ಶಿಡ್ಲಘಟ್ಟ | ಶ್ರದ್ಧಾಭಕ್ತಿಯಿಂದ ನೆರವೇರಿದ ತಿಪ್ಪೇನಹಳ್ಳಿ ಆಂಜನೇಯ ಸ್ವಾಮಿ ದೀಪೋತ್ಸವ

Date:

Advertisements

ಶಿಡ್ಲಘಟ್ಟ ತಾಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯತಿಯ ತಿಪ್ಪೇನಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾಪನಾ ಮಹೋತ್ಸವದ 48 ದಿನದಂದು ಗ್ರಾಮದಲ್ಲಿ ಅದ್ದೂರಿಯಾಗಿ ದೀಪೋತ್ಸವ ಕಾರ್ಯಕ್ರಮವನ್ನು ನೆರವೇರಿಸಲಾಯಿತು. 

ದೀಪೋತ್ಸವದ ಅಂಗವಾಗಿ ಸುಡುಬಿಸಿಲನ್ನು ಲೆಕ್ಕಿಸದೇ ದೀಪಗಳನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಿದ ಮಹಿಳಾ ಭಕ್ತರು, ತಿಪ್ಪೇನಹಳ್ಳಿಯಿಂದ ತುಮ್ಮನಹಳ್ಳಿವರೆಗೆ ಕಾಲ್ನಡಿಗೆಯಲ್ಲಿ ಬಂದು ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ದೀಪಗಳನ್ನು ಬೆಳಗಿಸಿ ಭಕ್ತಿ ಮೆರೆದರು.

ದೀಪೋತ್ಸವ ಕಾರ್ಯಕ್ರಮಕ್ಕೆ ಬಂದಿದ್ದ ಎಲ್ಲ ಭಕ್ತಾದಿಗಳಿಗೆ ಪ್ರಸಾದವನ್ನು ವಿತರಿಸಲಾಯಿತು. ದೀಪೋತ್ಸವದ ಅಂಗವಾಗಿ ದೇವರಿಗೆ ವಿಶೇಷ ಅಲಂಕಾರ ಮತ್ತು ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಬಳಿಕ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗಿಸಲಾಯಿತು.

Advertisements

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶೀಲಮ್ಮ ನಾಗರಾಜ್, ನರ್ಸರಿ ಲಕ್ಷ್ಮೀನಾರಾಯಣ, ಭರತ್ ಭೂಷಣ್, ಟಿ.ಆರ್.ಆನಂದ್, ಟಿಪಿ ವೆಂಕಟೇಶ್, ಟಿ.ವಿ. ದೇವರಾಜ್, ಟಿ.ವಿ.ನಾಗೇಶ್ ಹಿರಿಯರಾದ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X