ಅಂಕೋಲಾ | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್: ಓರ್ವ ಪ್ರಯಾಣಿಕ ಮೃತ್ಯು; ಐವರಿಗೆ ಗಾಯ

Date:

Advertisements

ಬೆಳ್ಳಂಬೆಳಗ್ಗೆ ಖಾಸಗಿ ಬಸ್​ವೊಂದು ಹಳ್ಳಕ್ಕೆ ಬಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಸೋಮವಾರ ಸಂಭವಿಸಿದೆ.

ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅಗಸೂರು ಬಳಿ ಖಾಸಗಿ ಸ್ಲೀಪರ್ ಬಸ್​​ ಚಾಲಕ‌ನ ನಿಯಂತ್ರಣ ತಪ್ಪಿ, ಸೇತುವೆಯಿಂದ ಹಳ್ಳಕ್ಕೆ ಅಡ್ಡಲಾಗಿ ಬಿದ್ದಿದೆ. ಬಸ್​​ನಲ್ಲಿದ್ದ 18 ಮಂದಿ ಪ್ರಯಾಣಿಕರ ಪೈಕಿ ಓರ್ವ ಮೃತಪಟ್ಟಿದ್ದು, ಐವರಿಗೆ ಗಂಭೀರ ಗಾಯಗಳಾಗಿದೆ.

ಗಾಯಾಳುಗಳಿಗೆ ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಕ್ರೇನ್ ಮೂಲಕ ಬಸ್​ ಮೇಲಕ್ಕೆತ್ತಲು ಮುಂದಾಗಿದ್ದ ವೇಳೆ ಬಸ್ಸಿನಲ್ಲಿ ಸಿಲುಕಿದ್ದ ಓರ್ವ ಪ್ರಯಾಣಿಕ ಕೊನೆಯುಸಿರೆಳೆದಿರುವುದು ಕಂಡು ಬಂದಿದೆ. ಪ್ರಯಾಣಿಕನ ಶವವನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದ್ದು, ಆತ ಎಲ್ಲಿಯವನು ಎನ್ನುವ ಕುರಿತು ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಸೈಯದ್ ಜಾಕಿರ್ ಇನಾಮ್‌ದಾರ, ಆಂಬ್ಯುಲೆನ್ಸ್ ವಾಹನಗಳು ಹಾಗೂ ಸ್ಥಳೀಯರು ಮತ್ತು ದಾರಿಹೋಕರು ತಕ್ಷಣವೇ ನೆರವಿಗೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ. ಚಾಲಕನ ನಿರ್ಲಕ್ಷ್ಯ ಮತ್ತು ಅತಿ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ಎಸ್‌ಐಟಿ ಸೇರಲು ಇಬ್ಬರು ಐಪಿಎಸ್ ಅಧಿಕಾರಿಗಳು ಹಿಂದೇಟು, ಕಾರಣವೇನು?

ಬೆಂಗಳೂರಿನಿಂದ ಬರುತ್ತಿದ್ದ ಬಸ್​​ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಹೊರಟಿದ್ದು, ಬೆಳಗಿನ ಜಾವ ಅಗಸೂರು ಬಳಿ ನಿಯಂತ್ರಣ ತಪ್ಪಿ, ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಸ್ಥಳಕ್ಕೆ ಅಂಕೋಲಾ ಠಾಣೆ ಪೊಲೀಸರು ದೌಡಾಯಿಸಿದ್ದು, ಗಾಯಾಳುಗಳನ್ನು ಸ್ಥಳಾಂತರಿಸಿದ್ದಾರೆ. ಅಲ್ಲದೇ, ಬಸ್ ಮೇಲಕ್ಕೆತ್ತುವ ಕಾರ್ಯಾಚರಣೆ ಕೈಗೊಂಡಿದ್ದಾರೆ. ಅಪಘಾತದ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X