ಉಡುಪಿ | ಕಡಲ ತೀರದ ದಲಿತ ಕುಟುಂಬಗಳ ತೆರವು ಮಾಡದಂತೆ ಜಿಲ್ಲಾಧಿಕಾರಿಗೆ ಮನವಿ

Date:

  • ದಶಕಗಳಿಂದ ವಾಸವಿರುವ ಬಡ ದಲಿತ ಕುಟುಂಬಗಳಿಗೆ ನೋಟಿಸ್
  • ಬಂದರು ಸುತ್ತುಮುತ್ತ ಅತಿಕ್ರಮಣ ಮಾಡಿಕೊಂಡುರೂ ಕ್ರಮವಿಲ್ಲ

ಉಡುಪಿ ಜಿಲ್ಲೆಯ ಮಲ್ಪೆ ಕಡಲ ತೀರದ ಪೂರ್ವ ಭಾಗದ ತೀರ ಪ್ರದೇಶದಲ್ಲಿರುವ ಹಲವು ಬಡ ದಲಿತ ಕುಟುಂಬಗಳ ಮನೆ ತರವುಗೊಳಿಸಲು ಮಲ್ಪೆ ಅಭಿವೃದ್ಧಿ ಸಮಿತಿಯ ಹೆಸರಿನಲ್ಲಿ ಉಡುಪಿ ನಗರಸಭೆಯ ಪೌರಾಯುಕ್ತರು ನೀಡಿರುವ ನೊಟೀಸ್‌ ವಿರೋಧಿಸಿ ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

“ಕಳೆದ ಹಲವು ದಶಕಗಳಿಂದ ಸಮುದ್ರ ತೀರ ಪ್ರದೇಶದಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿರುವ ದಲಿತ ಕುಟುಂಬಗಳಿಗೆ ಏಕಾಏಕಿ ಸಿಆರ್‌ಝಡ್ ನಿಯಮ ಮತ್ತು ಮುನ್ಸಿಪಾಲ್ ಆಕ್ಟ್ ಅನ್ವಯ ಕಾನೂನು ಬಾಹಿರ ಮನೆ ಎಂದು ನೊಟೀಸು ಜಾರಿಗೊಳಿಸಲಾಗಿದೆ. ಆದರೆ, ಇದೇ ಕರಾವಳಿ ಬಂದರು ಪ್ರದೇಶದ ಸುತ್ತುಮುತ್ತ ಅತಿಕ್ರಮಣ ಮಾಡಿಕೊಂಡು ದೊಡ್ಡ ದೊಡ್ಡ ಮನೆ, ರೆಸಾರ್ಟ್, ಅಂಗಡಿ ಇತ್ಯಾದಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಲಾಗಿಲ್ಲ. ಕೇವಲ ದಲಿತ ಕುಟುಂಬದ ಮೇಲೆ ನೊಟೀಸ್ ನೀಡಿ ದೌರ್ಜನ್ಯ ನಡೆಸಲಾಗುತ್ತಿದೆ” ಎಂದು ಜನಪರ ಹೋರಾಟಗಾರ ಜಯನ್ ಮಲ್ಪೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಇಲ್ಲಿ ವಾಸವಿರುವ ದಲಿತ ಕುಟುಂಬಗಳು ಮನೆ ನಂಬರ್‌, ಆಧಾರ್ ಕಾರ್ಡ್, ರೇಶನ್ ಕಾರ್ಡ್, ವಿದ್ಯುತ್‌ ಸಂಪರ್ಕ ಎಲ್ಲ ಕಾನೂನುಬದ್ಧವಾಗಿ ಪಡೆದಿದ್ದರೂ, ಅನದಿಕೃತ ಎಂಬ ನಿಯಮದಡಿ ಈ ಬಡ ದಲಿತ ಕುಟುಂಬಗಳನ್ನು ತೆರವುಗೊಳಿಸುವ ನೊಟೀಸ್ ನೀಡಿ ಭಯ ಹುಟ್ಟಿಸಲಾಗಿದೆ” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮಸೂದ್, ನೆಟ್ಟಾರು, ಫಾಸಿಲ್ ಕುಟುಂಬಕ್ಕೆ ಸಾಮಾಜಿಕ ನ್ಯಾಯ ಒದಗಿಸಿ; ಸರ್ಕಾರಕ್ಕೆ ಶಾಹಿದ್ ತೆಕ್ಕಿಲ್ ಮನವಿ

“ಜಿಲ್ಲಾಧಿಕಾರಿ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಬಡ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸಬಾರದು” ಎಂದು ಒತ್ತಾಯಿಸಿದರು.

ಈ ವೇಳೆ ಜನಪರ ಹೋರಾಟಗಾರ ಜಯನ್ ಮಲ್ಪೆ, ಅಂಬೇಡ್ಕರ್ ಯುವಸೇನೆಯ ಜಿಲ್ಲಾ ಅಧ್ಯಕ್ಷ ಹರೀಶ್ ಸಾಲ್ಯಾನ್, ಮುಖಂಡರಾದ ಗಣೇಶ್ ನೆರ್ಗಿ, ಸಂತೋಷ್ ಕಪ್ಪೆಟ್ಟು, ಕೃಷ್ಣ ಶ್ರೀಯಾನ್ ಮಲ್ಪೆ, ಗುಣವಂತ ತೊಟ್ಟಂ, ಪ್ರಸಾದ್, ಗೀತಾ, ಸಂಕಿ, ಜಲಜ, ಲಲಿಗ್ಫಿ, ಸುಂದರಿ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...