ಟಾಟಾ ಎಐಜಿ ಇನ್ಶೂರೆನ್ಸ್ ಕಂಪನಿಯ ವ್ಯವಸ್ಥಾಪಕನಿಂದ ನಿರಂತರ ಕಿರುಕುಳ: ಉದ್ಯೋಗಿ ಆತ್ಮಹತ್ಯೆ

Date:

Advertisements

ಬೆಂಗಳೂರಿನ ಖಾಸಗಿ ಇನ್ಶೂರೆನ್ಸ್ ಕಂಪನಿಯ ಕ್ಲೈಮ್ ವಿಭಾಗದಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಕಂಪನಿಯ ವ್ಯವಸ್ಥಾಪಕನ ಕಿರುಕುಳ ತಾಳಲಾರದೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನ.11ರಂದು ಆನೇಕಲ್ ಸಮೀಪದ ಹುಲ್ಲಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕನನ್ನು ಚಂದ್ರಶೇಖರ್ ಎಸ್ (30) ಎಂದು ಗುರುತಿಸಲಾಗಿದೆ. ಘಟನೆಯ ಸಂಬಂಧ ಚಂದ್ರಶೇಖರ್ ಅವರ ಸಹೋದರ ಶಶಿಕುಮಾರ್ ಅವರು ನೀಡಿದ ದೂರಿನ ಮೇರೆಗೆ ಬನ್ನೇರುಘಟ್ಟ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

‘ಕಂಪನಿಯ ಮ್ಯಾನೇಜರ್ ಆಗಿದ್ದ ಬಾಲಕೃಷ್ಣ ಎಂಬಾತ ಹೆಚ್ಚು ಹೆಚ್ಚು ಕೆಲಸ ಮಾಡುವಂತೆ ಒತ್ತಡ ಹೇರುತ್ತಿದ್ದ; ಕೆಲಸದ ಹೊರೆ ತಾಳಲಾಗದೇ ಕೆಲಸ ಬಿಡಲು ಹೋದರೆ, ಒಂದೂವರೆ ಲಕ್ಷ ಕಟ್ಟಿಕೊಡಬೇಕು ಎಂದು ಹೆದರಿಸಿದ್ದ. ನಾನು ಬಡವ. ಅಷ್ಟು ಹಣ ನನ್ನಲ್ಲಿ ಇರಲಿಲ್ಲ. ಕೆಲಸ ಮಾಡಲೂ ಸಾಧ್ಯವಿಲ್ಲದಷ್ಟು ಒತ್ತಡ, ಟಾರ್ಚರ್ ಇತ್ತು. ನನ್ನನ್ನು ಕ್ಷಮಿಸಿ’ ಎಂದು ಬರೆದು ಚಂದ್ರಶೇಖರ್ ಸಾವಿಗೀಡಾಗಿದ್ದಾರೆ.

Advertisements

ಚಂದ್ರಶೇಖರ್ ಟಾಟಾ ಎಐಜಿ ಇನ್ಶೂರೆನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರ ಸಹೋದರ ಶಶಿಕುಮಾರ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮ್ಯಾನೇಜರ್ ನೀಡುತ್ತಿದ್ದ ಕಿರುಕುಳದ ಬಗ್ಗೆ ವಿವರಿಸಿದ್ದಾರೆ. ‘ನನ್ನ ಸಹೋದರ ಚಂದ್ರಶೇಖರ್ ಬೆಂಗಳೂರು ನಗರದ ಮಿಲ್ಲರ್ಸ್‌ ರಸ್ತೆಯಲ್ಲಿರುವ ಟಾಟಾ ಎಐಜಿ ಕಂಪೆನಿಯಲ್ಲಿ ಕ್ಲೈಮ್ ವಿಭಾಗದಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದರು. ಅವರು ಗಾಯಿತ್ರಿ ಎಂಬುವವರನ್ನು ಮದುವೆಯಾಗಿದ್ದು, ಒಂದು ಹೆಣ್ಣು ಮಗು ಕೂಡ ಇದೆ. ಕಳೆದ ಆರು ತಿಂಗಳ ಹಿಂದೆ ಕಂಪನಿಯವರು ಚಂದ್ರಶೇಖರ್ ಅವರನ್ನು ತರಬೇತಿಗೆ ಕಳುಹಿಸಿದ್ದರು. ಆ ಬಳಿಕ ತಮ್ಮನಿಗೆ ತಿಂಗಳಿಗೆ 100ರಿಂದ 120 ಕ್ಲೈಮ್‌ಗಳಿಗೆ ಬದಲಾಗಿ 250ರಿಂದ 320ರವರೆಗೆ ಹೆಚ್ಚಿನ ಕ್ಲೈಮ್‌ಗಳನ್ನು ಮಾಡಬೇಕೆಂದು ಮ್ಯಾನೇಜರ್ ಆಗಿರುವ ವಿಶಾಖಪಟ್ಟಣಂ ಮೂಲದ ಬಾಲಕೃಷ್ಣ ಎಂಬುವವರು ನಿರಂತರವಾಗಿ ಒತ್ತಡ ಹಾಕುತ್ತಿದ್ದರು. ಕೆಲಸ ಬಿಡುವುದಾಗಿ ತಿಳಿಸಿದಾಗ ಹಾಗೆ ಬಿಡುವುದಿದ್ದರೆ ಕಂಪನಿಗೆ ಒಂದೂವರೆ ಲಕ್ಷ ರೂಪಾಯಿ ಕಟ್ಟಿಕೊಡಬೇಕು ಹಾಗೂ ಮೂರು ತಿಂಗಳ ಕಾಲ ನೋಟಿಸ್ ಸಮಯದವರೆಗೂ ಕೆಲಸ ಮಾಡಬೇಕು ಎಂದು ಹೆದರಿಸಿದ್ದರು. ಚಂದ್ರಶೇಖರ್ ಈ ಬಗ್ಗೆ ಮನನೊಂದಿದ್ದರು. ಅಲ್ಲದೇ, ಅದನ್ನು ತಮ್ಮ ಹತ್ತಿರದವರಿಗೂ ತಿಳಿಸಿದ್ದರು. ಈ ಬಗ್ಗೆ ಚಂದ್ರಶೇಖರ್ ಆತ್ಮಹತ್ಯೆಗೂ ಮುನ್ನ ಆತನ ಪತ್ನಿ ಗಾಯಿತ್ರಿಯವರಿಗೆ ಕಳುಹಿಸಿದ ಕೊನೆಯ ಸಂದೇಶದಲ್ಲೂ ಇದನ್ನು ಉಲ್ಲೇಖಿಸಿದ್ದಾರೆ. ನನ್ನ ತಮ್ಮನ ಸಾವಿಗೆ ಆತನ ಕಚೇರಿಯ ಮ್ಯಾನೇಜರ್ ಬಾಲಕೃಷ್ಣರವರು ಕಚೇರಿಯಲ್ಲಿ ನೀಡುತ್ತಿದ್ದ ಕಿರುಕುಳವೇ ಕಾರಣ. ಹಾಗಾಗಿ, ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಮ್ಮನ ಸಾವಿಗೆ ನ್ಯಾಯ ಒದಗಿಸಬೇಕು’ ಎಂದು ಶಶಿಕುಮಾರ್ ಬನ್ನೇರುಘಟ್ಟ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

WhatsApp Image 2023 11 21 at 2.15.44 PM
ಕೊನೆಯದಾಗಿ ಕಳುಹಿಸಿರುವ ಸಂದೇಶ

ಈ ಬಗ್ಗೆ ಈ ದಿನ.ಕಾಮ್ ಮ್ಯಾನೇಜರ್ ಬಾಲಕೃಷ್ಣರವರನ್ನು ಸಂಪರ್ಕಿಸಿದಾಗ, ‘ಡೆತ್‌ನೋಟ್‌ನಲ್ಲಿ ನನ್ನ ಹೆಸರು ಬರೆದಿರಬಹುದು. ಆದರೆ ನಾನು ಅವರಿಗೆ ಕಿರುಕುಳ ನೀಡಿಲ್ಲ. ಈ ಬಗ್ಗೆ ನೀವು ಮಾತನಾಡಬೇಕಾದರೆ ನಮ್ಮ ಕಚೇರಿಗೆ ಬಂದು, ಹೆಚ್ ಆರ್ ವಿಭಾಗದವರಲ್ಲಿ ಮಾತನಾಡಿ’ ಎಂದು ಉತ್ತರಿಸಿದ್ದಾರೆ.

WhatsApp Image 2023 11 21 at 7.08.13 PM
ಪತ್ನಿ ಮಗಳೊಂದಿಗೆ ಚಂದ್ರಶೇಖರ್

ಈ ಬಗ್ಗೆ ಈ ದಿನ.ಕಾಮ್ ಬನ್ನೇರುಘಟ್ಟ ಪೊಲೀಸರನ್ನು ಸಂಪರ್ಕಿಸಿದಾಗ, ‘ಆರೋಪಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ. ಅವರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ…ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಆದಾಗ್ಯೂ, ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X