು ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಜೊತೆಗೆ ಬಹುಜನ ಚಳುವಳಿಯ ಹಿರಿಯ ನಾಯಕರಾದ ಎಂ. ಗೋಪಿನಾಥ್ ಅವರನ್ನು ರಾಷ್ಟ್ರೀಯ ಸಂಯೋಜಕರನ್ನಾಗಿ ಮತ್ತು ಆರ್ ಮುನಿಯಪ್ಪ ಅವರನ್ನು ರಾಜ್ಯ ಸಂಯೋಜಕರನ್ನಾಗಿ ಆಯ್ಕೆ ಮಾಡಲಾಯಿತು.

ಅಲ್ಲದೆ, 12 ಜನ ಹಿರಿಯ ನಾಯಕರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿಯೂ, 21 ಜನ ಮುಖಂಡರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಯೂ, 17 ಜನ ಮುಖಂಡರನ್ನು ರಾಜ್ಯ ಕಾರ್ಯದರ್ಶಿಗಳನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. 24 ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಯಿತು.

Advertisements
WhatsApp Image 2024 09 10 at 11.33.45 AM 1 edited

ಸಭೆಯ ಅಧ್ಯಕ್ಷತೆ ವಹಿಸಿದ್ದ ಮಾರಸಂದ್ರ ಮುನಿಯಪ್ಪ ಅವರು ಅಧ್ಯಕ್ಷೀಯ ಭಾಷಣ ಮಾಡಿ, ಹೊಸ ಪಕ್ಷದ ಹುದ್ದೆಯನ್ನು ವಹಿಸಿಕೊಂಡು ಬಾಬಾ ಸಾಹೇಬರ ಮತ್ತು ಕಾನ್ಶಿರಾಮ್ ಜೀ ಅವರ ಕನಸು ನನಸು ಮಾಡಲು ಶ್ರಮಿಸುವುದಾಗಿ ಘೋಷಣೆ ಮಾಡಿದರು.

ಇದನ್ನು ಓದಿದ್ದೀರಾ? ಬೆಂಗಳೂರು ವಿಶ್ವವಿದ್ಯಾನಿಲಯ | ಸಂಗೀತ ನಿರ್ದೇಶಕ ಗುರುಕಿರಣ್‌, ಸಮಾಜ ಸೇವಕ ರಾಜಣ್ಣಗೆ ಗೌರವ ಡಾಕ್ಟರೇಟ್ ಪ್ರದಾನ

ಬೆಂಗಳೂರಿನ ಬಹುಜನ ಚಳುವಳಿಯ ನಾಯಕರಾದ ಮಾನ್ಯ ಎಮ್ ಸತೀಶ್ ಚಂದ್ರ ಅವರು ಸ್ವಾಗತಿಸಿದರು. ಸಭೆಯನ್ನು ಉದ್ದೇಶಿಸಿ ಎಂ. ಗೋಪಿನಾಥ್,ಆರ್ ಮುನಿಯಪ್ಪ, ವೆಂಕಟಗಿರಿಯಯ್ಯ, ಲೋಕೇಶ್ ಚಂದ್ರ, ಮಣ್ಣೂರ್ ನಾಗರಾಜ್, ಪ್ರೊಫೆಸರ್ ಮೊಹಮ್ಮದ್ ಆಲಿ, ಕೆ.ಬಿ.ವಾಸು, ವೈ.ಸಿ. ಕಾಂಬಳೆ, ಗುರುಮೂರ್ತಿ ಮುಂತಾದವರು ಮಾತನಾಡಿದರು.

ಕನಕಪುರದ ಆಕಾಶ್ ಕಲಾತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ಮತ್ತು ಬಾಮ್ಸೆಫ್ ನ ಹಿರಿಯ ಮುಖಂಡರಾದ ಬಿಎಸ್ಎನ್ಎಲ್ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಪೂಜಾರಿ ಚಿಕ್ಕಣ್ಣ ವಂದಿಸಿದರು.

ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ
WhatsApp Image 2024 09 10 at 11.33.46 AM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X