ತುಮಕೂರು | ಲೈಂಗಿಕ ದೌರ್ಜನ್ಯ ಆರೋಪ; ಬ್ರಿಜ್‌ ಭೂಷಣ್‌ ವಿರುದ್ಧ ಕ್ರಮಕ್ಕೆ ಆಗ್ರಹ

Date:

  • ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಹೋರಾಟಗಾರ ಮೇಲೆ ಪೊಲೀಸ್‌ ದೌರ್ಜನ್ಯ
  • ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತಂದ ಕುಸ್ತಿಪಟುಗಳ ಪರವಾಗಿ ನಿಲ್ಲಬೇಕಿದೆ

ಅಂತರಾಷ್ಟ್ರೀಯ ಕ್ರಿಡಾಪಟುಗಳಿಗೆ ಆಗಿರುವ ಅನ್ಯಾಯ ಹಾಗೂ ಅವಮಾನವನ್ನು ಖಂಡಿಸಿ, ಬ್ರಿಜ್‌ ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತುಮಕೂರು ನಗರದ ಟೌನ್‌ಹಾಲ್ (ಬಿಜಿಎಸ್) ಸರ್ಕಲ್ ಬಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ನೇತೃತ್ವದಲ್ಲಿ ಕುಸ್ತಿ, ಕಬಡ್ಡಿ ಸೇರಿದಂತೆ ಇತರೆ ಕ್ರೀಡಾಪಟುಗಳು ಹಾಗೂ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಪ್ರತಿಭಟನೆಯಲ್ಲಿ ಮಾತನಾಡಿದ ಮುರಳೀಧರ ಹಾಲಪ್ಪ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಮಹಿಳಾ ಕ್ರೀಡಾಪಟುಗಳ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳುವ ಬದಲು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಮಹಿಳಾ ಕ್ರೀಡಾಪಟುಗಳನ್ನು ಪೊಲೀಸರು ಅಮಾನವೀಯವಾಗಿ ಎಳೆದೊಯ್ದ ರೀತಿ ಖಂಡನೀಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮಹಿಳೆಯರು ಕ್ರೀಡಾ ಜಗತ್ತಿಗೆ ಬರುವುದೇ ಅಪರೂಪ. ಅಂತಹುದರಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದು ಭಾರತದ ಹಿರಿಮೆ ಸಾರಿದ ಕುಸ್ತಿಪಟುಗಳಿಗೆ ನಮ್ಮ ನೆಲದಲ್ಲಿ ಅವಮಾನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕ್ರೀಡಾಪಟುಗಳ ಮತ್ತು ಅವರ ಪೋಷಕರ ಪರವಾಗಿ ನಮ್ಮ ಧ್ವನಿ ಇಡೀ ರಾಷ್ಟ್ರಕ್ಕೆ ತಲುಪಬೇಕು ಎಂಬ ನಿಟ್ಟಿನಲ್ಲಿ ಇಂದು ಸಾಂಕೇತಿಕವಾಗಿ ಕುಸ್ತಿ ಪಂದ್ಯ ಏರ್ಪಡಿಸಿ ನಮ್ಮೆಲ್ಲರ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದು, ಹಾಸ್ಟೆಲ್‌ಗೆ ಸೇರುವಂತಹ, ಕ್ರೀಡಾಂಗಣಕ್ಕೆ ಬರುವವರು, ರಾಷ್ಟ್ರ, ರಾಜ್ಯವನ್ನು ಪ್ರತಿನಿಧಿಸುವ ನಿಮ್ಮಗಳ ಜೊತೆ ನಾವಿದ್ದೇವೆ. ಯಾವುದೇ ಕೆಟ್ಟ ನಡುವಳಿಕೆಗಳಿಗೆ ಆಸ್ಪದ ಕೊಡಬಾರದು, ಆಯ್ಕೆ ಸಮಿತಿ, ಕೋಚ್ ಅಥವಾ ಪ್ರಾಯೋಜಕರಿಗೆ ಇದು ಎಚ್ಚರಿಕೆಯ ಸಂದೇಶ ಎಂದರು.

ದೆಹಲಿಯ ಜಂತರ್‌ಮಂಥರ್‌ನಲ್ಲಿ ಏ. 23 ರಿಂದ ಆರಂಭಗೊಂಡ ಹೋರಾಟಕ್ಕೆ ಇಂದಿಗೂ ನ್ಯಾಯ ಸಿಗದಿರುವುದು ಬೇಸರದ ಸಂಗತಿ. ಕುಸ್ತಿ ಒಂದೇ ಅಲ್ಲ, ಕ್ರಿಕೆಟ್, ಕಬಡ್ಡಿ, ಅಥ್ಲೆಟಿಕ್ಸ್ ಪ್ರತಿಯೊಂದರಲ್ಲೂ ಯಾರು ಧ್ವನಿ ಹೊರಗೆ ಹೇಳುವುದಕ್ಕೆ ಸಾಧ್ಯವಿಲ್ಲದೇ ಒಳಗೆಯೇ ಹೆಣ್ಣುಮಕ್ಕಳು ನೋವನ್ನು ಅನುಭವಿಸುತ್ತಿದ್ದಾರೋ ಅವರ ಪರವಾಗಿ ನಾವಿದ್ದೇವೆ ಎಂಬ ಧೈರ್ಯವನ್ನು ತುಂಬುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಕರ್ತವ್ಯಲೋಪ ಆರೋಪ; ಇಬ್ಬರು ಶಿಕ್ಷಕರು ಅಮಾನತು

ಹಿರಿಯ ಕುಸ್ತಿಪಟು ರೇವಣಸಿದ್ಧಯ್ಯ ಮಾತನಾಡಿ, ರಾಮಾಯಣ ಮಹಾಭಾರತದ ಕಾಲದಿಂದಲೂ ಹೆಸರುವಾಸಿಯಾದ ಕುಸ್ತಿ ಪಂದ್ಯಾವಳಿಯಲ್ಲಿ ಇಂದು ಮಹಿಳೆಯರು ಭಾಗವಹಿಸಿ ದೇಶದ ಕೀರ್ತಿ ಪತಾಕೆಯನ್ನು ಹಾರಿಸುತ್ತಿದ್ದು, ಇಂತಹ ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಬ್ರಿಜ್ ಭೂಷಣ್ ವಿರುದ್ಧ ಕೂಡಲೇ ಕ್ರಮ ಕೈಗೊಂಡು ಬಂಧಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಈ ವೇಳೆ ಅಂತರಾಷ್ಟ್ರೀಯ ಕ್ರೀಡಾಪಟು ಟಿ ಕೆ ಆನಂದ್, ರಾಷ್ಟ್ರೀಯ ಕ್ರೀಡಾಪಟು ಅನಿಲ್, ಸಿದ್ಧಲಿಂಗೇಗೌಡ, ಷಣ್ಮುಖಪ್ಪ, ಮೋಹನ್, ರೇವಣ ಸಿದ್ಧಯ್ಯ, ತರುಣೇಶ್, ನಟರಾಜಶೆಟ್ಟಿ, ಸಂಜೀವ್‌ಕುಮಾರ್, ಅನಿಲ್, ಗೀತಾ ರುದ್ರೇಶ್, ಸವಿತಾ, ಕವಿತಾ, ವಸುಂಧರ, ಸಿ ಡಿ ಜಯಶ್ರೀ, ಅನ್ನಪೂರ್ಣ, ಗೀತಾ, ಪ್ರೇಮ, ಲಕ್ಷ್ಮೀದೇವಮ್ಮ, ಟಿ ಕೆ ಆನಂದ್, ಪೈಲ್ವಾನ್ ಮಹೇಶ್, ಗಗನ್ ಗೌಡ, ಸಿದ್ಧರಾಜು, ಚಿಕ್ಕರಂಗಪ್ಪ, ತಾಹೇರಾ, ಪ್ರಕಾಶ್ ಸೇರಿದಂತೆ ಕುಸ್ತಿಪಟುಗಳು, ಹಲವಾರು ಕ್ರೀಡಾಪಟುಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...