ಜ್ಯೋತಿಷಿ ಸಲಹೆಯಂತೆ ವಿಧಾನಸೌಧದ ಕೊಠಡಿ ಪಡೆದ ಡಿಕೆಶಿ; ಪರಮೇಶ್ವರ್, ರಾಮಲಿಂಗಾರೆಡ್ಡಿಗೂ ಕೊಠಡಿ ಹಂಚಿಕೆ

Date:

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಡಾ.ಜಿ ಪರಮೇಶ್ವರ್ ಹಾಗೂ ರಾಮಲಿಂಗಾರೆಡ್ಡಿ ಅವರಿಗೆ ವಿಧಾನಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದೆ.

ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರವೀಂದ್ರ ಕೆ ಅವರು ಮೂವರಿಗೂ ವಿಧಾನಸಭೆಯ ಕೊಠಡಿಗಳನ್ನು ಹಂಚಿಕೆ ಮಾಡಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಡಿಕೆ ಶಿವಕುಮಾರ್ ಅವರ ಆಸೆಯಂತೆ ಅವರಿಗೆ 335, 336, 337, 337A ಸಂಖ್ಯೆಯ ಕೊಠಡಿಯನ್ನು ನೀಡಲಾಗಿದೆ. ಜ್ಯೋತಿಷಿ ಬಿಬಿ ಆರಾಧ್ಯ ಹೇಳಿದ್ದ ಲಕ್ಕಿ ನಂಬರ್ ಕೊಠಡಿ ಸಂಖ್ಯೆಯನ್ನು ಡಿಕೆಶಿಯವರು ಕೇಳಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಡಿಕೆ ಶಿವಕುಮಾರ್ ಅವರು ಗುರುವಾರ (ಮೇ 25) ಮಧ್ಯಾಹ್ನ ಅಭಿಜಿನ್ ಲಗ್ನದಲ್ಲಿ ತಮ್ಮ ಕೊಠಡಿ ಸಂಖ್ಯೆ 336ರಲ್ಲಿ ಪೂಜೆ ನೆರವೇರಿಸಲಿದ್ದಾರೆ ಎನ್ನುವ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ತಮ್ಮ ಕೊಠಡಿಗಳಿಗೆ ಸುಣ್ಣ-ಬಣ್ಣ ಬಳಿಯುವ ಕಾರ್ಯ ನಡೆದಿದೆ.

ಹಾಗೆಯೇ ಸಿದ್ದರಾಮಯ್ಯ ಹಾಲಿ ವಾಸ್ತವ್ಯ ಹೂಡಿರುವ ಶಿವಾನಂದ ಸರ್ಕಲ್ ಬಳಿ ಇರುವ ಸರ್ಕಾರಿ ನಿವಾಸ ಆಯ್ಕೆ ಮಾಡಿಕೊಳ್ಳುವಂತೆಯೂ ಆರಾಧ್ಯ ಅವರು ಡಿಕೆ ಶಿವಕುಮಾರ್ ಅವರಿಗೆ ಸಲಹೆ ನೀಡಿದ್ದಾರೆ ಎನ್ನುವ ಮಾತಿದೆ. ಆದರೆ, ನಿವಾಸ ಹಂಚಿಕೆ ಇನ್ನೂ ಆಗಿಲ್ಲ.

ಇನ್ನು ಮಾಜಿ ಡಿಸಿಎಂ ಪರಮೇಶ್ವರ್‌ ಅವರಿಗೆ 327-327ಎ ಸಂಖ್ಯೆಯ ಕೊಠಡಿ ನೀಡಲಾಗಿದೆ. ರಾಮಲಿಂಗಾರೆಡ್ಡಿ ಅವರಿಗೆ 329-329ಎ ಕೊಠಡಿ ನೀಡಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಭ್ರಷ್ಟಾಚಾರ ಲೀಗಲೈಜ್ ಮಾಡಿದ್ದೇ ಬಿಜೆಪಿ: ಕಂದಾಯ ಸಚಿವ ಕೃಷ್ಣ ಭೈರೇಗೌಡ ಕಿಡಿ

ಭ್ರಷ್ಟಾಚಾರವನ್ನು ಲೀಗಲೈಜ್ ಮಾಡಿದ್ದು, ಬಿಜೆಪಿಯವರು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ...

ತುಮಕೂರು | ಪ್ರಧಾನಿ ಆಗಲು ಯೋಗ್ಯರಾದ ಸಾಕಷ್ಟು ಮುಖಂಡರು ಕಾಂಗ್ರೆಸ್‌ನಲ್ಲಿ ಇದ್ದಾರೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗಲು ಯಾರಿದ್ದಾರೆ? ನರೇಂದ್ರಮೋದಿ ಬಿಟ್ಟರೆ ಪ್ರಧಾನಿ ಆಗುವ ಅರ್ಹತೆ ಯಾರಿಗೂ...

ಹಾಸನ ಯುವ ನಾಯಕನ ಕಾಮಕೃತ್ಯದ ಪೆನ್‌ಡ್ರೈವ್ ಆರೋಪ; ಮೌನ ಮುರಿಯದ ಮಾಜಿ ಪ್ರಧಾನಿ

ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪೆನ್‌ಡ್ರೈವ್ ಭಾರೀ ಸುದ್ದಿ ಮಾಡ್ತಾ...

ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪಿಟಿಸಿಎಲ್ ಹೋರಾಟ ಸಮಿತಿ ನಿರ್ಧಾರ

ಬೆಂಗಳೂರು: ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ...