ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದಲ್ಲಿ ಉಪ್ಪಾರ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಉಪ್ಪಾರ ಸಮುದಾಯದ ಮುಖಂಡರು ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಉಪ್ಪಾರ ಸಮುದಾಯದ ಏಕೈಕ ಶಾಸಕ ಪುಟ್ಟರಂಗಶೆಟ್ಟಿ ಅವರು ನಾಲ್ಕ ಬಾರಿ ಗೆದ್ದಿದ್ದಾರೆ. ಆದರೂ ಅವರಿಗೂ ಸಚಿವ ಸ್ಥಾನ ಕೈತಪ್ಪಿದೆ. ಇದಿರಿಂದ ಉಪ್ಪಾರ ಸಮುದಾಯ ಕಡೆಗಣನೆ ಮಾಡಿದಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.
ಬಿಜೆಪಿಯ ಪ್ರಭಾವಿ ನಾಯಕರಲ್ಲೊಬ್ಬರಾದ ಮಾಜಿ ಸಚಿವ ವಿ ಸೋಮಣ್ಣ ವಿರುದ್ಧ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರೂ ಸಚಿವ ಸ್ಥಾನ ನೀಡದೆ ಕಡೆಗಣನೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಸಚಿವ ಸ್ಥಾನ ತಪ್ಪಿದ್ದಕ್ಕೆ ಬೇಸರ; ಪರಿಷತ್ ಸದಸ್ಯತ್ವಕ್ಕೆ ಬಿ ಕೆ ಹರಿಪ್ರಸಾದ್ ರಾಜೀನಾಮೆ?