ಸರ್ಕಾರಿ ಮತ್ತು ಅನುದಾನಿತ ಕನ್ನಡ ಶಾಲೆಗಳ ಸಬಲೀಕರಣಕ್ಕೆ ಪ್ರಾಧಿಕಾರ ರಚನೆಯಾಗಬೇಕು: ನಿರಂಜನಾರಾಧ್ಯ.ವಿ.ಪಿ

Date:

Advertisements

‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯ ನನಸಾಗಬೇಕಾದರೆ, ರಾಜ್ಯದಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳು ಉಸಿರಾಡಬೇಕು. ಸರ್ಕಾರಿ ಮತ್ತು ಅನುದಾನಿತ ಕನ್ನಡ ಶಾಲೆಗಳ ಸಬಲೀಕರಣಕ್ಕೆ ‘ಕನ್ನಡ ಮಾಧ್ಯಮ ಶಾಲೆಗಳ ಸಬಲೀಕರಣ ಪ್ರಾಧಿಕಾರ’ ರಚನೆಯಾಗಬೇಕು ಎಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಒತ್ತಾಯಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ.ವಿ.ಪಿ, “ಶಾಲಾ ಹಂತದಲ್ಲಾದರೂ ಕನ್ನಡ ಶಿಕ್ಷಣದ ಮಾಧ್ಯಮವಾಗಬೇಕು. ಕನ್ನಡ ನನ್ನ ಉಸಿರು ಎನ್ನುತ್ತಲೇ, ಕನ್ನಡ ಶಾಲೆಯ ಪಕ್ಕದಲ್ಲಿಯೇ, ಆಂಗ್ಲಮಾಧ್ಯಮ ಶಾಲೆಗಳಿಗೆ ಸರ್ಕಾರ ಅನುಮತಿ ನೀಡುತ್ತಿದೆ. ರಾಜಕಾರಣಿಗಳ ನಿರಂತರ ಆತ್ಮವಂಚನೆಯ ಕೆಲಸ ನಿಲ್ಲಬೇಕು” ಎಂದು ಹೇಳಿದ್ದಾರೆ.

“ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಇದು ಸ್ವಾಗತಾರ್ಹ. ಜೂನ್ 21ರಂದು ವೇದಿಕೆ ಈ ಬಗ್ಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ವಿವರವಾದ ಮನವಿ ಸಲ್ಲಿಸಿತ್ತು. ಮನವಿಯ ಉಳಿದ ಹಕ್ಕೊತ್ತಾಯಗಳನ್ನು ಸಹ ಈಡೇರಿಸಬೇಕು” ಎಂದು ಆಗ್ರಹಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೂರು ದಿನಗಳ ಬಳಿಕ ಬಲೆಗೆ ಬಿದ್ದ ಚಿರತೆ ಸಾವು

“ರಾಜ್ಯವನ್ನು ಮೈಸೂರಿನ ಬದಲಾಗಿ ಕರ್ನಾಟಕವೆಂದು ನಾಮಕರಣ ಮಾಡಿದ 50 ವರ್ಷದ ಸಂಭ್ರಮಾಚರಣೆಯನ್ನು ಆಚರಿಸಲಾಗುತ್ತಿದೆ. ಕನ್ನಡವನ್ನು ಉಳಿಸಿ ಬೆಳೆಸಿ ಉಸಿರಾಗಿಸುವ ಮೂಲಕ ಕರ್ನಾಟಕ – ಕನ್ನಡ – ಕನ್ನಡಿಗರ ಬದುಕು ಬೆಳಗಬೇಕಿದೆ” ಎಂದಿದ್ದಾರೆ.

“ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಕಳೆದ 50 ವರ್ಷದ ಸಾಧನೆಗಳನ್ನು ಒರೆಗಲ್ಲಿಗೆ ಹಚ್ಚುವ ರಚನಾತ್ಮಕ ವಿಮರ್ಶೆ ಮತ್ತೆ ಮುಂದಿನ 50 ವರ್ಷಗಳ ಅಭಿವೃದ್ಧಿ ದಾರಿಯ ನೀಲಿ ನಕಾಶೆ ಕುರಿತು ಚರ್ಚಿಸಲು ವಿಶೇಷ ವಿಧಾನಸಭಾ ಅಧಿವೇಶನ ಕರೆಯಬೇಕು” ಎಂದು ವೇದಿಕೆ ಒತ್ತಾಯಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X