ಮೀಸಲು ಅರಣ್ಯ ಭೂಮಿ ಒತ್ತುವರಿ ಆರೋಪ; ಸರ್ಕಾರಕ್ಕೆ ಹೈಕೋರ್ಟ್‌ ನೋಟೀಸ್

Date:

Advertisements

ತುಮಕೂರು ಜಿಲ್ಲೆಯ ದೇವರಾಯನ ದುರ್ಗ ಮೀಸಲು ಅರಣ್ಯ ಪ್ರದೇಶವಬನ್ನು ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟೀಸ್ ಜಾರಿ ಮಾಡಿದೆ. ನಾಲ್ಕು ವಾರಗಳೊಳಗೆ ವರದಿ ನೀಡುವಂತೆ ಸೂಚಿಸಿದೆ.

ತುಮಕೂರು ತಾಲೂಕು ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ 3.20 ಎಕರೆ ಅರಣ್ಯ ಭೂಮಿಯನ್ನು ವಡ್ಡರಹಳ್ಳಿ ನಿವಾಸಿ ಜೆ. ಶ್ವೇತಕುಮಾರಿ ಎಂಬವರು ಒತ್ತುವರಿ ಮಾಡಿಕೊಂಡಿದ್ದಾರೆ. ಆ ಭೂಮಿಯಲ್ಲಿ ಕಟ್ಟಣ ನಿರ್ಮಾಣ ಮಾಡಿದ್ದಾರೆ. ಒತ್ತುವರಿಯನ್ನು ತೆರವುಗೊಳಿಸಿ, ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಬೇಕು ಎಂದು ವಕ್ಕೋಡಿ ಗ್ರಾಮದ ಮಾರಣ್ಣ ಪಾಳೆಗಾರ ಎಂಬವರು ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಿದ್ದರು.

“ಶ್ವೇತಕುಮಾರಿ ಅವರು ಮುತ್ತಸಂದ್ರ ಗ್ರಾಮದ ಸರ್ವೆ ನಂ.17 ಮತ್ತು ವಡ್ಡರಹಳ್ಳಿ ಗ್ರಾಮದ ಸರ್ವೆ ನಂ.26ರ ಗೋಮಾಳ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಬಗ್ಗೆ, ಸಂಬಂಧಪಟ್ಟ ಅರಣ್ಯಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ, ಅರಣ್ಯಾಧಿಕಾರಿಗಳು ಮೌನವಾಗಿದ್ದಾರೆ. ಒತ್ತುವರಿ ತೆರವಿಗೆ ಆದೇಶಿಸಬೇಕು” ಎಂದು ಅರ್ಜಿದಾರರು ಕೋರ್ಟ್‌ ಮನವಿ ಮಾಡಿದ್ದಾರೆ.

Advertisements

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಲೆ ಹಾಗೂ ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ. ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ತುಮಕೂರು ಜಿಲ್ಲಾಧಿಕಾರಿ, ತುಮಕೂರು ತಹಶೀಲ್ದಾರ್, ತುಮಕೂರು ಭೂ ದಾಖಲೆಗಳ ಸಹಾಯಕ ನಿರ್ದೇಶಕ, ರಾಜ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ, ತುಮಕೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿದೆ.

ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿರುವ ಜೆ ಶ್ವೇತಾಕುಮಾರ್ ಅವರಿಗೂ ನೋಟೀಸ್ ಜಾರಿ ಮಾಡಿದೆ. ಸರ್ಕಾರ ಮತ್ತು ಪ್ರತಿವಾದಿ ಆರೋಪಿ ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಮುಂದೂಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

Download Eedina App Android / iOS

X